ಕಸಾಯಿಖಾನೆ ರದ್ದುಪಡಿಸಲು ಒತ್ತಾಯ
Team Udayavani, Sep 10, 2017, 4:49 PM IST
ಚಿಂಚೋಳಿ: ಪುರಸಭೆ ವ್ಯಾಪ್ತಿಯ ಹೊರವಲಯದಲ್ಲಿ ಇರುವ ಹಾಳು ಬೊಮ್ಮನಳ್ಳಿ ಗ್ರಾಮದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಕಸಾಯಿಖಾನೆ ಪರವಾನಗಿ ರದ್ದುಪಡಿಸುವಂತೆ ಒತ್ತಾಯಿಸಿ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಭೀಮಾ ಮಿಷನ್ ಸಂಘದ ಕಾರ್ಯಕರ್ತರು, ವಿಎಚ್ಪಿ ಮುಖಂಡರು ಮತ್ತು ಗ್ರಾಮಸ್ಥರು ಶನಿವಾರ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿ ಮೇಲೆ ಬೃಹತ್ ಪ್ರತಿಭಟನಾ ರ್ಯಾಲಿ ಮತ್ತು ರಸ್ತೆ ತಡೆ ನಡೆಸಿ ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಸುಲೇಪೇಟ ಖಟ್ವಾಂಗೇಶ್ವರ ಮಠದ ಪೂಜ್ಯ ಗುರುಲಿಂಗ ಮಹಾಸ್ವಾಮೀಜಿ ಮಾತನಾಡಿ, ನಮ್ಮ ದೇಶದಲ್ಲಿ ಗೋಮಾತೆಯನ್ನು ಪೂಜಿಸುವುದು ಅನೇಕ ವರ್ಷಗಳಿಂದ ನಡೆಯುತ್ತಿರುವ ಸಂಪ್ರದಾಯವಾಗಿದೆ. ಪ್ರಾಣಿಗಳ ವಧೆ ಮಾಡುವುದು ಸರಿಯಲ್ಲ. ಯಾವುದೇ ಪ್ರಾಣಿಗಳ ಜೀವ ತೆಗೆಯುವ ಹಕ್ಕು ಯಾರಿಗೂ ಇಲ್ಲ. ಚಿಂಚೋಳಿ ಪಟ್ಟಣದ ಬೊಮ್ಮನಳ್ಳಿ ಗ್ರಾಮದ ಸರ್ವೇ ನಂ.43ರಲ್ಲಿ 2ಎಕರೆ ಜಮೀನಿನ ಪಕ್ಕದಲ್ಲಿಯೇ ಶ್ರೀ ಮೌನೇಶ್ವರ ದೇವಾಲಯ, ಚಿಂಚೋಳಿ ಸಕ್ಕರೆ ಕಾರ್ಖಾನೆ, ಫಲವತ್ತಾದ ಕೃಷಿ ಭೂಮಿಗಳಿವೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭಿಸಬೇಕಾಗಿದೆ. ಇದರಿಂದಾಗಿ ಆರೋಗ್ಯ ಮತ್ತು ಪರಿಸರ ಮೇಲೆ ತುಂಬಾ ಗಂಭೀರ ಪರಿಣಾಮ ಬೀರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರಕಾರ ಕೂಡಲೇ ಪರವಾನಗಿ ರದ್ದು ಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.
ಭೀಮಾ ಮಿಷನ್ ಅಧ್ಯಕ್ಷ ಭೀಮಶೆಟ್ಟಿ ಮುಕ್ಕಾ ಮಾತನಾಡಿ, ತಾಲೂಕಿನಲ್ಲಿ ಇಂತಹ ಕಸಾಯಿಖಾನೆ ಪ್ರಾರಂಭಿಸದಂತೆ ಜಿಲ್ಲಾಧಿಕಾರಿಗಳಿಗೆ, ಪುರಸಭೆ ಮುಖ್ಯಾಧಿ ಕಾರಿಗಳಿಗೆ ಅನೇಕ ಸಲ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗಿದೆ. ಕಸಾಯಿಖಾನೆ ಪ್ರಾರಂಭಿಸಲು ಶಾಸಕ ಡಾ| ಉಮೇಶ ಜಾಧವ್ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಆದರೂ
ಮನವಿಗೆ ಸ್ಪಂದಿಸಿರುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶ್ರೀಧರ ಪಾಟೀಲ, ಮಧುಸೂಧನ ಕಾಟಾಪುರ, ಮಾಣಿಕರಾವ್ ಗುಲಗುಂಜಿ, ಸುಧಾಕರ ಪಾಟೀಲ, ವೀರಣ್ಣ ಬೋವಿ, ಅನೀಲ ಕಂಟಿ, ವಿಎಚ್ಪಿ ಮುಖಂಡ ರೇವಣಸಿದ್ದಪ್ಪ ಮೋಘಾ ಮಾತನಾಡಿದರು. ಮಿರಿಯಾಣ, ಕಲ್ಲೂರ, ಸೋಮಲಿಂಗದಳ್ಳಿ ಗ್ರಾಮಸ್ಥರು ಬೆಂಬಲ ನೀಡಿದರು. ಮನವಿ ಪತ್ರವನ್ನು ತಹಶೀಲ್ದಾರ ಅರುಣಕುಮಾರ ಕುಲಕರ್ಣಿಗೆ ಸಲ್ಲಿಸಲಾಯಿತು. ಮಿರಿಯಾಣ ಪೊಲೀಸರು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ