ಬೆಳೆಹಾನಿ ಪರಿಹಾರ ತಾರತಮ್ಯ ತಡೆಗೆ ಒತ್ತಾಯ
Team Udayavani, Jul 10, 2021, 6:26 PM IST
ಸೇಡಂ: ಅತಿವೃಷ್ಟಿ, ಅನಾವೃಷ್ಟಿಯಿಂದ ಹೆಸರು, ಉದ್ದು, ತೊಗರಿ ಬೆಳೆಹಾನಿ ಪರಿಹಾರ ಕಲ್ಪಿಸುವಲ್ಲಿ ಆಗಿರುವ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶೆಟ್ಟಿ) ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿ, ಮನವಿ ಪತ್ರ ಸಲ್ಲಿಸಲಾಯಿತು.
ಕಳೆದ ವರ್ಷ ಅತಿವೃಷ್ಟಿ-ಅನಾವೃಷ್ಟಿಯಿಂದ ರೈತರು ಬೆಳೆ ನಷ್ಟ ಅನುಭವಿಸಿದ್ದರು. ಸರಕಾರ ಪರಿಹಾರವನ್ನು ಘೋಷಿಸಿತ್ತು. ಆದರೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಕೆಲವರಿಗೆ 25 ಸಾವಿರ ರೂ., 30 ಸಾವಿರ ಮತ್ತು 50 ಸಾವಿರ ರೂ. ನೀಡಲಾಗುತ್ತಿದೆ ಇದರಲ್ಲಿ ಅತಿ ಸಣ್ಣ ರೈತರಿಗೆ ಯಾವ ಪರಿಹಾರವೂ ದೊರೆಯುತ್ತಿಲ್ಲ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಕರವೇ ಅಧ್ಯಕ್ಷ ರಾಮಚಂದ್ರ ಗುತ್ತೇದಾರ, ಮಹೇಶ ಪಾಟೀಲ ಬಟಗೇರಾ, ಶ್ರೀನಿವಾಸರೆಡ್ಡಿ ಮದನಾ, ದೇವು ನಾಟೀಕಾರ, ಭೀಮಯ್ಯ ಗುತ್ತೇದಾರ, ಪ್ರವೀಣ ಕೋಡ್ಲಾ, ಮಲ್ಲಿಕಾರ್ಜುನ ಬೆನಕನಹಳ್ಳಿ, ರವಿಸಿಂಗ ಇಮಡಾಪುರ, ರವಿ ಗುತ್ತೇದಾರ, ದೇವಿಂದ್ರ ಹಂದರಕಿ, ಗುಂಡಪ್ಪ ಪೂಜಾರಿ, ವೆಂಕಟೇಶ ಕೋಡ್ಲಾ, ಚನ್ನಬಸಪ್ಪ ಬೆನಕನಹಳ್ಳಿ, ವಿರೇಶ ಕೋಟ್ರಕಿ, ಸುಭಾಶ ನಾಟೀಕಾರ, ಮಹೇಶ ಕೋಡ್ಲಾ, ಶ್ರೀನಾಥ ಕಲಕಂಭ, ವೆಂಕಟರೆಡ್ಡಿ, ಭಗವಾನ ಕೊಲ್ಲೂರ್, ಅಂಜಿಲಪ್ಪ ಬೋಯಿನ್, ಆಶಪ್ಪ ನಾಟಿಕಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?