ಬಸವನಹುಳು ಹಾನಿಗೆ ಪರಿಹಾರಕ್ಕೆ ಒತ್ತಾಯ
Team Udayavani, Jul 25, 2022, 3:16 PM IST
ಕಲಬುರಗಿ: ಬಸವನಹುಳು ಹಾವಳಿಗೆ ಜಿಲ್ಲೆಯ ಆಳಂದ, ಅಫಜಲಪುರ, ಚಿಂಚೋಳಿ ಸೇರಿದಂತೆ ಹಲವು ತಾಲೂಕುಗಳ ರೈತರು ನಲುಗಿದ್ದು, ಬಿತ್ತನೆ ಮಾಡಿದ ಬೆಳೆ ಸಂಪೂರ್ಣ ಹಾನಿಯಾಗಿದ್ದರಿಂದ ಎಕರೆಗೆ 15ಸಾವಿರ ರೂ. ಸೂಕ್ತ ಪರಿಹಾರ ನೀಡುವಂತೆ ಪ್ರಗತಿ ಪರ ರೈತ, ಕಾಂಗ್ರೆಸ್ ಮುಖಂಡ ಹಣಮಂತರಾವ ಭೂಸನೂರ ಆಗ್ರಹಿಸಿದ್ದಾರೆ.
ಆಳಂದ ತಾಲೂಕಿನ ಧುತ್ತರಗಾಂವ್, ಕಡಗಂಚಿ, ಕಿಣ್ಣಿ ಸುಲ್ತಾನ್, ಕೊಡಲ ಹಂಗರಗಾ ಸೇರಿದಂತೆ ಬಸವನಹುಳು ಬಾಧೆಯಿಂದ ಪೀಡಿತವಾಗಿರುವ ಗ್ರಾಮಗಳ ರೈತರ ಹೊಲಗದ್ದೆಗಳಿಗೆ ಭೇಟಿ ನೀಡಿ, ಸೋಯಾಬೀನ್ ಸೇರಿದಂತೆ ಉದ್ದು, ಹೆಸರು ಪ್ರತಿ ಎಕರೆಗೆ ರೈತ ಕನಿಷ್ಟ 10 ರಿಂದ 12 ಸಾವಿರ ರೂ. ವೆಚ್ಚ ಮಾಡಿದ್ದಾನೆ. ಬಿತ್ತಿದ ಫಸಲು ಹೀಗೆ ಹಾಳಾದರೆ ರೈತರು ಸಾಲಸೋಲ ಮಾಡಿಕೊಂಡು ತೊಂದರೆಗೆ ಒಳಗಾಗೋದು ನಿಶ್ಚಿತ. ಹೀಗಾಗಿ ಈ ಹಂತದಲ್ಲಿ ಸರ್ಕಾರ ತಕ್ಷಣ ರೈತರಿಗೆ ನೆರವಿಗೆ ಬರಲಿ ಎಂದು ಒತ್ತಾಯಿಸಿದ್ದಾರೆ.
ಹಾನಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ತಕ್ಷಣ ಕೃಷಿ ಸಚಿವರು ಬಿ.ಸಿ. ಪಾಟೀಲ, ಜಿಲ್ಲಾ ಸಚಿವ ಮುರುಗೇಶ ನಿರಾಣಿ ಹುಳು ಪೀಡಿತ ಹೊಲಗಳಿಗೆ ಭೇಟಿ ನೀಡಲಿ. ಜಿಲ್ಲಾಡಳಿತ, ಕೃಷಿ ಇಲಾಖೆಯೂ ಭೇಟಿ ನೀಡಿ ಸಮೀಕ್ಷೆ ಮಾಡಲಿ. ಒಟ್ಟಾರೆ ರೈತರಿಗೆ ಹಾನಿಯಾದ ಫಸಲಿಗೆ ಪರಿಹಾರ ದೊರಕಬೇಕೆಂದರು. ಪರಿಸ್ಥಿತಿ ಗಂಭೀರವಾಗಿದ್ದು ಯಾರೊಬ್ಬರೂ ರೈತರ ನೋವಿಗೆ ಸ್ಪಂದಿಸುತ್ತಿಲ್ಲವೆಂದು ಭೂಸನೂರ್ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್