ಪ್ರಾದೇಶಿಕ ಆಯುಕ್ತರಿಂದ ಕಾಮಗಾರಿ ಪರಿಶೀಲನೆ
Team Udayavani, Sep 25, 2022, 1:02 PM IST
ಚಿಂಚೋಳಿ: ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ಕೆಕೆಆರ್ ಡಿಬಿ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಕೆಕೆಆರ್ಡಿಬಿ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ, ಗುಣಮಟ್ಟ ಕಾಪಾಡಿಕೊಳ್ಳುವಂತೆ ಲೋಕೋಪಯೋಗಿ ಇಲಾಖೆ ಎಇಇಗೆ ಸೂಚನೆ ನೀಡಿದರು.
ಸುಲೇಪೇಟ ಗ್ರಾಮದ ಅಂಬರೀಶ ಹಲಚೇರಿ ಮನೆಯಿಂದ ಗುರುನಂಜೇಶ್ವರ ಶಾಲೆ, ಮಹೇಶ ತಾರಾಪುರ ಹಳೆ ಅಂಗಡಿಯಿಂದ ಮಿಠಾಯಿ ಹೋಟೆಲ್, ಗುರುನಂಜೇಶ್ವರ ಶಾಲೆಯಿಂದ ಮೌಲಾ ಹೋಟೆಲ್, ಮಹಾಂತೇಶ ಪೆಟ್ರೋಲ್ ವರೆಗೆ ಕೆಕೆಆರ್ಡಿಬಿ ವತಿಯಿಂದ ಕೈಗೊಂಡಿರುವ ಒಳಚರಂಡಿ ಮತ್ತು ಸಿಮೆಂಟ್ ಕಾಮಗಾರಿಗಳು ಕಳಪೆಮಟ್ಟದಿಂದ ನಡೆಯುತ್ತಿವೆ ಎಂದು ಸುಲೇಪೇಟ ಗ್ರಾಮಸ್ಥರು ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ಎಲ್ಲ ಕಾಮಗಾರಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಕೆಕೆಆರ್ಡಿಬಿಯಿಂದ ನಡೆಯುವ ಎಲ್ಲ ಕೆಲಸಗಳು ಗುಣಮಟ್ಟದಿಂದ ನಡೆಯಬೇಕು. ಅನುದಾನ ದುರ್ಬಳಕೆಯಾದರೆ ಇಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಇಇ ಆನಂದ ಕಟ್ಟಿ ಮತ್ತು ಸಹಾಯಕ ಇಂಜಿನಿಯರ್ಗಳಿಗೆ ಎಚ್ಚರಿಕೆ ನೀಡಿದರು.
ತಹಶೀಲ್ದಾರ್ ಅಂಜುಮ ತಬಸುಮ, ಗ್ರೇಡ್ 2 ತಹಶೀಲ್ದಾರ್ ವೆಂಕಟೇಶ ದುಗ್ಗನ, ಎಇಇ ಆನಂದ ಕಟ್ಟಿ, ಪ್ರಮುಖರಾದ ದಯಾನಂದ ರೆಮ್ಮಣ್ಣಿ, ವಿಶ್ವನಾಥ ಸಜ್ಜನಶೆಟ್ಟಿ, ಸಿದ್ಧಪ್ಪ ಹುಮನಾಬಾದ, ಶರಣು ಪಡಶೆಟ್ಟಿ, ಮೌಲಾ ಹೋಟೆಲ್, ಮಹಮ್ಮದ ಅಲಿ, ನಾಗೇಶ ಹಾಲಳ್ಳಿ, ಸುರೇಶ ಬಂದಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ