ಕಾಗಿಣಾ ನದಿಯಲ್ಲಿ ಜಾಕ್ವೆಲ್‌ ಅಳವಡಿಸಿ


Team Udayavani, Mar 16, 2019, 6:37 AM IST

gul-5.jpg

ವಾಡಿ: ಕೈಗಾರಿಕಾ ನಗರಿಗೆ ಪ್ರತಿ ವರ್ಷದ ಬೇಸಿಗೆ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಶಾಶ್ವತ ಪರಿಹಾರಕ್ಕಾಗಿ ಕಾಗಿಣಾ ನದಿಯಲ್ಲಿ ಜಾಕ್ವೆಲ್‌ ಅಳವಡಿಸಬೇಕು ಎಂದು ಆಗ್ರಹಿಸಿ ಸೋಷಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ (ಎಸ್‌ಯುಸಿಐ) ಕಮ್ಯುನಿಸ್ಟ್‌ ಪಕ್ಷದ ಕಾರ್ಯಕರ್ತರು ಶುಕ್ರವಾರ ಪುರಸಭೆ ಎದುರು ಪ್ರತಿಭಟನೆ ನಡೆಸಿದರು. 

ಸುಮಾರು 50 ಸಾವಿರ ಜನಸಂಖ್ಯೆ ಹೊಂದಿರುವ ಪಟ್ಟಣಕ್ಕೆ ಕುಂದನೂರು ಸಮೀಪದ ಭೀಮಾನದಿ ಜಲಮೂಲವಾಗಿದೆ. ಇದು ಬೇಸಿಗೆ ಕಾಲದಲ್ಲಿ ಸಂಪೂರ್ಣ ಬತ್ತಿ ಹೋಗುತ್ತದೆ. ಇದರಿಂದ ಜನರು ನೀರಿಗಾಗಿ ಹಗಲು ರಾತ್ರಿ ಪರದಾಡುವಂತೆ ಆಗಿದೆ. ಆದರೆ ಸ್ಥಳೀಯ ಎಸಿಸಿ ಸಿಮೆಂಟ್‌ ಕಂಪನಿಗೆ ನೀರಿನ ಕೊರತೆ ಆಗುವುದಿಲ್ಲ. ಕಾರಣ ಸಮೀಪದ ಇಂಗಳಗಿ ಬಳಿಯ ಕಾಗಿಣಾ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಿಸಲಾಗಿದೆ. ಬೆಣ್ಣೆತೋರಾ ಜಲಾಶಯದಿಂದ ಹರಿಸಲಾದ ಅಪಾರ ಪ್ರಮಾಣದ ನೀರು ಕಾಗಿಣಾ ನದಿಯಲ್ಲಿ ಸಂಗ್ರಹವಿರುತ್ತದೆ. ಪುರಸಭೆಗೆ ಸೇರಿದ ಇನ್ನೊಂದು ಜಾಕ್ವೆಲ್‌ ಇಂಗಳಗಿ ಕಾಗಿಣಾ ನದಿಯಲ್ಲಿ ಅಳವಡಿಸುವ ಮಹತ್ವದ ಯೋಜನೆ ರೂಪಿಸಿದರೆ, ಬೇಸಿಗೆ ಕಾಲವನ್ನು ಸರಳವಾಗಿ ಎದುರಿಸಬಹುದು. ಆದರೆ, ಈ ಕುರಿತು ಪುರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಆಲೋಚನೆ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೆಟ್ಟಿರುವ ಪಟ್ಟಣದ ಎಲ್ಲ ಬೋರ್‌ವೆಲ್‌ಗ‌ಳ ದುರಸ್ತಿ ಮಾಡಿ. ಅಗತ್ಯವಿರುವ ಬಡಾವಣೆಗಳಲ್ಲಿ ಹೊಸದಾಗಿ ಬೋರ್‌ವೆಲ್‌ ಕೊರೆಸಿ. ನೇತಾಜಿ ನಗರ ಬಡಾವಣೆಯಲ್ಲಿ ಹೊಸ ಬೋರ್‌ವೆಲ್‌ ಮತ್ತು ನೀರಿನ ಗುಮ್ಮಿ ನಿರ್ಮಿಸಿ. ನೀರು ಶುದ್ಧೀಕರಣ ಘಟಕವಿದ್ದರೂ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ. ನೀರು ಶುದ್ಧೀಕರಿಸಿಯೇ ಬಡಾವಣೆಗಳಿಗೆ ಪೂರೈಸಬೇಕು ಎಂದು ಒತ್ತಾಯಿಸಿದರು. 

ಎಸ್‌ಯುಸಿಐ ಮುಖಂಡರಾದ ರಾಘವೇಂದ್ರ ಅಲ್ಲಿಪುರ, ಶ್ರೀಶರಣ ಹೊಸಮನಿ, ಶರಣು ಹೇರೂರ, ರಾಜು ಒಡೆಯರಾಜ, ಸಿದ್ಧಯ್ಯಶಾಸ್ತ್ರೀ ನಂದೂರಮಠ, ಶ್ರೀಶೈಲ ಕೆಂಚಗುಂಡಿ, ಮಲ್ಲಿನಾಥ ಹುಂಡೇಕಲ್‌, ಗೌತಮ ಪರತೂರಕರ, ಆರ್‌.ಜಿ. ವೆಂಕಟೇಶ, ಬಸವರಾಜ ನಾಟೇಕರ, ಅರುಣಕುಮಾರ ಹಿರೇಬನಾರ ಹಾಗೂ ವಿವಿಧ ಬಡಾವಣೆಗಳ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪುರಸಭೆ ಮುಖ್ಯಾಧಿಕಾರಿಗೆ ಬರೆದ ಮನವಿ ಪತ್ರವನ್ನು ವ್ಯವಸ್ಥಾಪಕ ಮಲ್ಲೇಶ ಅಕ್ಕರಕಿ ಸ್ವೀಕರಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.