ಮೆಲುಕು : 8 ಬಾರಿ ಗೆದ್ದು ಸಿಎಂ ಆದ ಮೇಲೆ ಸೋತರು!


Team Udayavani, Mar 16, 2018, 10:05 AM IST

Dharam-Singh-600.jpg

ದಿವಂಗತ ಎನ್‌.  ಧರಂಸಿಂಗ್‌ ಅವರು ಮುಖ್ಯಮಂತ್ರಿ ಆಗುವವರೆಗೂ ಸತತ ಎಂಟು ಸಲ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದರು. ಆದರೆ ಮುಖ್ಯಮಂತ್ರಿಯಾದ ನಂತರ ನಡೆದ ಚುನಾವಣೆಯಲ್ಲಿ ಸೋತರು. ಸಿಎಂ ಆದ ನಂತರ ಸೋಲು ಅನುಭವಿಸಿರುವುದು ರಾಜ್ಯದ ರಾಜಕಾರಣದಲ್ಲಿ ಒಂದು ಅಪರೂಪವೇ ಸರಿ. ಜೇವರ್ಗಿಯಿಂದ ಎಂಟನೇ ಸಲ ಆಯ್ಕೆಯಾದಾಗ 20 ತಿಂಗಳ ಕಾಲ ಧರಂಸಿಂಗ್‌ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಿದರು.

1972ರಿಂದ 2004ರವರೆಗೆ ಧರಂಸಿಂಗ್‌ ಸತತವಾಗಿ ಶಾಸನಸಭೆಗೆ ಚುನಾಯಿತರಾದರು. 2004ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾದ ಅವರು 2006ರಲ್ಲಿ ಕೆಳಗಿಳಿದರು. 2008ರ ಚುನಾವಣೆವರೆಗೂ ಸೋಲಿಲ್ಲದ ಸರದಾರ ಎನ್ನುವ ಖ್ಯಾತಿ ಪಡೆದಿದ್ದರು. ಆದರೆ 2008ರಲ್ಲಿ ಕೇವಲ 52 ಮತಗಳಿಂದ ಧರಂಸಿಂಗ್‌ ಅವರು ಬಿಜೆಪಿಯ ದೊಡ್ಡಪ್ಪ ಗೌಡ ಪಾಟೀಲ ನರಿಬೋಳ ಎದುರು ಸೋತರು.

ಪ್ರತಿ ಸಲ ಚುನಾವಣೆ ಬಂದಾಗ ಈ ಸಲ ಧರಂಸಿಂಗ್‌ ಅವರು ಸೋಲುತ್ತಾರೆ ಎನ್ನಲಾಗುತ್ತಿತ್ತು. ಆದರೆ ಕೊನೆಗೆ ಧರಂಸಿಂಗ್‌ ಅವರೇ ಗೆದ್ದು ಬರುತ್ತಿದ್ದರು. ಧರಂಸಿಂಗ್‌ ಅವರ ಜನಾಂಗದ ರಜಪೂತ ಸಮಾಜದವರು ಜೇವರ್ಗಿ ತಾಲೂಕಿನಲ್ಲಿ ಎರಡು ಸಾವಿರ ಮತದಾರರಿಲ್ಲ. ಆದರೆ ಜಾತ್ಯತೀತ ನಾಯಕ ಎಂದೇ ಖ್ಯಾತಿ ಪಡೆದಿದ್ದ ಧರಂಸಿಂಗ್‌ ಎಲ್ಲರ ಬೆಂಬಲದೊಂದಿಗೆ ಆಯ್ಕೆಯಾಗುತ್ತಲೇ ಬರುತ್ತಿದ್ದರು.

ಧರಂಸಿಂಗ್‌ ಸಾಧಿಸಿದ 8 ಗೆಲುವಿನಲ್ಲಿ 10 ಸಾವಿರಕ್ಕೂ ಅಧಿಕ ಮತಗಳಿಂದ ಒಮ್ಮೆಯೂ ಗೆದ್ದಿಲ್ಲ. ಎರಡು ಸಲವಂತೂ ಕೇವಲ 2 ಸಾವಿರ ಮತಗಳಿಂದ ಗೆಲುವು ಸಾಧಿಸಿರುವುದು ಮತ್ತೂಂದು ವಿಶೇಷ. 2008ರಲ್ಲಿ ಸೋತ ನಂತರ 2009ರ ಲೋಕಸಭಾ ಚುನಾವಣೆಯಲ್ಲಿ ಬೀದರ್‌  ಕ್ಷೇತ್ರದಿಂದ ಗೆದ್ದು ಸಂಸದರಾದರು.

ಸ್ವಾತಂತ್ರ್ಯಾನಂತರ ನಡೆದ 13 ಚುನಾವಣೆಗಳಲ್ಲಿ ಜೇವರ್ಗಿ ಕ್ಷೇತ್ರದ ಜನರು ಕೇವಲ ಆರು ಜನರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಇದು ಕೂಡ ದಾಖಲೆ. 1957ರಲ್ಲಿ ಶರಣಗೌಡ ಸಿದ್ರಾಮಯ್ಯ, 1962ರಲ್ಲಿ ನೀಲಕಂಠಪ್ಪ ಶರಣಪ್ಪ, 1967ರಲ್ಲಿ ಎನ್‌. ಸಿದ್ರಾಮಗೌಡ, 1972ರಿಂದ 2004ರವರೆಗೆ ಧರಂಸಿಂಗ್‌ ಹಾಗೂ 2008ರಲ್ಲಿ ದೊಡ್ಡಪ್ಪ ಗೌಡ ಪಾಟೀಲ ನರಿಬೋಳ ಹಾಗೂ 2013ರಲ್ಲಿ ಧರಂಸಿಂಗ್‌ ಪುತ್ರ ಡಾ.ಅಜಯಸಿಂಗ್‌ ಚುನಾಯಿತರಾಗಿದ್ದಾರೆ. ಜೇವರ್ಗಿ ಕ್ಷೇತ್ರದಲ್ಲಿ 1957 ಮತ್ತು 1967ರಲ್ಲಿ ಸ್ವತಂತ್ರ ಅಭ್ಯರ್ಥಿ ಬಿಟ್ಟರೆ ಉಳಿದ 10 ಸಲ ಕಾಂಗ್ರೆಸ್‌ ಗೆದ್ದಿದೆ. ಬಿಜೆಪಿ ಒಂದು ಸಲ ಗೆದ್ದಿದೆ. ವಿಪಕ್ಷಗಳು ತಂತ್ರಗಾರಿಕೆ ರೂಪಿಸಿದ್ದರೂ ಧರಂ ಸಿಂಗ್‌ ಅವುಗಳನ್ನು ನಿರುಪಯುಕ್ತಗೊಳಿಸಿ ಆಯ್ಕೆಯಾಗುತ್ತಾ ಬರುತ್ತಿದ್ದರು.

– ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.