ಪೌರ ಕಾರ್ಮಿಕರಿಗೆ ಐರಿಸ್‌ ಹಾಜರಾತಿ

ಬಯೋಮೆಟ್ರಿಕ್‌ ಜತೆಗೆ ನೂತನ ವ್ಯವಸ್ಥೆ |ಹಾಜರಾತಿ ತಾಪತ್ರಯ ತಪ್ಪಿಸಲು ಪಾಲಿಕೆ ಕ್ರಮ

Team Udayavani, Mar 28, 2021, 8:28 PM IST

xbdzsa

ಕಲಬುರಗಿ: ನೌಕರರ ಕಾರ್ಯಕ್ಷಮತೆ ಕಾಯ್ದುಕೊಳ್ಳುವ ಸಲುವಾಗಿ ಮಹಾನಗರ ಪಾಲಿಕೆ ಬಯೋಮೆಟ್ರಿಕ್‌ ಜತೆಗೆ ಐರಿಸ್‌ ಸ್ಕ್ಯಾನಿಂಗ್ (ಕಣ್ಣಿನ ದೃಷ್ಟಿ ಗುರುತಿಸುವಿಕೆ) ವ್ಯವಸ್ಥೆ ಜಾರಿಗೆ ತರುತ್ತಿದೆ. ಇದು ಮೈಗಳ್ಳ ಸಿಬ್ಬಂದಿಯನ್ನು ಸರಿ ದಾರಿಗೆ ತರುವುದರೊಂದಿಗೆ ಅವರ ಸುರಕ್ಷತೆ ಮತ್ತು ಹಾಜರಾತಿಗೂ ಅಭಯ ನೀಡಲಿದೆ.

ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ಬಯೋಮೆಟ್ರಿಕ್‌ (ಬೆರಳಚ್ಚು) ಹಾಜರಾತಿ ವ್ಯವಸ್ಥೆ ಜಾರಿಯಲ್ಲಿದೆ. ಕೊರೊನಾ ಕಾರಣ ಕಳೆದ ಒಂದು ವರ್ಷದಿಂದ ಬಯೋಮೆಟ್ರಿಕ್‌ ಸ್ಥಗಿತಗೊಳಿಸಲಾಗಿದೆ. ಮಷಿನ್‌ ಮೇಲೆ ಎಲ್ಲರೂ ಬೆರಳಿಟ್ಟು ಬಳಕೆ ಮಾಡುವುದರಿಂದ ಸೋಂಕು ಹರಡುವ ಭೀತಿಯಿಂದ ಇದನ್ನು ರದ್ದು ಮಾಡಲಾಗಿದೆ. ಈಗ ಮತ್ತೆ ಬಯೋಮೆಟ್ರಿಕ್‌ ಹಾಜರಾತಿ ಪುನಾರಂಭಿಸಲಾಗುತ್ತಿದೆ. ಇದರ ಜತೆಗೆ ನೂತನವಾದ ಐರಿಸ್‌ ಸ್ಕ್ಯಾನರ್‌ಗಳನ್ನು ಅಳವಡಿಸಲು ಪಾಲಿಕೆ ಮುಂದಾಗಿದೆ.

ಪೌರ ಕಾರ್ಮಿಕರಿಗೆ ಅಭಯ: ಮಹಾ ನಗರವನ್ನು ಸುಂದರ ಮತ್ತು ಸ್ವತ್ಛವಾಗಿ ನೋಡಿಕೊಳ್ಳುವುದು ಪಾಲಿಕೆ ಹೊಣೆ. ಈ ಹೊಣೆಯನ್ನು ಬಹುಪಾಲು ನಿಭಾಯಿಸುವುದೇ ಪೌರ ಕಾರ್ಮಿಕರು. ನಿತ್ಯ ನಗರ ಸ್ವತ್ಛತೆಗೆ ಪೌರ ಕಾರ್ಮಿಕರು ತಮ್ಮ ಕೈಗಳನ್ನು ಸವೆಸುತ್ತಾರೆ. ಹೀಗೆ ದಿನ ಸವೆಯುವ ಕೈಗಳಲ್ಲಿ ಗೆರೆಗಳು ಮಾಸುತ್ತಾ ಹೋಗುತ್ತದೆ. ಇದರಿಂದ ಬಯೋಮೆಟ್ರಿಕ್‌ ಹಾಜರಾತಿ ನೀಡಲು ಪಡಿಪಾಟಲು ಪಡಬೇಕಾಗುತ್ತದೆ.

ಕೆಲವೊಮ್ಮೆ ಯಂತ್ರದಲ್ಲಿ ಬೆರಳಚ್ಚು ಬೀಳದೆ ಕೆಲಸ ಮಾಡಿದರೂ ಗೈರು ಎಂದು ದಾಖಲಾಗಿದ್ದು ಇದೆ. ಇಂತಹ ತಾಪತ್ರಯವನ್ನೂ ಐರಿಸ್‌ ಸ್ಕ್ಯಾನಿಂಗ್‌ ವ್ಯವಸ್ಥೆ ತಪ್ಪಿಸಲಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಯ ಅನಗತ್ಯ, ಅನಧಿಕೃತ ರಜೆಗಳನ್ನು ತಪ್ಪಿಸಲು ಆಧುನಿಕ ಹಾಜರಾತಿ ವ್ಯವಸ್ಥೆಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಬಯೋಮೆಟ್ರಿಕ್‌ ಜತೆಗೆ ಐರಿಸ್‌ ಸ್ಕ್ಯಾನಿಂಗ್‌ ವ್ಯವಸ್ಥೆ ಅನುಷ್ಠಾನ ಮಾಡಲಾಗುತ್ತಿದೆ.

ನಿತ್ಯದ ಹಾಜರಾತಿಗೆ ಬೆರಳಚ್ಚು ನೀಡಲು ಸಾಧ್ಯವಾಗದ ನೌಕರರು ಮತ್ತು ಸಿಬ್ಬಂದಿ ಐರಿಸ್‌ ಬಳಸಬಹುದು. ಮುಖ್ಯವಾಗಿ ಈ ಐರಿಸ್‌ ಸ್ಕ್ಯಾನಿಂಗ್‌ ವ್ಯವಸ್ಥೆಯು ಪೌರ ಕಾರ್ಮಿಕರಿಗೆ ಹಾಜರಾತಿ ಅಭಯ ನೀಡಲಿದೆ. ಅವರ ಹಿತದೃಷ್ಟಿಯಿಂದಲೇ ಐರಿಸ್‌ ಯಂತ್ರಗಳನ್ನು ಅಳವಡಿಕೆ ಮಾಡಲಾಗುತ್ತದೆ ಎಂದು ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು.

ಸುರಕ್ಷತೆ ಹೇಗೆ?: ಬಯೋಮೆಟ್ರಿಕ್‌ ಹಾಜರಾತಿ ಕೊಡುವಾಗ ಯಂತ್ರದ ಮೇಲೆ ಬೆರಳಿನ ಸ್ಪರ್ಶ ಆಗಿಯೇ ಆಗುತ್ತದೆ. ಸ್ಪರ್ಶ ಮಾಡದೆ ಹಾಜರಿಯೇ ಬೀಳುವುದಿಲ್ಲ. ಈ ವ್ಯವಸ್ಥೆಯಿಂದ ಕೊರೊನಾ ಹರಡುವ ಸಂಭವ ಹೆಚ್ಚು. ಇದೇ ಕಾರಣಕ್ಕಾಗಿ ಬಯೋಮೆಟ್ರಿಕ್‌ ಹಾಜರಾತಿ ಬಂದ್‌ ಮಾಡಲಾಗಿತ್ತು. ಆದರೆ, ಐರಿಸ್‌ ವ್ಯವಸ್ಥೆ ಇಂತಹ ಯಾವ ಭೀತಿಗೆ ಆಸ್ಪದ ಕೊಡುವುದಿಲ್ಲ. ಐರಿಸ್‌ ಸ್ಕ್ಯಾನರ್‌ ಯಂತ್ರದ ಎದುರು ನಿಂತರೆ ಸಾಕು ಕಣ್ಣಿನ ಗೆರೆ ಗುರುತಿಸುತ್ತದೆ. ಯಂತ್ರಕ್ಕೆ ಶಾರೀರಿಕ ಸಂಪರ್ಕದ ಅವಶ್ಯಕತೆ ಬೀಳುವುದಿಲ್ಲ. ಯಾವುದೇ ಸ್ಪರ್ಶ ಇಲ್ಲದೇ ಹಾಜರಾತಿ ನೀಡಬಹುದಾಗಿದೆ. ದೂರದಿಂದಲೇ ಕಣ್ಣಿನ ಸ್ಕ್ಯಾನ್‌ ಮಾಡುವ ಮೂಲಕವೇ ನೌಕರರ ಹಾಜರಿ ದಾಖಲಾಗುತ್ತದೆ. ಇದು ಹಾಜರಿ ಸಮಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸುರಕ್ಷತೆ ಒದಗಿಸುತ್ತದೆ ಎನ್ನುವುದು ಅಧಿಕಾರಿಗಳ ವಿವರಣೆ.

ರಂಗಪ್ಪ ಗಧಾರ 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.