ಅವ್ಯವಹಾರ: ತಡೋಳಾ ಗ್ರಾಪಂ ಕಚೇರಿ ಎದುರು ಧರಣಿ
Team Udayavani, Jan 28, 2020, 11:57 AM IST
ಆಳಂದ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಡೋಳಾ ಗ್ರಾಪಂ ಕಚೇರಿ ಎದುರು ಪ್ರಗತಿಪರರು ಹಾಗೂ ಆಯ್ದ ಸದಸ್ಯರು ಸೇರಿ ಸೋಮವಾರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.
14ನೇ ಹಣಕಾಸು ಅಡಿಯಲ್ಲಿ ಖಂಡಾಳ ಗ್ರಾಮ ವಿಕಾಸ ಅನುದಾನ 7.5 ಲಕ್ಷ ಹಣ ಎತ್ತಿ ಹಾಕಿದ್ದು, ಮರು ಪಾವತಿಸಲು ಕಳೆದ ಮೂರು ವರ್ಷದ ಹಿಂದೆ ಪ್ರತಿಭಟನೆ ಕೈಗೊಂಡಾಗ ಲೆಕ್ಕ ವಿಭಾಗದಿಂದ 6.76 ಲಕ್ಷ ರೂ. ಅವ್ಯವಹಾರ ಪತ್ತೆಯಾಗಿತ್ತು. ಆಗ ಸಂಬಂಧಿ ತ ಅಭಿವೃದ್ಧಿ ಅಧಿಕಾರಿಯನ್ನು ವರ್ಗಾವಣೆ ಕೈಗೊಳ್ಳಲಾಯಿತು. ಎರಡು ವರ್ಷದ ಬಳಿಕ ಇದೇ ಅಧಿಕಾರಿಯನ್ನು ಮತ್ತೆ ತಡೋಳಾ ಗ್ರಾಪಂಗೆ ನಿಯೋಜಿಸಲಾಗಿದೆ. ಈ ನಿಯೋಜಿತ ಅಧಿಕಾರಿ 2 ತಿಂಗಳಲ್ಲೇ ಮತ್ತೆ 2 ಲಕ್ಷ ರೂಪಾಯಿ ಅವ್ಯವಹಾರ ಎಸಗಿದ್ದು, ಇಂಥ ಅಧಿಕಾರಿಯನ್ನ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಮೊಹ್ಮದ್ ಸಲೀಂ ಮನವಿ ಸ್ವೀಕರಿಸಿ, ಎರಡು ದಿನಗಳಲ್ಲಿ ಸಮಿತಿ ರಚಿಸಿ ಗ್ರಾಪಂ ಅವ್ಯವಹಾರ ಪರಿಶೀಲಿಸಲಾಗುವುದು. ಧರಣಿ ಹಿಂದಕ್ಕೆ ಪಡೆಯಬೇಕು ಎಂದು ಮನವಿ ಮಾಡಿದರು. ಆದರೆ, ಧರಣಿನಿರತರು ಸಮಿತಿ ರಚಿಸಿ ಅವ್ಯವಹಾರ ಕುರಿತು ಪರಿಶೀಲನೆ ಆರಂಭಿಸುವ ತನಕ್ಕ ಧರಣಿ ಮುಂದುವರಿಸಲಾಗುವುದು ಎಂದು ಪಟ್ಟು ಹಿಡಿದರು.
ಗ್ರಾಮದ ಹಿರಿಯ ಮುಖಂಡ ಮೌಲಾ ಮುಲ್ಲಾ, ಅಜೀತ ಆರ್. ಪಾಟೀಲ, ಮಹಾವೀರ ಕಾಂಬಳೆ, ಮಹಾದೇವ ಸಿಂದೆ, ಮೈಲಾರಿ ಜೋಗೆ, ಆಶಾ ಕ ಮುಲ್ಲಾ, ಗ್ರಾಪಂ ಸದಸ್ಯ ಉಮೇಶ ಘೋಡಕೆ, ಯಾದವ ಜಾಧವ, ಗ್ರಾಪಂ ಸದಸ್ಯ ಅಜೀತ ಪಟೇಲ ಹಾಗೂ ವಿಜಯಕುಮಾರ ಕಾಂಬಳೆ, ಭೀಮಸೇನ ಜಮಾದಾರ, ಜೈಭೀಮ ಗಾಯಕವಾಡ, ಪಾಂಡುರಂಗ ಸಿಂಧೆ ಸೇರಿದಂತೆ ಅನೇಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ