ಸೌಹಾರ್ದಯುತವಾಗಿ ಭಾರತ ಕಟ್ಟಿ
Team Udayavani, Jan 26, 2018, 12:45 PM IST
ಕಲಬುರಗಿ: ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಆಲೋಚನೆ ಮಾಡಿ ಸೌಹಾರ್ದ ಭಾರತವನ್ನು ಕಟ್ಟುವ ಅಗತ್ಯವಿದೆ ಎಂದು ಉಪನ್ಯಾಸಕ ಹಾಗೂ ಹೈದ್ರಾಬಾದ ಕರ್ನಾಟಕ ಸರಕಾರಿ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ| ಶರಣಪ್ಪ ಸೈದಾಪುರ ಪ್ರತಿಪಾದಿಸಿದರು.
ಇಲ್ಲಿನ ಕನ್ನಡ ಸಾಹಿತ್ಯ ಸಂಘದಲ್ಲಿ ಗುರುವಾರ ಎಸ್ಎಫ್ಐ ಹಮ್ಮಿಕೊಂಡಿದ್ದ ಜಿಲ್ಲಾ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣದ ಹಕ್ಕನ್ನು ತಳ ಸಮುದಾಯದಿಂದ ಕಸಿಯುವ ಮತ್ತು ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ನಡೆಯಬೇಕು.
ಏಕಂದರೆ ಎರಡೂ ಅಪಾಯದಲ್ಲಿವೆ. ಸಂವಿಧಾನವನ್ನು ಬದಲಿಸುವ ಮತ್ತು ಮೀಸಲಾತಿಯನ್ನು ತೆಗೆಯುವ ನಿಟ್ಟಿನಲ್ಲಿ
ಸಂಚುಗಳು ನಡೆದಿವೆ. ಇದನ್ನು ನಾವು ಈಗಲೇ ಹತ್ತಿಕ್ಕದಿದ್ದರೆ ಅಥವಾ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ನಾವು ಇನ್ನಷ್ಟು ಅಪಾಯಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಸಂವಿಧಾನ ಉಳಿಸಿ ಭಾರತವನ್ನು ವೈಜ್ಞಾನಿಕವಾಗಿ ಕಟ್ಟಬೇಕಾದ ಅವಶ್ಯಕತೆ ಮತ್ತು ಅನಿವಾರ್ಯತೆ ಎರಡು ಇಂದಿನ ವಿದ್ಯಾರ್ಥಿ ಸಮುದಾಯದ ಮುಂದೆ ಇದೆ
ಎಂದರು.
ಶಿಕ್ಷಕ ಎಚ್.ಎಂ. ತಳವಾರ ಮಾತನಾಡಿ, ಇಂದು ದೇಶದಲ್ಲಿ ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಹಿಡಿತ ಸಾಧಿಸುವ ಕೆಲಸ ನಡೆಯುತ್ತಿದೆ. ಈ ಕೆಲಸಕ್ಕಾಗಿ ವಿದ್ಯಾರ್ಥಿ ಸಮುದಾಯವನ್ನು ಬಳಕೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಇಲ್ಲದ ಆಲೋಚನೆಗಳನ್ನು ಹುಟ್ಟಿಸಲಾಗುತ್ತಿದೆ. ಕೋಮುವಾದಿ ಭಾವನೆಗಳಿಗೆ ವಿದ್ಯಾರ್ಥಿಗಳು ಕಿವಿಗೊಡಬೇಡಿ. ಇದರಿಂದ ನಿಮ್ಮ ಭವಿಷ್ಯ ಹಾಳು ಮಾಡಲಾಗುತ್ತಿದೆ. ಈಗ ಏನಿದ್ದರೂ ಶಿಕ್ಷಣಕ್ಕೆ, ಕಲಿಕೆಗೆ ಒತ್ತು ನೀಡಿ. ಇದರಿಂದ ನೀವು ಬೆಳೆಯಲು ಸಾಧ್ಯವಾಗುತ್ತದೆ. ಇಲ್ಲದೆ ಹೋದರೆ ನೀವು ಮುಂದೆ ಸಮಾಜದ ಹಾಗೂ ದೇಶದ ಮುಂದೆ ಪ್ರಶ್ನೆಯಾಗಿ ನಿಲ್ಲುತ್ತಿರಿ ಎಂದರು.
ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಶಿಕ್ಷಣದ ಮಹತ್ವ ಹಾಳಾಗುತ್ತಿದೆ. ವಿದೇಶಿಗರಿಗೆ ಹಾಗೂ ಸಂಸ್ಥೆಗಳಿಗೆ ರತ್ನಗಂಬಳಿ ಹಾಸಿ ಕರೆಯಲಾಗುತ್ತಿದೆ. ಶಿಕ್ಷಣ ಹೆಸರಿನಲ್ಲಿ ವ್ಯಾಪಾರೀಕರಣ ನಡೆದಿದೆ. ನಮ್ಮ ಶಿಕ್ಷಣ ಅಭಿವೃದ್ಧಿ ಆಗಬೇಕಾದರೆ ಗುಲಾಮಗಿರಿ ತೊಲಗಬೇಕಾದರೆ ಕೋಠಾರಿ ಆಯೋಗದ ಶಿಫಾರಸುಗಳು ಜಾರಿಗೆ ಬರಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಸುನೀಲ ಮಾನ್ಪಡೆ ಮಾತನಾಡಿ, ಹೈಕ ಭಾಗಕ್ಕೆ 371 (ಜೆ)ನೇ ಕಲಂ ಜಾರಿ ಏನೋ ಮಾಡಲಾಗಿದೆ. ಇದು ಸರಿಯಾಗಿ ಜಾರಿಗೆ ಬರಬೇಕಾದರೆ ಸರಕಾರದ ಇಚ್ಛಾಶಕ್ತಿ ಕೊರತೆ ಇದೆ. ಅದನ್ನು ಮಾಡುವಲ್ಲಿ ಸರಕಾರ ಸೋತಿದೆ. ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವ ಧ್ವನಿ ಎತ್ತುವ ಯಾರೇ ಆಗಿರಲಿ ಅವರನ್ನು ಶಿಕ್ಷೆಗೆ ಗುರಿ ಮಾಡುವಂತಹ ಕಾನೂನಿನ ಅವಶ್ಯತೆ ಇದೆ. ಇಲ್ಲದೆ ಹೋದರೆಯುವ ಜನತೆ ಇದಕ್ಕೂ ಉತ್ತರವನ್ನು ಕಂಡುಕೊಳ್ಳಬೇಕಾಗಿದೆ ಎಂದರು.
ಎಸ್ಎಫ್ಐ ಸಂಘಟಕರಾದ ಅಪೂರ್ವಲಾಲ್ ನದಾಫ್, ಶಂಕರ ಕವಲಗಿ ಸ್ವಾಗತಿಸಿದರು. ರಾಮಲಿಂಗ ಬಿರಾದಾರ
ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು