INDIA; ನಿತೀಶ್ ಕುಮಾರ್ ಮೈತ್ರಿ ತೊರೆಯುತ್ತಾರೆಂದು 5 ದಿನಗಳ ಹಿಂದೆಯೇ ಗೊತ್ತಾಗಿತ್ತು: ಖರ್ಗೆ
Team Udayavani, Jan 28, 2024, 12:43 PM IST
ಕಲಬುರಗಿ: ಬಿಹಾರದಲ್ಲಿ ಐದು ದಿನಗಳ ಹಿಂದೆಯೇ ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದಿಂದ ಹೊರ ಬಂದು ಮೈತ್ರಿ ತೊರೆಯುತ್ತಾರೆಂದು ತಿಳಿದಿತ್ತು ಎಂದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಇಲ್ಲಿಂದ ಡೆಹ್ರಾಡೂನ್ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ ಯಾದವ್ ಅವರೇ ತಮಗೆ ಫೋನ್ ಮಾಡಿ ಮೈತ್ರಿ ತೊರೆಯುವ ಬಗ್ಗೆ ಮಾಹಿತಿ ತಿಳಿಸಿದ್ದರು. ಆಗ ಪಕ್ಷಗಳ ಬಲಾಬಲ ಬಗ್ಗೆ ಸ್ಪಷ್ಟ ಮಾಹಿತಿ ಪಡೆದಲಾಗಿತ್ತು. ಆದರೆ ಕುರಿತಾಗಿ ಎಲ್ಲೂ ಬಹಿರಂಗಪಡಿಸಬೇಡಿ ಎಂದಿದ್ದರಿಂದ ನಿನ್ನೆಯವರೆಗೂ ಏನೂ ಹೇಳಲಿಲ್ಲ ಎಂದು ವಿವರಣೆ ನೀಡಿದರು.
ಇಂಡಿಯಾ ಒಕ್ಕೂಟ ಬಲಪಡಿಸುವ ಹಾಗೂ ಸೀಟುಗಳ ಹೊಂದಾಣಿಕೆ ನಿಟ್ಟಿನಲ್ಲಿ ವಾಸ್ನಿಕ್ ಅವರ ನೇತೃತ್ವದಲ್ಲಿ ಆರು ಜನರ ಸಮಿತಿ ರಚಿಸಲಾಗಿದೆ. ಸಮಿತಿ ಈಗಾಗಲೇ ಆರ್ಜೆಡಿ, ಆಪ್, ಟಿಎಂಸಿ ಹಾಗೂ ಮೈತ್ರಿ ಕೂಟದ ಇತರ ಎಲ್ಲರೊಂದಿಗೆ ಮಾತುಕತೆ ನಡೆಸಿದೆ ಎಂದರು.
ಲೋಕಸಭೆ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಪಕ್ಷ ಸಿದ್ದತೆಗೆ ಮುಂದಾಗಿದೆ. ತಾವು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಸಭೆ- ಸಮಾರಂಭಕ್ಕೆ ಮುಂದಾಗಲಾಗಿದೆ. ತೆಲಂಗಾಣ, ಒರಿಸ್ಸಾ, ಬಿಹಾರ, ಕೇರಳ, ದೆಹಲಿ ಸೇರಿ ಇತರೆಡೆ ದಿನಾಂಕ ನಿಗದಿಯಾಗಿದೆ. ತಾವು ಹೋಗುತ್ತಿದ್ದು, ಕೆಲವೆಡೆ ರಾಹುಲ್ ಗಾಂಧಿ ಅವರೂ ಬರಲಿದ್ದಾರೆ ಎಂದು ಖರ್ಗೆ ವಿವರಣೆ ನೀಡಿದರು.
ತಾವು ಇವತ್ತು ಡೆಹ್ರಾಡೂನ್ ದಲ್ಲಿ ಪಕ್ಷದ ಸಭೆ ನಡೆಸಲಾಗುತ್ತಿದೆ. ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಭಾರತ ಜೋಡೋ ನ್ಯಾಯ ಯಾತ್ರಾ ನಡೆದಿದೆ. ಹೀಗೆ ಕಾಂಗ್ರೆಸ್ ಪಕ್ಷವೂ ಲೋಕಸಭೆಗೆ ಸಿದ್ದತೆಯಲ್ಲಿ ತೊಡಗಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್