ಸಾಲ ಮನ್ನಾಕ್ಕೆ ಒತ್ತಾಯಿಸಿ ಜಾಥಾ
Team Udayavani, Aug 21, 2017, 10:53 AM IST
ಜೇವರ್ಗಿ: ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಆಗ್ರಹಿಸಿ ತಾಲೂಕಿನಾಧ್ಯಂತ ಕರ್ನಾಟಕ ಪ್ರಾಂತ ರೈತ
ಸಂಘ ತಾಲೂಕು ಸಮಿತಿ ವತಿಯಿಂದ ಜೀಪ್ ಜಾಥಾ ಆಯೋಜಿಸಲಾಗಿದೆ. ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ಜೀಪ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಸುಭಾಷ ಹೊಸಮನಿ, ಕಳೆದ ಮೂರ್ನಾಲ್ಕು ವರ್ಷಗಳಿಂದ ರಾಜ್ಯದ ರೈತರು, ಕೃಷಿ ಕೂಲಿಕಾರ್ಮಿಕರು ಭೀಕರ ಬರಗಾಲದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಬ್ಯಾಂಕ್, ಖಾಗಿಯವರಿಂದ ತಂದಿರುವ ಸಾಲಲಗಳಲ್ಲದೇ ತಮ್ಮ ಬಳಿಯಿರುವ ಬಂಡವಾಳ ಕಳೆದುಕೊಂಡು ಅಸಹಾಯಕತೆಯಿಂದ ರೈತರು ನರಳುವಂತಾಗಿದೆ. ಅಲ್ಲದೇ ಬರಗಾಲದಿಂದ ಕ್ರ‚ಇ ಬಿಕ್ಕಟ್ಟು ಎದುರಾಗಿ ರೈತರು ಆತ್ಮಹತ್ಯೆಗೆ ತುತ್ತಾಗುತ್ತಿದ್ದಾರೆ. ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮೂರು ವರ್ಷದಲ್ಲಿ ಬಂಡವಾಳಶಾಹಿಗಳಿಗೆ ಹಾಗೂ ಕಾರ್ಪೋರೇಟ್ ಕಂಪನಿಗಳ ಸುಮಾರು 12 ಲಕ್ಷ ಕೋಟಿ ರೂ. ತೆರಿಗೆ ವಿನಾಯಿತಿ ಹಾಗೂ ಸಾಲಮನ್ನಾ ಮಾಡಿರುವುದು ಖಂಡನೀಯ. ಆದ್ದರಿಂದ ಕೂಡಲೇ ಕೇಂದ್ರ ಸರಕಾರ ರೈತರ, ದಲಿತರ, ಕೃಷಿ ಕೂಲಿಕಾರ್ಮಿಕರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಡಾ| ಎಂ.ಎಸ್. ಸ್ವಾಮಿನಾಥನ್ ವರದಿ ಆಧಾರಿತ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು. ಕೃಷಿಕರ ಪರವಾದ ಬೆಳೆವಿಮೆ ನೀತಿ ಜಾರಿಯಾಗಬೇಕು. ರೈತರಿಗೆ ಹಾಗೂ ಕೂಲಿಕಾರ್ಮಿಕರಿಗೆ 5,000 ರೂ. ಮಾಸಿಕ ವೇತನ ನೀಡಬೇಕು. ಭೂಮಿಗೆ ನ್ಯಾಯವಾದ ಬೆಲೆ ನಿಗದಿ ಮಾಡಬೇಕು. ಸರಕಾರಿ ಹಾಗೂ ಭೂಮಿ ಉಳುಮೆದಾರರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು. ಭೂರಹಿತ ಬಡವರಿಗೆ
ಹಾಗೂ ದಲಿತರಿಗೆ ಭೂ ಮಂಜೂರಾತಿ ನೀಡಬೇಕು. ಎಲ್ಲ ಬಡವರಿಗೂ ರೇಷನ್ ಕಾರ್ಡ್ ಮಂಜೂರಾತಿಗಾಗಿ ಹಾಗೂ
ಆನ್ಲೈನ್ ತೊಂದರೆ ನಿವಾರಣೆ ಮಾಡಬೇಕು ಎಂದು ಸರಕಾರಕ್ಕೆ ಆಗ್ರಹಿಸಿದರು. ಎಲ್ಲ ಬೇಡಿಕೆಗಳ ಈಡೇರಿಕೆಗೆ
ಆಗ್ರಹಿಸಿ ಆ. 22ರಂದು ಮಂಗಳವಾರ ಜಿಲ್ಲಾಧಿ ಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ರೈತ ಬಾಂಧವರು, ಕೂಲಿಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು. ನಂತರ ತಾಲೂಕಿನ ಮಾರಡಗಿ, ಆಂದೋಲಾ, ಯಡ್ರಾಮಿ, ವಸ್ತಾರಿ, ಕುಮ್ಮನಸಿರಸಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೀಪ್ ಜಾಥಾ ನಡೆಸಲಾಯಿತು. ಜಾಥಾ ಸಂದರ್ಭಧಲ್ಲಿ ರೈತ ಸಂಘ ಪ್ರಧಾನ ಕಾರ್ಯದರ್ಶಿ ಸಿದ್ರಾಮ ಹರವಾಳ, ದಲಿತ ಹಕ್ಕುಗಳ ಸಮಿತಿ ತಾಲೂಕು ಸಂಚಾಲಕ ಪರಶುರಾಮ ಬಡಿಗೇರ, ಬಸಪ್ಪ ಕೋಳಕೂರ, ಅಂಬಣ್ಣ ಕೋಳಕೂರ, ಬಸವರಾಜ ಬಡಿಗೇರ ಸೇರಿದಂತೆ ಹಲವಾರು ಜನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ