13 ಜನ ಗುಣಮುಖ-ಬಿಡುಗಡೆ
Team Udayavani, Jun 7, 2020, 2:45 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜೇವರ್ಗಿ: ಕೋವಿಡ್ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ 13 ಜನರನ್ನು ಶನಿವಾರ ತಾಲೂಕಾಡಳಿತ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ತಾಲೂಕಿನ ವಿವಿಧ ಗ್ರಾಮಗಳ 13 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ಕಲಬುರಗಿ ನಗರದ ಕೋವಿಡ್ ನಿಗದಿತ ಆಸ್ಪತ್ರೆಗೆ ಕಳೆದ 15 ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಶನಿವಾರ ಕೋವಿಡ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖ ಹೊಂದಿದ್ದರಿಂದ ಅವರನ್ನು ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಹಶೀಲ್ದಾರ್ ಸಿದರಾಯ ಭೋಸಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ.ಸಿದ್ದು ಪಾಟೀಲ ತಿಳಿಸಿದ್ದಾರೆ.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಮಧ್ಯಾಹ್ನ ತಾಲೂಕು ಆಡಳಿತದಿಂದ ಗುಣಮುಖರಾದ 13 ಜನರಿಗೆ ಶಾಲು ಹೊದಿಸಿ, ಹಣ್ಣು-ಹಂಪಲು ನೀಡಿ ಸನ್ಮಾನಿಸಿ ಅವರನ್ನು ಬೀಳ್ಕೊಡಲಾಯಿತು. ಮಹಾರಾಷ್ಟ್ರದಿಂದ ಮರಳಿ ಜೇವರ್ಗಿ ತಾಲೂಕಿಗೆ ಬಂದಿರುವ ವಲಸೆ ಕಾರ್ಮಿಕರೆಂದು ಅಧಿಕಾರಿಗಳು ತಿಳಿಸಿದ್ದಾರೆ. ತಾಲೂಕಿನ ರೇವನೂರ ಗ್ರಾಮದ 8 ಜನ, ಕೂಟನೂರ ಗ್ರಾಮದ 2, ಗುಡೂರ (ಎಸ್.ಎ) ಗ್ರಾಮದ 2 ಹಾಗೂ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಒಬ್ಬ ವ್ಯಕ್ತಿ ಕೋವಿಡ್ 19 ಸೋಂಕಿನಿಂದ ಹೊರ ಬಂದಿದ್ದಾರೆ. ತಹಶೀಲ್ದಾರ್ ಸಿದರಾಯ ಭೋಸಗಿ, ಸಿಪಿಐ ರಮೇಶ ರೊಟ್ಟಿ, ಸಬ್ ಇನ್ಸಪೆಕ್ಟರ್ ಮಂಜುನಾಥ ಹೂಗಾರ, ಅಪರಾಧ ವಿಭಾಗದ ಸಬ್ ಇನ್ಸಪೆಕ್ಟರ್ ಸಂಗಮೇಶ ಅಂಗಡಿ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಶಹನಾಜ್, ಡಾ. ರಾಘವೇಂದ್ರ ಕುಲಕರ್ಣಿ, ಡಾ.ಶ್ರೀದೇವಿ, ಡಾ.ಸಂಗೀತಾ, ಡಾ.ವೀರೇಶ, ಡಾ.ಶಿವಲಿಂಗ ಸೇರಿದಂತೆ ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?