![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
ಮುಂಗಾರು ಭರವಸೆ ಹೆಚ್ಚಿಸಿದ ರೋಹಿಣಿ ಮಳೆ
Team Udayavani, Jun 3, 2020, 2:36 PM IST
![03-June-23](https://www.udayavani.com/wp-content/uploads/2020/06/03-June-23-620x348.gif)
ಸಾಂದರ್ಭಿಕ ಚಿತ್ರ
ಜೇವರ್ಗಿ: ಬಿಸಿಲಿನ ಧಗೆಯಿಂದ ತತ್ತರಿಸಿದ ತಾಲೂಕಿನಾದ್ಯಂತ ಸೋಮವಾರ ಮಧ್ಯರಾತ್ರಿ ಸುರಿದ ಧಾರಾಕಾರ ಮಳೆಯು ತಂಪನೆರೆಯಿತು.
ಈಗಾಗಲೇ ಮುಂಗಾರು ಹಂಗಾಮು ಬಿತ್ತನೆಗಾಗಿ ಭೂಮಿ ಹದಗೊಳಿಸಿಕೊಂಡು ಕಾಯುತ್ತಿರುವ ರೈತರಿಗೆ ರೋಹಿಣಿ ಮಳೆ ಭರವಸೆ ತುಂಬಿದೆ. ಪಟ್ಟಣದಲ್ಲಿ ಸೋಮವಾರ ರಾತ್ರಿ 11 ಗಂಟೆ ಹೊತ್ತಿಗೆ ಗುಡುಗು, ಮಿಂಚು ಸಹಿತ ಪ್ರಾರಂಭವಾದ ಮಳೆಯು ಎರಡು ಗಂಟೆ ರಭಸವಾಗಿ ಸುರಿಯಿತು. ಗಾಳಿಯ ಆರ್ಭಟ ಜೋರಾಗಿತ್ತು. ಮಳೆಯಿಂದ ಚರಂಡಿ ನೀರು ಉಕ್ಕಿ ರಸ್ತೆಗೆ ಹರಿಯಿತು.
ಅನೇಕ ಹೊಲಗದ್ದೆಗಳು ಕೂಡ ಮಳೆ ನೀರಿನಿಂದ ಜಲಾವೃತಗೊಂಡು ಹಳ್ಳ-ಕೆರೆಗಳಂತೆ ಭಾಸವಾಗುತ್ತಿತ್ತು. ಪಟ್ಟಣದ ದತ್ತನಗರ, ಓಂ ನಗರ, ಬಸವೇಶ್ವರ ಕಾಲೋನಿ, ಶಾಂತನಗರ, ಖಾಜಾ ಕಾಲೋನಿಯ ಕೆಲ ಕಡೆಗಳಲ್ಲಿ ಚರಂಡಿ ನೀರು ಉಕ್ಕಿ ರಸ್ತೆಗಳು ಜಲಾವೃತಗೊಂಡಿದ್ದರಿಂದ ಸಾರ್ವಜನಿಕರು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು. ಮಳೆಯ ಬೆನ್ನಲ್ಲೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ಜನರು ತೊಂದರೆ ಅನುಭವಿಸಿದರು. ಪಟ್ಟಣದ ಹಲವೆಡೆ ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದ್ದು, ಮಳೆ ನೀರಿನಿಂದ ತ್ಯಾಜ್ಯ ರಸ್ತೆಗೆ ಉಕ್ಕಿ ಹರಿಯಿತು. ಜಿಲ್ಲೆಯಲ್ಲಿಯೇ ಜೇವರ್ಗಿ ತಾಲೂಕಿನಲ್ಲಿ ಅತೀ ಹೆಚ್ಚು ಸರಾಸರಿ 95 ಮಿಮೀ ಮಳೆ ಬಿದ್ದಿದೆ.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.