ಪುಂಡರ ತಾಣವಾದ ಹಳೆ ಬಿಇಒ ಕಚೇರಿ

ಇಲ್ಲಿ ನಡೆಯುತ್ತೆ ಜೂಜಾಟ-ಅನೈತಿಕ ಚಟುವಟಿಕೆ

Team Udayavani, Jan 19, 2020, 10:55 AM IST

19-January-2

ಜೇವರ್ಗಿ: ಪಟ್ಟಣದ ಶಾಸ್ತ್ರೀಚೌಕ್‌ ಬಡಾವಣೆಯ ಸಿಂಡಿಕೇಟ್‌ ಬ್ಯಾಂಕ್‌ ಹತ್ತಿರದ ಹಳೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಳು ಬಿದ್ದು ಕಸದ ತೊಟ್ಟಿ ಹಾಗೂ ಪುಂಡಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ.

ಕಳೆದ ಏಳು ವರ್ಷಗಳ ಹಿಂದೆ ಸುಸಜ್ಜಿತವಾಗಿ ನಿರ್ಮಿಸಲಾಗಿರುವ ಮಿನಿವಿಧಾನಸೌಧ ಕಟ್ಟಡದ ಮೊದಲ ಮಹಡಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸ್ಥಳಾಂತರವಾದ ಹಿನ್ನಲೆಯಲ್ಲಿ ಹಳೆ ಕಟ್ಟಡ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಜೂಜು, ಮಧ್ಯವ್ಯಸನಿಗಳ ಹಾಗೂ ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿಣಮಿಸಿದೆ.

ಸದ್ಯ ಬಿಇಒ ಕಚೇರಿ ಮಿನಿವಿಧಾನಸೌಧ ಕಟ್ಟಡಕ್ಕೆ ಸ್ಥಳಾಂತರವಾದ ಮೇಲೆ ಹಳೆ ಕಟ್ಟಡವನ್ನು ಅಬಕಾರಿ ಇಲಾಖೆ ಸೇರಿದಂತೆ ಬೇರೆ ಇಲಾಖೆಗಳಿಗಾಗಲಿ ಅಥವಾ ಸಾರ್ವಜನಿಕ ಗ್ರಂಥಾಲಯಕ್ಕೆ ವ್ಯವಸ್ಥೆ ಮಾಡಿಕೊಡಬಹುದಿತ್ತು. ಆದರೆ ಖಾಲಿ ಬಿಟ್ಟಿದ್ದರಿಂದ ರಾತ್ರಿಯಾದರೇ ಸಾಕು ಈ ಕಟ್ಟಡದಲ್ಲಿ ಪುಂಡರು ನಿತ್ಯ ಮೋಜು, ಮಸ್ತಿ ಮಾಡುತ್ತಿದ್ದಾರೆ. ಮದ್ಯವ್ಯಸನಿಗಳು ಇಲ್ಲಿಯೇ ಕುಡಿದು ಮದ್ಯದ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ.

ಈ ಭಾಗದ ಸುತ್ತಲೂ ಮನೆ, ಹೋಟೆಲ್‌ ವ್ಯಾಪಾರಸ್ಥರು ಇರುವುದರಿಂದ ಪ್ಲಾಸ್ಟಿಕ್‌, ಕಸಕಡ್ಡಿಗಳನ್ನು ಎಲ್ಲೆಂದರಲ್ಲಿ ಎಸೆಯಲಾಗತ್ತಿದೆ. ಇಲ್ಲಿಯೇ ನಿತ್ಯ ಸಾರ್ವಜನಿಕ ಶೌಚ ಮಾಡುತ್ತಿರುವುದರಿಂದ ಶೌಚ ನೀರು ಚರಂಡಿಗೆ ಹರಿದು ಹೋಗದೇ ನಿಂತಲ್ಲೇ ನಿಂತು ಗಬ್ಬುವಾಸನೆ ಬೀರುತ್ತಿದೆ. ಅಲ್ಲದೇ ವಿಪರೀತ ಸೊಳ್ಳೆ ಕಾಟ ಹೆಚ್ಚಾಗಿದೆ. ಲೋಕೊಪಯೋಗಿ ಇಲಾಖೆ ಅಧಿಕಾರಿಗಳಾಗಲಿ, ಪುರಸಭೆ ಅಧಿಕಾರಿಗಳಾಗಲಿ ಈ ಜಾಗ ಸ್ವತ್ಛಗೊಳಿಸಿ ಸುಪರ್ದಿಗೆ ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದಾರೆ. ಅಲ್ಲದೇ ಅನೇಕ ವರ್ಷಗಳಿಂದ ಕೆಟ್ಟು ನಿಂತಿರುವ ಶಿಕ್ಷಣ ಇಲಾಖೆಯ ಜೀಪು ಸಂಪೂರ್ಣ ಹಾಳಾಗಿದೆ. ಸದ್ಯ ಅವಸಾನದ ಅಂಚಿನಲ್ಲಿರುವ ಈ ಕಟ್ಟಡವನ್ನು ಸಂಪೂರ್ಣ ತೆರವುಗೊಳಿಸಬೇಕು. ಇಲ್ಲವೇ ಪಟ್ಟಣದ ಮಧ್ಯ ಭಾಗದಲ್ಲಿರುವುದರಿಂದ ಇಲ್ಲೊಂದು ಸಾರ್ವಜನಿಕ ಗ್ರಂಥಾಲಯ ನಿರ್ಮಿಸಿದರೇ ಅನುಕೂಲವಾಗುತ್ತದೆ ಎನ್ನುವುದು ಪಟ್ಟಣದ ಜನರ ಅಭಿಪ್ರಾಯವಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಳೆ ಕಟ್ಟಡದ ಸುತ್ತಮುತ್ತ ಕೆಲವು ಜನರು ಕಸಕಡ್ಡಿ ತಂದು ಹಾಕಿ, ಬೆಂಕಿ ಹಚ್ಚುತ್ತಿದ್ದಾರೆ. ರಾತ್ರಿ ವೇಳೆ ಮಲಮೂತ್ರ ವಿಸರ್ಜನೆ, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು. ಮಲ್ಲಿಕಾರ್ಜುನ ಬಿರಾದಾರ,
ಸೊನ್ನ ಬಡಾವಣೆ ನಿವಾಸಿ

ಕಟ್ಟಡವನ್ನು ನೆಲಸಮಗೊಳಿಸಿ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಬೇಕು. ಪಟ್ಟಣದ ಹೃದಯ ಭಾಗದಲ್ಲಿರುವ ಈ ಕಟ್ಟಡದಲ್ಲಿ ಗ್ರಂಥಾಲಯವಾದರೆ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಓದುಗರಿಗೆ ಅನುಕೂಲವಾಗುತ್ತದೆ.
ನವೀನ್‌ ಗುತ್ತೇದಾರ,
ವಿದ್ಯಾರ್ಥಿ.

ಕಳೆದ ಕೆಡಿಪಿ ಸಭೆಯಲ್ಲಿ ಇತ್ತೀಚೆಗೆ “ಉದಯವಾಣಿ’ಯಲ್ಲಿ ಪ್ರಕಟವಾದ ಗ್ರಂಥಾಲಯ ಕುರಿತ ಲೇಖನವನ್ನು ಶಾಸಕ ಡಾ| ಅಜಯಸಿಂಗ್‌ ಗಮನಕ್ಕೆ ತಂದು, ಅವರ ಜತೆ ಚರ್ಚಿಸಿ, ಹಳೆ ಬಿಇಒ ಕಟ್ಟಡವನ್ನು ಗ್ರಂಥಾಲಯಕ್ಕೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಸಿದ್ದರಾಯ ಬೋಸಗಿ,
ತಹಶೀಲ್ದಾರ್‌

ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.