ಶೇ.90ರಷ್ಟು ಬಿತ್ತನೆ ಕಾರ್ಯ ಪೂರ್ಣ
1,18,271 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ
Team Udayavani, Jul 9, 2020, 3:50 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜೇವರ್ಗಿ: ಪಟ್ಟಣ ಸೇರಿದಂತೆ ಆಂದೋಲಾ, ಇಜೇರಿ ಹೋಬಳಿ ವ್ಯಾಪ್ತಿಯ ಹತ್ತಾರು ಹಳ್ಳಿಗಳಲ್ಲಿ ಬುಧವಾರ ಸುರಿದ ಧಾರಾಕಾರ ಮಳೆಯಿಂದ ಅನ್ನದಾತನ ಮೊಗದಲ್ಲಿ ಸಂತಸ ಮೂಡಿದೆ.
ಕಳೆದ ಐದಾರು ದಿನಗಳ ಹಿಂದೆ ಎಡೆಬಿಡದೇ ಸುರಿದ ಭಾರಿ ಮಳೆಗೆ ಅನೇಕ ಜಮೀನುಗಳ ಒಡ್ಡು ಒಡೆದು ಹೊಲಗಳಲ್ಲಿ ನೀರು ನಿಂತು ಸಾಕಷ್ಟು ಹಾನಿ ಸಂಭವಿಸಿತ್ತು. ಮತ್ತೇ ಬುಧವಾರ ಸುರಿದ ಧಾರಾಕಾರ ಮಳೆ ಈಗಾಗಲೇ ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಸಂತಸ ತಂದಿದೆ. ಜೇವರ್ಗಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಕೋಳಕೂರ, ರದ್ದೇವಾಡಗಿ, ಮಾವನೂರ, ಹರವಾಳ, ಜನಿವಾರ, ಗೌನಳ್ಳಿ, ರಾಸಣಗಿ, ಹಂದನೂರ, ರೇವನೂರ, ಕೂಡಿ, ಕೋಬಾಳ, ಮಂದ್ರವಾಡ, ಬಣಮಿ, ಕೋನಾ ಹಿಪ್ಪರಗಾ, ಹರನೂರ, ಸೊನ್ನ, ಕಲ್ಲಹಂಗರಗಾ, ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ರೈತರು ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ತೊಗರಿ, ಹತ್ತಿ, ಸೂರ್ಯಕಾಂತಿ, ಹೆಸರು, ಉದ್ದು ಸೇರಿದಂತೆ ಅಲ್ಪಾವಧಿ ಬೆಳೆಗಳ ಬಿತ್ತನೆ ಕಾರ್ಯ ಪೂರ್ಣಗೊಳಿಸಿದ್ದಾರೆ.
ಬಿತ್ತನೆ ಮಾಡಿದ ನಂತರ ವಾರದಲ್ಲಿ ಎರಡು ಬಾರಿ ಅಲ್ಪ ಸ್ವಲ್ಪ ಮಳೆಯಾಗಿದ್ದರಿಂದ ಬೆಳೆಗಳು ಚೇತರಿಕೆ ಕಾಣುತ್ತಿವೆ. ಬುಧವಾರ ಸುರಿದ ಮಳೆ ರೈತರಿಗೆ ವರವಾಗಿ ಪರಿಣಮಿಸಿದೆ. ಕಳೆದ ಮೂರು ವರ್ಷಗಳಿಂದ ತಾಲೂಕಿನಲ್ಲಿ ಸಮರ್ಪಕವಾಗಿ ಮಳೆಯಾಗದ ಕಾರಣ ರೈತರು ಬಿತ್ತನೆ ಮಾಡಿದ ಬೆಳೆಗಳು ಕೈ ಸೇರಿರಲಿಲ್ಲ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಾಲ ಕಾಲಕ್ಕೆ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ.
ತಾಲೂಕಿನ ಶಖಾಪುರ, ಅವರಾದ ಗ್ರಾಮಗಳ ಸೀಮೆಯಲ್ಲಿ ರೈತರು ಹೆಸರು, ಉದ್ದು, ಹತ್ತಿ ಬಿತ್ತನೆ ಮಾಡಿದ್ದು ಈಗಾಗಲೇ ಕಳೆ ತೆಗೆಯುವ ಹಂತಕ್ಕೆ ಬಂದಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಬೀಳದ ಮಳೆ ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಮುಂಗಾರು ಬೆಳೆಗಳ ಇಳುವರಿ ಗಣನೀಯವಾಗಿ ಹೆಚ್ಚಳವಾಗಲಿದೆ. ರೈತರು ಕೃಷಿ ಇಲಾಖೆ ಅಧಿಕಾರಿಗಳ ಸಲಹೆ ಪಡೆದುಕೊಂಡು ಬೆಳೆಗಳಿಗೆ ರಸಗೊಬ್ಬರ, ಕ್ರಿಮಿನಾಶಕ ಅಗತ್ಯ ಪ್ರಮಾಣದಲ್ಲಿ ಬಳಕೆ ಮಾಡಬೇಕು.
ತಾಲೂಕಿನ ಪ್ರಮುಖ ಬೆಳೆಗಳಾದ ತೊಗರಿ, 64,450 ಹೆಕ್ಟೇರ್, ಹತ್ತಿ 42,725 ಹೆಕ್ಟೇರ್, ಸಜ್ಜೆ, ಸೂರ್ಯಕಾಂತಿ, ಮೆಕ್ಕೆ ಜೋಳ 1000 ಹೆಕ್ಟೇರ್, ಹೆಸರು, 1,250 ಹೆಕ್ಟೇರ್, ಎಳ್ಳು 500 ಹೆಕ್ಟೇರ್ ಸೇರಿದಂತೆ ಒಟ್ಟು 1,18,271 ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಬಿತ್ತನೆ ಗುರಿ ಹೊಂದಲಾಗಿದ್ದು, ಈಗಾಗಲೇ ಪ್ರತಿಶತ 90% ರಷ್ಟು ಮುಂಗಾರು ಬೆಳೆಗಳ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ.
ಸುನೀಲಕುಮಾರ ಜವಳಗಿ,
ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ