ಕಾಯಂ ಪೌರಾಯುಕ್ತರ ನೇಮಕಕ್ಕೆ ಒತ್ತಾಯಿಸಿ ಜೆಡಿಎಸ್‌ ಪ್ರತಿಭಟನೆ


Team Udayavani, Jul 8, 2022, 3:35 PM IST

14protest

ಶಹಾಬಾದ: ನಗರಸಭೆಯಲ್ಲಿ ಪ್ರಭಾರಿ ಪೌರಾ ಯುಕ್ತರ ಬದಲಿಗೆ ಕಾಯಂ ಪೌರಾಯುಕ್ತರನ್ನು ನಿಯೋಜಿಸಬೇಕೆಂದು ಒತ್ತಾಯಿಸಿ ಜೆಡಿಎಸ್‌ ವತಿಯಿಂದ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಶಾಮರಾವ ಸೂರನ್‌ ಮಾತನಾಡಿ, ನಗರಸಭೆಗೆ ಕಾಯಂ ಪೌರಾಯುಕ್ತರನ್ನು ನೇಮಕಗೊಳಿಸದ ಕಾರಣ ಪ್ರಭಾರ ಪೌರಾಯುಕ್ತರಾಗಿ ಕಲಬುರಗಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಸವರಾಜ ಹೆಬ್ಟಾಳ ಅವರನ್ನು ನಿಯೋಜಿಸಲಾಗಿದೆ. ಕಳೆದ ಎರಡು ತಿಂಗಳಿನಿಂದ ಅವರು ಪ್ರಭಾರಿ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಪ್ರತಿದಿನ ನಗರಸಭೆಗೆ ಬರುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಖಾತೆ ಬದಲಾವಣೆ ಸೇರಿದಂತೆ ಇನ್ನಿತರ ಸಾರ್ವಜನಿಕರ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗದ ಕಾರಣ ಸಾರ್ವಜನಿಕರು ಪ್ರತಿದಿನ ಪರದಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಪ್ರಭಾರ ಪೌರಾಯುಕ್ತರನ್ನು ಬದಲಾಯಿಸಿ ಕಾಯಂ ಆಗಿ ನಿಯೋಜಿಸುವಂತೆ ಒತ್ತಾಯಿಸಿದರು.

ಜಿಲ್ಲಾ ಯುವ ಘಟಕ ಅಧ್ಯಕ್ಷ ಮಹ್ಮದ್‌ ಅಲಿಂ ಇನಾಮದಾರ್‌ ಮಾತನಾಡಿ, ನಗರಸಭೆಯಲ್ಲಿ ಕಾಯಂ ಪೌರಾಯುಕ್ತರಿಗೆ ನೇಮಕ ಮಾಡಿದರೇ ಸಾರ್ವಜನಿಕರ ಕೆಲಸಗಳು ಸರಳವಾಗಿ ಆಗುತ್ತವೆ. ಆದರೆ ಶಾಸಕರು ಕಾಯಂ ಪೌರಾಯುಕ್ತರನ್ನು ನೇಮಿಸದೇ ತಮ್ಮ ಸಂಬಂಧಿಕ ಬಸವರಾಜ ಹೆಬ್ಟಾಳ ಅವರನ್ನು ಪ್ರಭಾರಿ ಪೌರಾಯುಕ್ತರನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಾರ್ಡ್‌ ನಂ.23ರಲ್ಲಿ ಕಳಪೆ ಕಾಮಗಾರಿಗಳಾಗಿವೆ. ಹಣವಿಲ್ಲದೇ ಖಾತಾ ಹಾಗೂ ಮುಟೇಷನ್‌ ತೆಗೆದುಕೊಳ್ಳುವಂತಿಲ್ಲ. ನಗರಸಭೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಆಡಳಿತ ಸಂಪೂರ್ಣ ಕುಸಿದು ಹೋಗಿದೆ. ಆದ್ದರಿಂದ ಕಾಯಂ ಪೌರಾಯುಕ್ತರನ್ನು ನೇಮಿಸಬೇಕು. ಇದಕ್ಕೆ ಸ್ಪಂದಿಸದಿದ್ದರೆ ಶಾಸಕರ ಮನೆ ಮುಂದೆ ಮತ್ತು ಜಿಲ್ಲಾ ಕೇಂದ್ರದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ನಂತರ ಗ್ರೇಡ್‌-2 ತಹಶೀಲ್ದಾರ್‌ ಗುರುರಾಜ ಸಂಗಾವಿ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜೆಡಿಎಸ್‌ ಅಧ್ಯಕ್ಷ ರಾಜಮಹ್ಮದ ರಾಜಾ, ಮಹಾ ಪ್ರಧಾನಕಾರ್ಯದರ್ಶಿ ಬಸವರಾಜ ಮಯೂರ, ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಅಧ್ಯಕ್ಷ ಮಲ್ಲಿಕಾರ್ಜುನ ಸಂಗಾಣಿ, ಮಲ್ಲಿಕಾರ್ಜುನ ಹಳ್ಳಿ, ನಗರಸಭೆ ಸದಸ್ಯ ಅಮ್ಜದ್‌ ಹುಸೇನ್‌, ಶ್ರೀನಿವಾಸ ಜಮಾದಾರ, ಸುಭಾಷ ಸಾಕರೆ, ಸುನೀಲ ಚವ್ಹಾಣ, ವಿಜಯಲಕ್ಷ್ಮೀ ಬಂಗರಗಿ, ರಿಯಾಜ್‌ ಜಮಾದಾರ, ವೆಂಕಟೇಶ ದಂಡಗುಲಕರ, ಮೈಲಾರಿ ದಿವಾಕರ, ಯೂಸುಫ್‌ ಸಾಹೇಬ್‌, ಬಸವರಾಜ ದಂಡಗುಳಕರ, ಅ.ಜಬ್ಟಾರ, ಶ್ರೀಧರ ಕೊಲ್ಲೂರ, ಮಹ್ಮದ್‌ ಚಾಂದ ವಾಹೀದಿ, ಉಬೆದುಲ್ಲಾ, ಅಬ್ದುಲ್‌ ರಶೀದ್‌, ಹೀರಾ ಪವಾರ್‌, ಹನುಮಾನ ಕಾಂಬಳೆ, ಮಹೇಬೂಬ ಗೋಗಿ, ಸುನೀಲ ಸೂರ್ಯವಂಶಿ, ಮಹ್ಮದ್‌ ಅಜರ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.