ಜೇವರ್ಗಿ: ದೌರ್ಜನ್ಯ ಖಂಡಿಸಿ ಕೋಲಿ ಸಮಾಜ ಪ್ರತಿಭಟನೆ
Team Udayavani, Aug 11, 2017, 4:54 PM IST
ಜೇವರ್ಗಿ: ಕಲಬುರಗಿ ಜಿಲ್ಲೆಯಲ್ಲಿ ಕೋಲಿ ಸಮಾಜದ ಅಮಾಯಕ ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಹಲ್ಲೆ, ದಬ್ಟಾಳಿಕೆ ತಡೆಗಟ್ಟುವಂತೆ ಒತ್ತಾಯಿಸಿ ಗುರುವಾರ ಪಟ್ಟಣದಲ್ಲಿ ತಾಲೂಕು ಕೋಲಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ಮಿನಿ ವಿಧಾನಸೌಧ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರೇಡ್-2 ತಹಶೀಲ್ದಾರ್ ನಾಗೀಂದ್ರಪ್ಪ ಪಾಟೀಲ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಕೋಲಿ ಸಮಾಜದ ಅಧ್ಯಕ್ಷ ರೇವಣಸಿದ್ಧಪ್ಪಗೌಡ ಕಮಾನಮನಿ, ಸೇಡಂ ತಾಲೂಕಿನ ಮುಗನೂರ ಗ್ರಾಮದಲ್ಲಿ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಆರು ಜನರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮೂರು ಜನರ ಹತ್ಯೆ ಮಾಡಲಾಗಿದೆ. ಈ ವಿಷಯದಲ್ಲಿ ಮುಂಜಾಗೃತವಾಗಿ ರಕ್ಷಣೆ ನೀಡುವಲ್ಲಿ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ಅದೇ ರೀತಿ ತಾಲೂಕಿನ ಕಲ್ಲೂರ.ಕೆ, ಕೋಣಶಿರಸಗಿ, ಮಾವನೂರ ಗ್ರಾಮಗಳಲ್ಲಿ ಕೋಲಿ ಸಮಾಜದವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ ರೌಡಿ ಶೀಟರ್ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಮಹಿಳೆಯೊಬ್ಬಳು ಪೊಲೀಸರ ಲಾಠಿ ಏಟಿಗೆ ಬಲಿಯಾಗಿದ್ದಾಳೆ. ಪಟ್ಟಣದ ವೆಲ್ಡಿಂಗ್ ಶಾಪ್ನಲ್ಲಿ ಸಮಾಜದ ಯುವಕನನ್ನು ಒತ್ತಾಯಪೂರ್ವಕವಾಗಿ ಕೆಲಸಕ್ಕೆ ತಂದು
ವಿದ್ಯುತ್ ತಗುಲುವಂತೆ ಮಾಡಿ ಸಾವಿಗೆ ಕಾರಣರಾದವರನ್ನು ಇಲ್ಲಿಯವರೆಗೂ ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳು ಈ ಕುರಿತು ಗಮನಹರಿಸಿ ಮುಗನೂರ ಕುಟುಂಬಕ್ಕೆ ಕೋಟಿ ರೂ. ಪರಿಹಾರದ ಜೊತೆಗೆ ಸದಸ್ಯರೊಬ್ಬರಿಗೆ
ಸರಕಾರಿ ಉದ್ಯೋಗ ನೀಡಬೇಕು. ವಿದ್ಯುತ್ ಶಾಕ್ನಿಂದ ಮೃತಪಟ್ಟ ವ್ಯಕ್ತಿಗೆ 25 ಲಕ್ಷ ರೂ. ಪರಿಹಾರ ಹಾಗೂ ಸಾಲಬಾಧೆಯಿಂದ
ಆತ್ಮಹತ್ಯೆ ಮಾಡಿಕೊಂಡ ಸಮಾಜದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಮಾಜದ ಮುಖಂಡರಾದ ಜಗದೀಶ ತಳವಾರ, ಶಿವಲಿಂಗಪ್ಪ ಕಿನ್ನೂರ, ದೇವಿಂದ್ರ ಚಿಗರಳ್ಳಿ, ರಾಚಣ್ಣ ಯಡ್ರಾಮಿ, ನಾಗೇಂದ್ರಪ್ಪ ಸಿಪಾಯಿ, ಉಮಾಕಾಂತ ಮಾವನೂರ, ಗಂಗಣ್ಣ ಗುಡೂರ, ಸಾಹೇಬಗೌಡ ಬಿರಾದಾರ, ಮಲ್ಲಿಕಾರ್ಜುನ ತಳವಾರ, ರಾಜೇಂದ್ರ ರಾಜವಾಳ, ಚಂದ್ರಕಾಂತ ಗಂವ್ಹಾರ, ನರಸಪ್ಪ ಕಣಮೇಶ್ವರ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ