ಸಾಲ ಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ
Team Udayavani, Dec 27, 2022, 9:45 PM IST
ಜೇವರ್ಗಿ : ಸಾಲ ಬಾಧೆ ತಾಳದೇ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಂಕಲಗಾ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಶಿವಯೋಗೆಪ್ಪ ಯಲ್ಲಪ್ಪ ಅನಗೊಂಡ (50) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂಕಲಗಾ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 1.5 ಲಕ್ಷ ರೂ.ಸಾಲ, ಹುಲ್ಲೂರ ವಿಎಸ್ಎಸ್ಎನ್ ಸೊಸೈಟಿಯಲ್ಲಿ 16 ಸಾವಿರ, ಖಾಸಗಿಯಾಗಿ 5 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ. ಸತತ ಬೆಳೆಹಾನಿಯಿಂದ ಸಾಕಷ್ಟು ನೊಂದಿದ್ದ ಶಿವಯೋಗೆಪ್ಪ ಸಾಲಬಾಧೆಯಿಂದ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪೌರಕಾರ್ಮಿಕರಿಗೆ ಮನೆಗಳ ನಿರ್ಮಾಣ: ಸಚಿವ ಎಂ.ಟಿ.ಬಿ.ನಾಗರಾಜ್