ಚಿನ್ನದಂಗಡಿ ಮಾಲೀಕನ ಮೇಲೆಗುಂಡು ಹಾರಿಸಿ ಆಭರಣ ಲೂಟಿ
Team Udayavani, Jan 29, 2019, 7:41 AM IST
ಕಲಬುರಗಿ: ಜಿಲ್ಲೆಯ ನೂತನ ಕಮಲಾಪುರ ತಾಲೂಕು ಕೇಂದ್ರದಲ್ಲಿನ ಬಸವೇಶ್ವರ ವೃತ್ತದಲ್ಲಿ ಸೋಮವಾರ ಸಂಜೆ ಬೈಕ್ ಮೇಲೆ ಬಂದ ಇಬ್ಬರೂ ಅಪರಿಚಿತರು ಸಂಗಮೇಶ್ವರ ಜ್ಯುವೆಲರಿ ಶಾಪ್ಗೆ ನುಗ್ಗಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾದ ಘಟನೆ ನಡೆದಿದೆ.
ಗುಂಡಿನ ದಾಳಿಯಲ್ಲಿ ಅಂಗಡಿ ಮಾಲೀಕ ವಿಜಯಕುಮಾರ ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿನ್ನಾಭರಣ ಖರೀದಿ ನೆಪದಲ್ಲಿ ಅಂಗಡಿಗೆ ಬಂದ ಅಪರಿಚಿತರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವಿಜಯಕುಮಾರ ಇತ್ತೀಚೆಗಷ್ಟೆ ಬಂಗಾರದ ಅಂಗಡಿ ಪ್ರಾರಂಭಿಸಿದ್ದರು. ಇದೊಂದು ಚಿಕ್ಕ ಅಂಗಡಿಯಾಗಿದ್ದು, ಬಂಗಾರದ ಆಭರಣ ತಯಾರಿಸಲಾಗುತ್ತಿತ್ತು ಎಂದು ಎಸ್ಪಿ ಎನ್.ಶಶಿಕುಮಾರ ತಿಳಿಸಿದ್ದಾರೆ.
ಗುಂಡಿನ ದಾಳಿಗೆ ಹಳೆ ವೈಷಮ್ಯ ಕಾರಣವೋ ಅಥವಾ ಲೂಟಿಗಾಗಿ ನಡೆದಧ್ದೋ ಎಂಬುವುದು ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ವಿಜಯಕುಮಾರ ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ಘಟನೆ ವಿವರ ಬಹಿರಂಗಗೊಳ್ಳುವ ಸಾಧ್ಯತೆಯಿದೆ. ಎಸ್ಪಿ ನ್. ಶಶಿಕುಮಾರ, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ, ಗ್ರಾಮೀಣ ಡಿವೈಎಸ್ಪಿ ಎಸ್.ಎಸ್. ಹುಲ್ಲೂರ, ಗ್ರಾಮೀಣ ಸಿಪಿಐ ರಾಘವೇಂದ್ರ , ಕಮಲಾಪುರ ಪಿಎಸ್ಐ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ