ಜಿಡಗಾ ಮಠ ಕೊಡುಗೆ ಅನನ್ಯ
Team Udayavani, Dec 3, 2018, 10:47 AM IST
ಕಲಬುರಗಿ: ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾ ಬರುತ್ತಿರುವ ಮುಗುಳಖೋಡ-ಜಿಡಗಾ ಮಠವು ಉತ್ತರ ಕರ್ನಾಟಕ ಭಾಗಕ್ಕೆ ಅನನ್ಯ ಕೊಡುಗೆ ನೀಡಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಹೇಳಿದರು.
ನಗರದ ಕೋಟನೂರ ಡಿ ಯಲ್ಲಾಲಿಂಗೇಶ್ವರ ಪುಣ್ಯಾಶ್ರಮದಲ್ಲಿ ರವಿವಾರ ನಡೆದ ಮುಗಳಖೋಡ-ಜಿಡಗಾ ಮಠದ ಡಾ| ಮುರುಘರಾಜೇಂದ್ರ ಮಹಾಸ್ವಾಮಿಗಳ 34ನೇ ಗುರುವಂದನಾ ಮಹೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಜಿಡಗಾ ಮತ್ತು ಮುಗುಳಖೋಡ ಮಠದ ಹಿಂದಿನ ಪೂಜ್ಯರು ನಾಡಿನಾದ್ಯಂತ ಅಸಂಖ್ಯಾತ ಭಕ್ತರನ್ನು ಸೃಷ್ಟಿಮಾಡಿದ್ದಾರೆ. ಇದು ಈ ಪೀಠದಲ್ಲಿ ಶಕ್ತಿಯಿದೆ ಎನ್ನುವುದನ್ನು ನಿರೂಪಿಸುತ್ತದೆ ಎಂದು ಹೇಳಿದರು.
ಕೆಪಿಸಿಸಿ ಕಾರ್ಯಧ್ಯಾಕ್ಷ ಈಶ್ವರ ಖಂಡ್ರೆ ಮಾತನಾಡಿ, ಜಿಡಗಾ-ಮುಗಳಖೋಡ ಮಠವು ಈ ಭಾಗದಲ್ಲಿ ಧಾರ್ಮಿಕ ಕ್ಷೇತ್ರವನ್ನು ಶ್ರೀಮಂತಗೊಳಿಸಿದೆ. ಮಠದ ಈಗಿನ ಪೂಜ್ಯರು ಮಠದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಕೊಂಡು ಬರುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ ಎಂದು ಹೇಳಿದರು.
ಕೋಟನೂರ ಡಿ ಯಲ್ಲಾಲಿಂಗೇಶ್ವರ ಪುಣ್ಯಾಶ್ರಮದ ಆವರಣದಲ್ಲಿ ರವಿವಾರ ನಡೆದ ಮುಗಳಖೋಡ-ಜಿಡಗಾ ಮಠದ ಡಾ| ಮುರುಘರಾಜೇಂದ್ರ ಮಹಾಸ್ವಾಮಿಗಳ 34ನೇ ಗುರುವಂದನಾ ಮಹೋತ್ಸವವನ್ನು ಪ್ರಭಾವತಿ ಧರ್ಮಸಿಂಗ್ ಉದ್ಘಾಟಿಸಿದರು. ಶಾಸಕರಾದ ದತ್ತಾತ್ರೇಯ ಪಾಟೀಲ, ಬಸವರಾಜ ಮತ್ತಿಮಡು, ಬಿ.ಜಿ. ಪಾಟೀಲ, ಆನಂದ ನ್ಯಾಮಗೌಡ, ಪಿ.ರಾಜು, ಆನಂದ ಮಾಮನಿ ಹಾಗೂ ಮುಖಂಡರಾದ ಅಲ್ಲಂಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಶರಣುಕುಮಾರ ಮೋದಿ, ಪವನಕುಮಾರ ವಳಕೇರಿ ಹಾಗೂ ಮುಂತಾದವರಿದ್ದರು. ಈ ಸಂದರ್ಭದಲ್ಲಿ ಡಾ| ಮುರುಘರಾಜೇಂದ್ರ ಮಹಾ ಸ್ವಾಮೀಜಿಗಳನ್ನು ಭಕ್ತವೃಂದದಿಂದ ಸನ್ಮಾನಿಸಿ, ಗುರುವಂದನೆ ಸಲ್ಲಿಸಲಾಯಿತು.
ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಪ್ರಸಕ್ತ ಬರಗಾಲ ಕಾಲದಲ್ಲೂ ತೊಗರಿ ಬೆಳೆದಿದ್ದು ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಸಲು ಮುಂದಾಗಿದೆ. ಬೆಂಬಲ ಬೆಲೆಯಲ್ಲಿ ಖರೀದಿಸುವ ಸಂಬಂಧ ಈಗಾಗಲೇ ಸರ್ಕಾರ ಕೇಂದ್ರದ ಗಮನಕ್ಕೆ ತಂದಿದೆ. ಒಟ್ಟಾರೆ ಹಿಂದಿನ ವರ್ಷದಂತೆ ಸರ್ಕಾರ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸುವ ಮೂಲಕ ರೈತರ ನೆರವಿಗೆ ಧಾವಿಸಲಿದೆ. ಹೀಗಾಗಿ ರೈತರು ಆತಂಕಕ್ಕೆ ಒಳಗಾಗಬಾರದು.
ಬಂಡೆಪ್ಪ ಖಾಶೆಂಪೂರ, ಸಹಕಾರ ಸಚಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ