27ರಂದು ಉದ್ಯೋಗ ಮೇಳ
Team Udayavani, Aug 20, 2019, 11:52 AM IST
ಕಲಬುರಗಿ: ಆರೋಗ್ಯ ಇಲಾಖೆಯ 2019-20ನೇ ಸಾಲಿನ ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಕನಿಷ್ಠ ಶೇ.75ರಷ್ಟು ಹುದ್ದೆ ಮೀಸಲಿರಿಸುವ ಭರವಸೆ ಮೇರೆಗೆ ಆರೋಗ್ಯ ಸೇವೆಯ ಎಂಟು ವಿವಿಧ ಕೌಶಲ್ಯ ತರಬೇತಿ ಆಯ್ಕೆಗಾಗಿ ಆ.27ರಂದು ಜಿಲ್ಲಾ ಮಟ್ಟದ ಉದ್ಯೋಗ ಭರವಸೆ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಉದ್ಯೋಗ ಭರವಸೆ ಮೇಳ ಕುರಿತಂತೆ ನಡೆದ ಜಿಲ್ಲಾ ಆಯ್ಕೆ ಸಮಿತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಉದ್ಯೋಗ ಭರವಸೆ ಮೇಳ ನಡೆಯಲಿದೆ. 18ರಿಂದ 35 ವಯಸ್ಸಿನ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಿ ತಮ್ಮ ವಿದ್ಯಾರ್ಹತೆ ಮತ್ತು ಆಸಕ್ತಿಗೆ ಅನುಗುಣವಾಗಿ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿವಿಧ 8 ತರಬೇತಿಗಳಿಗೆ 96 ಅಭ್ಯರ್ಥಿಗಳನ್ನು ಆಯ್ಕೆಗಾಗಿ ಗುರಿ ನೀಡಲಾಗಿದೆ, 1:3ರಂತೆ 96 ಅಭ್ಯರ್ಥಿಗಳ ಆಯ್ಕೆಗಾಗಿ 284 ಅಭ್ಯರ್ಥಿಗಳನ್ನು ಜಿಲ್ಲೆಯಿಂದ ಆಯ್ಕೆ ಮಾಡಿ ಶಿಫಾರಸು ಮಾಡಲಾಗುವುದು. ಎಎನ್ಎಂ, ಪಿಯುಸಿ, ಪದವಿ, ಜಿಎನ್ಎಂ ನರ್ಸಿಂಗ್, ಬಿಎಸ್ಸಿ ನರ್ಸಿಂಗ್ ಉತ್ತೀರ್ಣರಾದವರು ಅಂದು ತಮ್ಮ ಮೂಲ ಶೈಕ್ಷಣಿಕ ದಾಖಲಾತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು.
ಕೌಶಲ್ಯ ತರಬೇತಿ ನೀಡಲು ಬೆಂಗಳೂರಿನ 800 ಹಾಸಿಗೆವುಳ್ಳ ಎನ್ಎಬಿಎಚ್. ಮಾನ್ಯತೆ ಪಡೆದ ಅಪೋಲೋ ಮೆಡ್ಸ್ಕಿಲ್ಸ್ ಲಿಮಿಟೆಡ್, ರಾಮಯ್ಯ ಮೆಮೋರಿಯಲ್ ಆಸ್ಪತ್ರೆ ಮತ್ತು ನಾರಾಯಣ ಹೃದಾಲಯ ಸಂಸ್ಥೆಗಳೊಂದಿಗೆ ಆರೋಗ್ಯ ಇಲಾಖೆ ಒಡಂಬಡಿಕೆ ಮಾಡಿಕೊಂಡಿದೆ. ಉದ್ಯೋಗ ಮೇಳದ ಯಶಸ್ಸಿಗೆ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ| ಪಿ.ರಾಜಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಮಾಧವರಾವ ಪಾಟೀಲ. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ. ಸತೀಶ, ಜಿಲ್ಲಾ ಆಸ್ಪತ್ರೆ ಜಿಲ್ಲಾ ಸರ್ಜನ್ ಶಿವಾನಂದ ತುರಗಾಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
Kamalapur: ಜಾತಿ ನಿಂದನೆ ಕೇಸ್ಗೆ ಹೆದರಿ ಯುವಕ ಆತ್ಮಹತ್ಯೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ