ಐತಿಹಾಸಿಕ ಹೋರಾಟಕ್ಕೆ ಕೈಜೋಡಿಸಿ
Team Udayavani, Jan 29, 2018, 10:36 AM IST
ಕಲಬುರಗಿ: ಮಾರ್ಚ್ 23ರಿಂದ ಕೈಗೊಳ್ಳಲು ಉದ್ದೇಶಿಸಿರುವ ಐತಿಹಾಸಿಕ ಹೋರಾಟಕ್ಕೆ ದೇಶದ ರೈತರೆಲ್ಲರೂ ಬಂದು ಕೈ ಜೋಡಿಸಬೇಕು ಎಂದು ರೈತ ಒಕ್ಕೂಟದ ಅಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ಪಿ. ಚೆಂಗಲರೆಡ್ಡಿ ಮನವಿ ಮಾಡಿದರು.
ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಹೈದ್ರಾಬಾದ್ ಕರ್ನಾಟಕ ರೈತ ಸಂಘ ರವಿವಾರ ಆಯೋಜಿಸಿದ್ದ ರೈತ ಜಾಗೃತಿ ಬೃಹತ್ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ನವದೆಹಲಿಯ
ರಾಮಲೀಲಾ ಮೈದಾನದಲ್ಲಿ ಸಾಮಾಜಿಕ ಕಾರ್ಯಕರ್ತ, ಭೃಷ್ಟಾಚಾರ ವಿರೋಧಿ ಹೋರಾಟದ ರೂವಾರಿ ಅಣ್ಣಾ ಹಜಾರೆ ಅವರ ನೇತೃತ್ವದಲ್ಲಿ ಮಾರ್ಚ್ 23ರಂದು ಬೃಹತ್ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ನಂದಿವನದ ರೂವಾರಿ, ಶ್ರೀಗುರು ವಿದ್ಯಾಪೀಠದ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಡಿಗ್ಗಾವಿ ಮಾತನಾಡಿ, ಎರಡು ವರ್ಷಗಳ ಹಿಂದೆ ಭೀಕರ ಬರಗಾಲ ಎದುರಾದಾಗ, ಪ್ರಮುಖವಾಗಿ ಎತ್ತುಗಳಿಗೆ ಆಶ್ರಯ ಕಲ್ಪಿಸಲು ನಂದಿವನ ಸ್ಥಾಪಿಸಿದಾಗ ರೈತರ ಬವಣೆಗಳು ಅನುಭವಕ್ಕೆ ಬಂದವು. ಬರೀ ಜಾತಿ ಮುಂದಿಟ್ಟುಕೊಂಡು ಬರುವವರು ಏಲ್ಲಿದ್ದಾರೆ ಎಂದು ಪ್ರಶ್ನಿಸಲಾಯಿತ್ತಲ್ಲದೇ ರೈತರಿಗೆ ಯಾವುದೇ ಜಾತಿ ಇಲ್ಲ ಎಂದು ಮನವರಿಕೆ ಮಾಡಿಕೊಡಲಾಯಿತು. ಅಲ್ಲದೇ ಅಂದಿನಿಂದ ರೈತರ ಅಭ್ಯುದಯಕ್ಕಾಗಿ ಶ್ರಮಿಸಬೇಕು ಎಂದು ನಿರ್ಧರಿಸಿ ಅದೇ ಹಾದಿಯಲ್ಲಿ ನಡೆದು ಬರಲಾಗುತ್ತಿದೆ ಎಂದು ಹೇಳಿದರು.
ಕೃಷಿ ವಿವಿ ನಿವೃತ್ತ ಉಪಕುಲಪತಿ ಡಾ| ಎಸ್. ಎ.ಪಾಟೀಲ ಮಾತನಾಡಿ, ರೈತರಲ್ಲಿ ಈಗ ದುಡಿಮೆ ಪ್ರವೃತ್ತಿ ಕಡಿಮೆಯಾಗುತ್ತಿದೆ. ಹೀಗಾಗಿ ವಾಸ್ತವ ಸಂಗತಿಗಳನ್ನು ಅರಿತು ಕೃಷಿ ಕಾಯಕ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಹೈ.ಕ ರೈತ ಸಂಘದ ಅಧ್ಯಕ್ಷ ದಯಾನಂದ ಪಾಟೀಲ ಮಾತನಾಡಿ, ರೈತರು ಈಗ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಹೋರಾಟಗಳು ಅನಿವಾರ್ಯವಾಗಿದೆ. ಇದನ್ನು ಮನಗಂಡೇ ಅಣ್ಣಾ ಹಜಾರೆ ಅವರನ್ನು ಕರೆಯಿಸಿ ಆಶೀರ್ವಾದ ಪಡೆಯಲಾಗುತ್ತಿದೆ ಎಂದು ಹೇಳಿದರು. ಹಿರಿಯ ಪತ್ರಕರ್ತ ಶ್ರೀನಿವಾಸ ಸಿರನೂರಕರ್ ಸಹ ಮಾತನಾಡಿದರು.
ಜ್ಞಾನಯೋಗಿ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಚಿನ್ಮಯಗಿರಿ-ಮಹಾಂತಪುರ ಗುಡ್ಡದ ಸಿದ್ಧರಾಮ ಶಿವಾಚಾರ್ಯರು, ಮಾದನಹಿಪ್ಪರಗಾ ಅಭಿನವ ಶ್ರೀಗಳು, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್ ಠಾಕೂರ, ಮಹಿಳಾ ಪ್ರಗತಿಪರ ಚಿಂತಕರ ವೇದಿಕೆಯ ಡಾ| ನಾಗರತ್ನಾ ದೇಶಮಾನ್ಯೆ, ಹೈ.ಕ ರೈತ ಸಂಘದ ಬಿ.ಬಿ.ನಾಯಕ, ಆದಿನಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?