ಅಧಿಕಾರಿಗಳಿಗಿಂತ ಪತ್ರಕರ್ತರ ಜವಾಬ್ದಾರಿ ಹೆಚ್ಚು: ಗುರುಕರ್


Team Udayavani, May 11, 2022, 9:29 AM IST

1journalist

ಕಲಬುರಗಿ: ಸಮಾಜದಲ್ಲಿ ಸರ್ಕಾರದ ಅಧಿಕಾರಿಗಳಿಗಿಂತ ಪತ್ರಕರ್ತರ ಜವಾಬ್ದಾರಿ ಮತ್ತು ಸಾಮಾಜಿಕ ಕಳಕಳಿ ಹೆಚ್ಚು. ಸರ್ಕಾರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅವರು ಅಧಿಕಾರಿಗಳಷ್ಟೇ ಎಚ್ಚರಿಕೆ ವಹಿಸುತ್ತಾರೆ ಮತ್ತು ವಹಿಸಬೇಕು ಎಂದು ಜಿಲ್ಲಾಧಿಕಾರಿ ಯಶವಂತ್‌ ಜಿ.ಗುರುಕರ್‌ ಹೇಳಿದರು.

ನಗರದ ಎಚ್‌ಕೆಸಿಸಿಐ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾ ಧಿಕಾರಿಗಳ ಅಧಿಕಾರ ಸ್ವೀಕಾರ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತ ಸಮಾಜದಲ್ಲಿನ ಸಮಸ್ಯೆಗಳಿಗೆ ಬೆಳಕು ಚೆಲ್ಲುವಂತಹ ಕೆಲಸ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಆತುರತೆ ಸಲ್ಲದು. ತುಸು ಏರುಪೇರಾದರೂ, ಮಾಹಿತಿ ತಪ್ಪಾದರೂ ಅದು ಸಮಾಜಕ್ಕೆ ಹೊಡೆತ ಬೀಳುವಂತಾಗುತ್ತದೆ ಎಂದರು.

ಇಸ್ರೇಲ್‌ ದಾಳಿಯಲ್ಲಿನ ಸಾವು, ನೋವುಗಳಿಂತಲೂ ನಮ್ಮ ದೇಶದಲ್ಲಿ ನಡೆಯುವ ಕೃಷಿ, ನೀರಾವರಿ ಹಾಗೂ ಹಲವು ಕ್ಷೇತ್ರಗಳಲ್ಲಿ ಬೆಳವಣಿಗೆ, ಸಾಧನೆ, ಕೊರತೆಯೂ ಮುಖಪುಟದ ಸುದ್ದಿಗಳಾಗಿರುತ್ತವೆ. ಇದು ಸಕಾರಾತ್ಮಕವೂ ಮತ್ತು ಮಾಧ್ಯಮಗಳ ಹೊಣೆಗಾರಿಕೆ ತೋರಿಸುತ್ತದೆ ಎಂದು ಹೇಳಿದರು.

ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ಮುಂದಿನ ಯೋಜನೆಗಳಿಗೆ ಸಹಕಾರ ನೀಡಲಾಗುವುದು. ಸಮಾಜದ ಸ್ವಾಸ್ಥ್ಯ ಕಾಪಾಡುವ ಪತ್ರಕರ್ತರಿಗೆ ಆರೋಗ್ಯ ವಿಮೆ ಮಾಡಿಸಬೇಕು ಎಂದು ಸಲಹೆ ನೀಡಿದರು.

ನಗರ ಪೊಲೀಸ್‌ ಆಯುಕ್ತ ಡಾ| ವೈ.ಎಸ್‌.ರವಿಕುಮಾರ ಮಾತನಾಡಿ, ಪೊಲೀಸರು ಮತ್ತು ಪತ್ರಕರ್ತರು ಇಬ್ಬರೂ ಬೇರೆ ಏನಲ್ಲ. ಉಭಯತರು ಸಮಾಜದ ಜನರ ಸೌಖ್ಯ ಮತ್ತು ಭದ್ರತೆಗಾಗಿ ಬಡಿದಾಡುತ್ತಾರೆ. ಹಲವಾರು ಸಂದರ್ಭದಲ್ಲಿ ಪತ್ರಕರ್ತ ನಿಖರವಾದ ಮಾಹಿತಿ ಪಡೆಯಲು ಸಂಪರ್ಕಿಸುತ್ತಾರೆ. ಪರಸ್ಪರರು ಸಹಕಾರಿಂದ ಸಮಾಜದ ಆರೋಗ್ಯ ಮತ್ತು ಜನರ ಒಳಿತು ಬಯಸೋಣ ಎಂದರು.

ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಅಧ್ಯಕ್ಷ ಶಿವಾನಂದ ತಗಡೂರ ಮಾತನಾಡಿ, ನಮ್ಮ ಮುಂದೆ ಹಲವಾರು ಸವಾಲುಗಳಿವೆ. ಎಲ್ಲವನ್ನು ನಾವು ಎದುರಿಸಿಕೊಂಡು ಮುನ್ನಡೆಯಬೇಕಿದೆ. ಈಗಂತೂ ನಮ್ಮ ಸಂಘ ಇನ್ನಷ್ಟು ನಿಖರವಾಗಿ ಕೆಲಸ ಮಾಡುತ್ತಿದ್ದು, ಸರ್ಕಾರದಿಂದ ಪತ್ರಕರ್ತರಿಗೆ ಸಿಗಬೇಕಾಗಿರುವ ಸೌಕರ್ಯಗಳನ್ನು ಕೊಡಿಸಲು ಮತ್ತು ಕೆಲಸದ ಹೊತ್ತಿನಲ್ಲಿ ನಡೆಯುವ ಅವಘಡಗಳನ್ನು ತಪ್ಪಿಸಲು ಸಂಘ ಪ್ರಯತ್ನಿಸುತ್ತಿದೆ ಎಂದರು.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ನೂತನ ಪದಾ ಧಿಕಾರಿಗಳನ್ನು ಸನ್ಮಾನಿಸಿ, ಪ್ರಮಾಣ ಪತ್ರ ವಿತರಿಸಿ, ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧೇಶ್ವರಪ್ಪ, ಮಾಧ್ಯಮ ಅಕಾಡೆಮಿ ಸದಸ್ಯ ದೇವಿಂದ್ರಪ್ಪ ಕಪನೂರ, ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್‌ ಠಾಕೂರ, ಆಕಾಶವಾಣಿಯ ಸದಾನಂದ ಪೆರ್ಲ, ಪತ್ರಕರ್ತರಾದ ವಾದಿರಾಜ ವ್ಯಾಸಮುದ್ರ, ಸದಾನಂದ ಜೋಶಿ, ಶಂಕರ ಕೋಡ್ಲಾ, ರಾಮಕೃಷ್ಣ ಬಡಶೇಷಿ, ಜಯತೀರ್ಥ ಪಾಟೀಲ, ಮನೋಜಕುಮಾರ ಗುದ್ದಿ, ದೇವಿಂದ್ರಪ್ಪ ಅವಂಟಿ, ಶರಣು ಜಿಡಗಾ, ಸತೀಶ ಜೇವರ್ಗಿ, ಡಾ| ಜಗದೀಶ ಸಿರಿವಾರ, ಬಿ.ವಿ.ಚಕ್ರವರ್ತಿ, ಅಶೋಕ ಕಪನೂರ, ಅಜೀಜುಲ್ಲ ಸರಮಸ್ತ್, ಶರಣಬಸಪ್ಪ ಅನವಾರ, ಸುರೇಶ ಬಡಿಗೇರ ಇತರರಿದ್ದರು.

ಶಿವರಂಜನ ಸತ್ಯಂಪೇಟ ಸ್ವಾಗತಿಸಿದರು. ಸಂಗಮನಾಥ ರೇವತಗಾಂವ ನಿರೂಪಿಸಿದರು. ಅರುಣ ಕದಮ್‌ ವಂದಿಸಿದರು.

ಸಾಮಾಜಿಕ ಜಾಲತಾಣದಲ್ಲಿ ನಕಲಿ ಪತ್ರಕರ್ತರಿಗೆ ನಿಯಂತ್ರಣ ಹೇರುವ, ನಿಜವಾದ ಪತ್ರಕರ್ತರಿಗೆ ಸೇತುವೆಯಾಗಿ ಕೆಲಸ ಮಾಡುವ ಅನಿವಾರ್ಯತೆ ಸದ್ಯ ಇದೆ. ಅಧಿಕಾರಿಗಳಿಂದ ಸ್ಪಷ್ಟ ಮಾಹಿತಿ ಪಡೆದು, ನಿಖರ ವರದಿ ನೀಡಬೇಕು. ಇದು ಎಲ್ಲರಿಗೂ ಒಳ್ಳೆಯದು. ಡಾ| ವೈ.ಎಸ್‌.ರವಿಕುಮಾರ, ಪೊಲೀಸ್ಆಯುಕ್ತ

ಪತ್ರಕರ್ತರ ಸಂಘ ಇನ್ನು ಹೊಸ ಉಮೇದಿನೊಂದಿಗೆ ಚಲಿಸಲಿದೆ. ಗ್ರಂಥಾಲಯ, ಆಟೋಟ ಮತ್ತು ಕ್ರೀಡಾ ಸಲಕರಣೆ ವ್ಯವಸ್ಥೆ ಮತ್ತು ಪತ್ರಕರ್ತ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಲಾಗುವುದು. ಸಹಾಯಧನ ನಿಧಿ ಹೆಚ್ಚಳ ಮತ್ತು ಪತ್ರಕರ್ತರ ವಿಕಾಸಕ್ಕಾಗಿ ಬೇಕಾಗುವ ಎಲ್ಲ ಹೆಜ್ಜೆಗಳನ್ನು ದೃಢವಾಗಿ ಮತ್ತು ಪಾರದರ್ಶಕವಾಗಿ ಇಡಲಾಗುವುದು. ಬಾಬುರಾವ್ಯಡ್ರಾಮಿ, ಜಿಲ್ಲಾಧ್ಯಕ್ಷ, ಪತ್ರಕರ್ತರ ಸಂಘ

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.