ಬೆಳೆವಿಮೆಗೆ ಜೂ.30 ಕೊನೆ ದಿನ
Team Udayavani, Jun 28, 2020, 8:34 AM IST
ಕಲಬುರಗಿ: ಪ್ರಸಕ್ತ 2020-21ನೇ ಸಾಲಿನಲ್ಲಿ ಹವಾಮಾನ ಆಧಾರಿತ ತೋಟಗಾರಿಕೆ ಬೆಳೆಗಳಾದ ಪಪ್ಪಾಯಿ ಮತ್ತು ಹಸಿ ಮೆಣಸಿನಕಾಯಿ ಬೆಳೆಗಳಿಗೆ ಬೆಳೆ ವಿಮಾ ಯೋಜನೆ ಜಾರಿಯಲ್ಲಿದ್ದು, ನಿಗದಿತ ಪ್ರೀಮಿಯಂ ಮೊತ್ತ ಪಾವತಿಸಿ ಬೆಳೆಗೆ ವಿಮೆ ಮಾಡಿಸಬೇಕು ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ ಸಪ್ಪಂಡಿ ತಿಳಿಸಿದ್ದಾರೆ.
ಬೆಳೆ ವಿಮಾ ಯೋಜನೆ ನಡಿ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪಪ್ಪಾಯ ಹಾಗೂ ಹಸಿ ಮೆಣಸಿನಕಾಯಿ ಬೆಳೆಗಳಿಗೆ ವಿಮೆ ಅನುಷ್ಠಾನಗೊಳಿಸಲಾಗಿದೆ. ಪಪ್ಪಾಯ ಬೆಳೆಗೆ 6700 ರೂ. ಮತ್ತು ಹಸಿರು ಮೆಣಸಿನಕಾಯಿಗೆ 3550 ರೂ.ಗಳಂತೆ ಪ್ರತಿ ಹೆಕ್ಟೇರ್ಗೆ ಪ್ರೀಮಿಯಂ ಮೊತ್ತ ನಿಗದಿಪಡಿಸಲಾಗಿದೆ.
ಅರ್ಹ ರೈತರು ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಸ್ವಯಂ ಘೋಷಿತ ಬೆಳೆ ಪ್ರಮಾಣ ಪತ್ರದೊಂದಿಗೆ ವಿಮೆಗೆ ಅರ್ಜಿಯನ್ನು ಹತ್ತಿರದ ಬ್ಯಾಂಕುಗಳಿಗೆ ಸಲ್ಲಿಸಲು ಜೂನ್ 30 ಕೊನೆ ದಿನವಾಗಿದ್ದು, ನಿಗ ದಿತ ಅವ ಧಿಯಲ್ಲಿ ಅರ್ಜಿ ಸಲ್ಲಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ. ಹೆಚ್ಚಿನ ವಿವರಗಳಿಗೆ ಹತ್ತಿರದ ಬ್ಯಾಂಕುಗಳಿಗೆ ಅಥವಾ ತೋಟಗಾರಿಕೆ ಇಲಾಖೆಯ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್