ಸಾಂಸ್ಕೃತಿಕ ಏಕೀಕರಣದಿಂದ ಸರ್ವರಿಗೂ ನ್ಯಾಯ


Team Udayavani, Jan 21, 2019, 8:49 AM IST

gul-2.jpg

ಕಲಬುರಗಿ: ಕರ್ನಾಟಕ ಏಕೀಕರಣದಿಂದ ಲಿಂಗಾಯತ, ಗೌಡ ಎನ್ನುವ ರಾಜಕೀಯ ಏಕೀಕರಣವಾಗಿದೆಯೇ ಹೊರತು ಸಾಂಸ್ಕೃತಿಕ ಏಕೀಕರಣವಾಗಿಲ್ಲ. ಸಾಂಸ್ಕೃತಿಕ ಏಕೀಕರಣ ಮತ್ತು ವಿಕೇಂದ್ರೀಕರಣ ಆದಾಗ ಮಾತ್ರ ಉತ್ತರ ಕರ್ನಾಟಕ, ಹೈದ್ರಾಬಾದ ಕರ್ನಾಟಕಕ್ಕೆ ನ್ಯಾಯ ಸಿಗಲು ಸಾಧ್ಯ ಎಂದು ಕರ್ನಾಟಕ ರಂಗ ಸಮಾಜದ ಸದಸ್ಯ ಮಲ್ಲಿಕಾರ್ಜುನ ಕಡಕೋಳ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಶ್ವೇಶ್ವರಯ್ಯ ಭವನದಲ್ಲಿ ರವಿವಾರ ವಿಶ್ವಜ್ಯೋತಿ ಪ್ರತಿಷ್ಠಾನ ಹಮ್ಮಿಕೊಂಡಿದ್ದ 3ನೇ ಕಲಬುರಗಿ ಸಾಹಿತ್ಯ ಸಂಭ್ರಮ-2019 (ಸಾಹಿತ್ಯ-ಸಂಸ್ಕೃತಿಗೆ ಪ್ರೇರಣಾ ಕಾರ್ಯ) ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಂಸ್ಕೃತಿ ಪ್ರತಿಬಿಂಬಿಸುವಂತಹ 22 ಸಾಂಸ್ಕೃತಿಕ ಅಕಾಡೆಮಿಗಳೆಲ್ಲವೂ ಬೆಂಗಳೂರಿನಲ್ಲೇ ಗೂಟ ಬಡಿದುಕೊಂಡಿವೆ. ಸಾಂಸ್ಕೃತಿಕವಾದ ಸುಂದರ ಕರ್ನಾಟಕ ನೋಡಲು ಅಕಾಡೆಮಿಗಳ ವಿಕೇಂದ್ರೀಕರಣಗೊಳ್ಳಬೇಕಿದೆ ಎಂದರು.

ಕೊಂಕಣಿ, ಅರೆ ಭಾಷಾ, ತುಳು ಅಕಾಡೆಮಿಗಳು ಮಡಿಕೇರಿ ಮತ್ತು ಮಂಗಳೂರಿನಲ್ಲಿ ಇವೆ. ಅದೇ ರೀತಿ ಉರ್ದು ಮಾತನಾಡುವ ಕಲಬುರಗಿ ಪ್ರಾಂತದಲ್ಲಿ ಉರ್ದು ಅಕಾಡೆಮಿ ಇರಬೇಕಿತ್ತು. ಆದರೆ, ಅದು ಆಗಿಲ್ಲ. ಇದನ್ನು ನಾವು ಕೇಳಲು ಹೋಗುತ್ತಿಲ್ಲ. ಒಂದು ವೇಳೆ ಕೇಳಿದರೂ ನಿಮಗೆ ಕೊಟ್ಟಿದ್ದೇವಲ್ರಿ ಎನ್ನುವ ಜ್ಞಾನದ ಅಹಂಕಾರ ಬೆಂಗಳೂರಿನಲ್ಲಿ ತುಂಬಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮನುಷ್ಯ ಮತ್ತು ಸಭ್ಯ ಸಂಸ್ಕೃತಿ ಕಣ್ಮರೆ ಆಗುತ್ತಿದೆ. ದೇಶದ ತುಂಬಾ ಸಂಕಷ್ಟ ಹಾಗೂ ಅಸಹಿಷ್ಣುತೆ ವಾತಾವರಣವಿದೆ. ಸಾಹಿತಿಗಳು ತಮ್ಮ ಜವಾಬ್ದಾರಿ ಮೆರೆಯುತ್ತಿದ್ದಾರೆ. ಗಂಭೀರವಾದ ಸಾಹಿತ್ಯಿಕ ಚಿಂತನೆಗಳ ಜೊತೆಗೆ ಸಾಂಸ್ಕೃತಿಕ ಸಂಕಥನ ಬರೆಯುವವರು ಸಾಮಾಜಿಕ ಸಂಕಷ್ಟವನ್ನು ಸಾಹಿತ್ಯಿಕ ರೂಪದಲ್ಲಿ ತರಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಡಾ| ನಾಗೇಂದ್ರ ಮಸೂತಿ ಮಾತನಾಡಿ, ಒಬ್ಬ ಲೇಖಕ, ಸಾಹಿತಿಯಾದವನು ಜನತೆಗೆ ಏನು ಕೊಡಬೇಕು, ಯಾವುದನ್ನು ಬರೆಯಬೇಕೆಂಬ ತೊಡಕುಗಳು ಇವೆ. ಬರೆದ ಪುಸ್ತಕಗಳೆಷ್ಟು ಎನ್ನುವುದು ಮುಖ್ಯವಲ್ಲ. ಅದರ ಮೌಲ್ಯ ಎಷ್ಟಿದೆ, ಎಷ್ಟು ಜನರಿಗೆ ತಲುಪಿದೆ ಎನ್ನುವುದು ಮಹತ್ವದ್ದು ಎಂದರು.

ವಿಶ್ವಜ್ಯೋತಿ ಪ್ರತಿಷ್ಠಾನ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ ಪ್ರಾಸಾವಿಕವಾಗಿ ಮಾತನಾಡಿದರು. ಸ್ವಾಗತ ಸಮಿತಿ ಗೌರವಾಧ್ಯಕ್ಷೆ ಶಕುಂತಲಾ ಪಾಟೀಲ ಜಾವಳಿ, ಕಾರ್ಯಾಧ್ಯಕ್ಷ ಜಗದೀಶ ಮರಪಳ್ಳಿ ಆಶಯ ನುಡಿಗಳನ್ನಾಡಿದರು.

ಹಿರಿಯ ಸಾಹಿತಿ ಡಾ| ಸ್ವಾಮಿರಾವ್‌ ಕುಲಕರ್ಣಿ, ಸಂಗಮನಾಥ ರಬಶೆಟ್ಟಿ, ಅರುಣಕುಮಾರ ಎಸ್‌. ಪಾಟೀಲ, ಡಾ| ಬಾಬುರಾವ್‌ ಶೇರಿಕಾರ, ಬಿ.ಎಸ್‌. ಮಾಲಿಪಾಟೀಲ, ಬಿ.ಎಸ್‌. ದೇಸಾಯಿ ಹಾಗೂ ಮತ್ತಿತರರು ಇದ್ದರು.
· ಮಲ್ಲಿಕಾರ್ಜುನ ಕಡಕೋಳ, ಕರ್ನಾಟಕ ರಂಗ ಸಮಾಜದ ಸದಸ್ಯ

ಬಂಡಾಯ ಅಂತರ್ಗತ
ಬಂಡಾಯ ಸಾಹಿತ್ಯ ನಿಂತಿದೆ ಎಂದು ಕೆಲವರು ಆರಾಧಿಸಿದ್ದು ಇದೆ. ಮನುಷ್ಯ ಸಂಸ್ಕೃತಿ ಇರೋವರೆಗೂ ಪ್ರತಿಭಟನೆ ಕಾವು ಇದ್ದೇ ಇರುತ್ತದೆ. ಪ್ರತಿಭಟನೆ ಸ್ವರೂಪ, ಮನೋಧರ್ಮ ಬೇರೆ ಇರಬಹುದು. ಆದರೆ, ಇಂದಿಗೂ ಬಂಡಾಯ ಸಾಹಿತ್ಯ ಅಂತರ್ಗತವಾಗಿ ಹರಿಯುತ್ತಿದೆ. ದೇಶದಲ್ಲಿಂದು ಎಡ-ಬಲ ಪಂಥದ ಹೆಸರಲ್ಲಿ ಬರೀ ವಾದ-ವಿವಾದಗಳು ನಡೆಯುತ್ತಿವೆ. ಸಂಸ್ಕೃತಿ, ಸಾಹಿತ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಎಡ-ಬಲ ಪಂಥಾವರಣ ಸೃಷ್ಟಿಯಾಗಿದೆ. ಯಾವುದನ್ನು ಹೇಗೆ ಗ್ರಹಿಸಿಕೊಳ್ಳಬೇಕು ಎಂದು ತಿಳಿಯದೆ ಯುವಕರಲ್ಲಿ ಏಕಮುಖೀ ಸಂಸ್ಕೃತಿ ಭಾವೋದ್ರೇಕವಾಗಿ ಆವರಿಸಿಕೊಳ್ಳುತ್ತಿದೆ. ಇದರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಬಂದಿದ್ದು, ವಾದ-ವಿವಾದ ಬದಲಿಗೆ ಸಂವಾದ ನಡೆಯಬೇಕು.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.