ನ್ಯಾ| ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಾಯ


Team Udayavani, Mar 12, 2018, 1:19 PM IST

gul-7.jpg

ಸೇಡಂ: ನ್ಯಾ| ಎ.ಜೆ. ಸದಾಶಿವ ಆಯೋಗ ರಚಿತ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಮಾದಿಗರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡ ಸೇಡಂನಿಂದ ಕಲಬುರಗಿ ಕಾಲ್ನಡಿಗೆ ಜಾಥಾಕ್ಕೆ ಹಂಪಿ ಮಾತಂಗ ಮಠದ ಪೂರ್ಣಾನಂದ ಸ್ವಾಮೀಜಿ ಚಾಲನೆ ನೀಡಿದರು.

ಪಟ್ಟಣದ ಅಂಬೇಡ್ಕರ್‌ ವೃತ್ತದಿಂದ ಹೊರಟ ಜಾಥಾ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ಕಲಬುರಗಿ ಕ್ರಾಸ್‌ ಮೂಲಕ
ಮುಂದುವರಿಯಿತು. ಈ ವೇಳೆ ಮಾತನಾಡಿದ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ವಿಜಯಕುಮಾರ ಆಡಕಿ, ಅನೇಕ ವರ್ಷಗಳಿಂದ ಸದಾಶಿವ ಆಯೋಗದ ವರದಿ ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಆದರೆ ಯಾವ
ಕಾರಣಕ್ಕಾಗಿ ವರದಿ ಅನುಷ್ಠಾನಕ್ಕೆ ಹಿಂದೇಟು ಹಾಕಲಾಗುತ್ತಿದೆ ಎಂಬುದು ಅರಿಯದಂತಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹುಬ್ಬಳ್ಳಿ, ಕೂಡಲಸಂಗಮ ಮತ್ತು ಬೆಂಗಳೂರಿನಲ್ಲಿ ನಡೆದ ಸಮಾರಂಭಗಳಲ್ಲಿ ಸದಾಶಿವ ಆಯೋಗದ ವರದಿ ಅನುಷ್ಠಾನ ಮಾಡುವ ಭರವಸೆ ನೀಡಿ ಈಗ ಕೈ ಚೆಲ್ಲಿ ಕೂತಿದ್ದಾರೆ ಎಂದು ಆರೋಪಿಸಿದರು.

ಜಾಥಾ ವ್ಯವಸ್ಥಾಪಕ ಶ್ರೀಶೈಲ ಎಂ.ಜಿ. ಮಾತನಾಡಿ, ಸರ್ಕಾರ ದಲಿತರ ಶಕ್ತಿ ಅರಿತು ಕೂಡಲೇ ವರದಿ ಜಾರಿಗೆ ಮುಂದಾಗಬೇಕು. ಇಲ್ಲವಾದಲ್ಲಿ ಹೋರಾಟಗಳು ಉಗ್ರ ಸ್ವರೂಪ ಪಡೆದುಕೊಳ್ಳಲಿವೆ ಎಂದು ಹೇಳಿದರು.

ಸುಂದರ ಮಂಗಾ, ಜಗನ್ನಾಥ ಚಿಂತಪಳ್ಳಿ, ಜಾನ ಹೊಸಳ್ಳಿಕರ್‌, ಮಾರುತಿ ಕೊಡಂಗಲಕರ್‌, ಗಣಪತರಾವ ಚಿಮ್ಮನಚೋಡ್ಕರ್‌, ಕಾಶಿನಾಥ ನಾಟೀಕಾರ, ಶರಣಪ್ಪ ಕಣೇಕಲ್‌, ರಾಮು ಕಣೇಕಲ್‌, ಲೊಕೇಶ ಹಂದರಕಿ, ಸುರೇಶ ಇವಣಿ, ಮಲ್ಲಿಕಾರ್ಜುನ ರಾಜೊಳ್ಳಿ, ಬಸವರಾಜ ಕಾಳಗಿ, ರಾಜು ಕಾಳಗಿ, ಶಂಭುಲಿಂಗ ನಾಟೀಕಾರ, ಈರಪ್ಪ
ಗುಂಡಗುರ್ತಿ, ಮಹೇಶ, ಹಣಮಂತ ಭರತನೂರ, ಅಶೋಕ ಫೀರಂಗಿ, ಅನಂತಪ್ಪ ಮೋತಕಪಲ್ಲಿ, ವೆಂಕಟಪ್ಪ ಮೋತಕಪಲ್ಲಿ, ಹಣಮಂತ ಲೋಕಪಲ್ಲಿ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.