ಉದ್ಘಾಟನೆ ಭಾಗ್ಯ ಕಾಣದ ಕಾಳಗಿ ರೈತ ಸಂಪರ್ಕ ಕೇಂದ್ರ
Team Udayavani, Jan 2, 2019, 9:35 AM IST
ಕಾಳಗಿ: ಭೂಸೇನಾ ನಿಗಮ ವತಿಯಿಂದ ನೂತನ ತಾಲೂಕು ಕೇಂದ್ರ ಕಾಳಗಿ ಪಟ್ಟಣದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ನಿರ್ಮಿಸಲಾದ ರೈತ ಸಂಪರ್ಕ ಕೇಂದ್ರ ಕಟ್ಟಡ ಉದ್ಘಾಟನೆ ಭಾಗ್ಯ ಕಾಣದೆ ಅಕ್ರಮ ಚಟುವಟಿಗಳ ತಾಣವಾಗಿದೆ.
ಪಟ್ಟಣದ ರೈತ ಸಂಪರ್ಕ ಕೇಂದ್ರವು ಟೆಂಗಳಿ, ಕೊಡದೂರ, ರಾಜಾಪುರ, ಕಾಳಗಿ, ಗೋಟೂರ, ಚಿಂಚೋಳಿ (ಎಚ್), ಕಂದಗೂಳ, ಅರಣಕಲ್, ಬೆಡಸೂರ, ಹೇರೂರ, ಶೆಳ್ಳಗಿಯ 11 ಗ್ರಾಪಂ ವ್ಯಾಪ್ತಿಯ ಒಟ್ಟು 50ಕ್ಕೂ ಹೆಚ್ಚಿನ ಗ್ರಾಮ ಮತ್ತು ತಾಂಡಾಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿನ ರೈತ ಸಂಪರ್ಕ ಕೇಂದ್ರಕ್ಕೆ ಬರುವ ಕೃಷಿ ಸಾಮಗ್ರಿಗಳಾದ ಲಘು ಪೋಷಾಕಾಂಶಗಳು, ಬೀಜ, ರಸಗೊಬ್ಬರ, ಕೀಟನಾಶಕ, ಇತರೆ ಕೃಷಿ ಪರಿಕರಗಳನ್ನು ಖರೀಸಲು ಸ್ಥಳದ ಅಭಾವವಿದ್ದು, ಕೃಷಿ ಸಲಕರಣೆಗಳ ಶೇಖರಣೆಗೆ ಕೋಣೆಗಳ ಕೊರತೆಯಿಂದ ಬೇರೆ ಕಟ್ಟಡದಲ್ಲಿ ಸಂಗ್ರಹಿಸುವ ಅನಿವಾರ್ಯತೆ ಬಂದೊದಗಿದೆ.
ಹಳೆ ಕಟ್ಟಡ ಚಿಕ್ಕದಿರುವುದರಿಂದ ಸಮಸ್ಯೆ ಅರಿತ ಜನಪ್ರತಿನಿಧಿಗಳು ಕಳೆದ ಎರಡು ವರ್ಷಗಳ ಹಿಂದೆ ಭೂ ಸೇನಾ ನಿಗಮ ಅಡಿಯಲ್ಲಿ 38ಲಕ್ಷ ರೂ. ವೆಚ್ಚದಲ್ಲಿ ಪಟ್ಟಣದ ಭರತನೂರ ರಸ್ತೆ ಮಾರ್ಗದಲ್ಲಿ ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡ ನಿರ್ಮಿಸಲಾಗಿದೆ. ಸುಸಜ್ಜಿತವಾಗಿ ನಿರ್ಮಾಣವಾದ ಈ ಕಟ್ಟಡಕ್ಕೆ ಮೂಲಭೂತ ಸೌಲಭ್ಯಗಳಾದ ವಿದ್ಯುತ್, ಕುಡಿಯುವ ನೀರು, ರಸ್ತೆ ಸಂಪರ್ಕ ವ್ಯವಸ್ಥೆ ಕಲ್ಪಿಸಿಲ್ಲ. ರಐತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಈ ಕಟ್ಟಡವನ್ನು ಇನ್ನುವರೆಗೂ ಹಸ್ತಾಂತರಿಸಿಲ್ಲ. ನಿರ್ಮಾಣವಾದ ಕಟ್ಟಡ ಹಾಳು ಬಿದ್ದಿದ್ದು, ಕುಡುಕರ, ಪೋಲಿ ಹುಡುಗರ ಅಕ್ರಮ ಚಟುವಟಿಕೆಗಳ ತಾಣವಾಗಿದೆ.
ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ವಿದ್ಯುತ್ ಸೌಲಭ್ಯ ಕಲ್ಪಿಸಲು ಗುತ್ತೇದಾರರಿಗೆ ತಿಳಿಸಲಾಗಿದೆ. ಇನ್ನುಳಿದ ಕೆಲಸ ಪೂರ್ಣಗೊಳಿಸಿ 15ದಿನಗಳ ಒಳಗಾಗಿ ಕೃಷಿ ಅಧಿಕಾರಿಗಳಿಗೆ ಕಟ್ಟಡ ಹಸ್ತಾಂತರಿಸಲಾಗುವುದು.
ಲಿಂಗನಗೌಡ ಪಾಟೀಲ,
ಲ್ಯಾಂಡ್ ಆರ್ಮಿ ಎಇಇ
ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡದಲ್ಲಿ ಇನ್ನು ಕೆಲಸಗಳು ಬಾಕಿ ಇವೆ. ಕೆಲಸ ಪೂರ್ಣಗೊಳಿಸಿ ಹಸ್ತಾಂತರಿಸಿದರೆ ಶೀಘ್ರವೇ ಕಟ್ಟಡ ಉದ್ಘಾಟಿಸಲಾಗುವುದು.
ಎಸ್.ಎಚ್. ಗಡಗಿಮನಿ,
ಸಹಾಯಕ ಕೃಷಿ ನಿರ್ದೇಶಕ ಚಿತ್ತಾಪೂರ
ಭೀಮರಾಯ ಕುಡ್ಡಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ
Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್!: 7 ಮಂದಿ ಸೆರೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್