ಪಠ್ಯಪುಸ್ತಕಕ್ಕೂ ಸಿಗಲಿ ತಾಂತ್ರಿಕ ಮೆರುಗು

ಹಿರಿಯ ತಂತ್ರಾಂಶ ತಜ್ಞ ಜಿ.ಎನ್‌. ನರಸಿಂಹಮೂರ್ತಿ ಆಗ್ರಹ | ಸಿದ್ಧ ಮಾದರಿ ಪಠ್ಯಪುಸ್ತಕದ ರೂಪ ಬದಲಾಗಲೆಂಬ ಆಶಯ

Team Udayavani, Feb 6, 2020, 10:41 AM IST

6-February-1

ಕಲಬುರಗಿ: ಸಾಂಪ್ರದಾಯಿಕ ಸ್ಥಿತಿಯಲ್ಲಿರುವ ಶಾಲಾ ಪಠ್ಯಗಳು ವಿದ್ಯುನ್ಮಾನ ರೂಪ ಪಡೆಯಬೇಕಾದ ಅಗತ್ಯವಿದೆ ಎಂದು ಹಿರಿಯ ತಂತ್ರಾಂಶ ತಜ್ಞ ಜಿ.ಎನ್‌. ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.

ಭಾಷಾ ಕಲಿಕೆಯಲ್ಲಿ ತಂತ್ರಜ್ಞಾನ ಎಂಬ ವಿಷಯದ ಕುರಿತು ಮಾತನಾಡಿದ ಅವರು, ನಮ್ಮ ಪಠ್ಯಪುಸ್ತಕಗಳು ಇನ್ನೂ ಸಿದ್ಧ ಸಂಪ್ರದಾಯದಲ್ಲಿಯೇ ಇವೆ. ಅವುಗಳಿಗೆ ತಂತ್ರಜ್ಞಾನದ ಸ್ಪರ್ಶ ನೀಡಬೇಕಾಗಿದೆ. ಆಗ ಮಾತ್ರ ಕನ್ನಡ ಭಾಷೆ ಮತ್ತಷ್ಟು ಜನಸಾಮಾನ್ಯರ ಭಾಷೆಯಾಗಿ ಉಳಿಯಲು ಸಾಧ್ಯ ಎಂದು ಹೇಳಿದರು.

ಭಾಷಾ ಕಲಿಕೆ ಒಂದೇ ರೀತಿಯಲ್ಲಿ ಇಲ್ಲ. ಅದು ಪ್ರದೇಶವಾರು ಭಿನ್ನವಾಗಿದೆ. ಹಲವು ವಿಶ್ವವಿದ್ಯಾಲಯಗಳು, ಸಂಘ-ಸಂಸ್ಥೆಗಳು ಕನ್ನಡ ಭಾಷೆ ಕಲಿಸುವ ನಿಟ್ಟಿನಲ್ಲಿ ಮಗ್ನವಾಗಿವೆ. ಆದರೆ ಕನ್ನಡವನ್ನು ಇನ್ನೂ ವೈಜ್ಞಾನಿಕ ರೀತಿಯಲ್ಲಿ ಕಲಿಸುವಂತಹ ಕೆಲಸವನ್ನು ಶಾಲಾ-ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ದೆಹಲಿಯ ಜವಾಹರಲಾಲ್‌ ನೆಹರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ, ತನ್ನ ತಂತ್ರಾಂಶಗಳ ಮೂಲಕ ಕನ್ನಡ ಕಲಿಸುವ ಉಪಯುಕ್ತ ಕೆಲಸ ಮಾಡುತ್ತಿದೆ ಎಂದರು.

ಸರ್ಕಾರ ಕನ್ನಡ ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಇಂಗ್ಲಿಷ್‌ ಕಲಿಕೆ ಮುಂದಾಗುತ್ತಿರುವ ಈ ಹೊತ್ತಿನಲ್ಲಿ ಕನ್ನಡ ತಂತ್ರಾಂಶದ ಅಭಿವೃದ್ಧಿಯ ಬಗ್ಗೆ ಆಲೋಚನೆ ನಡೆಯಬೇಕಾಗಿದೆ. ಶಾಲಾ ಹಂತದಲ್ಲಿ ಇ-ಪುಸ್ತಕಗಳು ಬರಬೇಕಾಗಿದೆ. ಮಕ್ಕಳು ಬರೆದ ಕಥೆ, ಕವಿತೆಗಳನ್ನು ಇ-ಪುಸ್ತಕಗಳಲ್ಲಿ ಪ್ರಕಟಿಸಿದಾಗ ಭಾಷಾ ಕಲಿಕೆ ಜತೆಗೆ ಕನ್ನಡ ಕೂಡ ಮತ್ತಷ್ಟು ಮಕ್ಕಳ ಸ್ನೇಹಿ ಆಗಿ ಹತ್ತಿರವಾಗಲಿದೆ ಎಂದು ಹೇಳಿದರು.

ಈಗಾಗಲೇ ಮೊಬೈಲ್‌ಗ‌ಳಲ್ಲಿ ಕನ್ನಡ ಕಲಿಕೆ ಬಗ್ಗೆ ಸಾಕಷ್ಟು ತಂತ್ರಾಂಶಗಳ ಬಂದಿವೆ. ಹದಿನೈದರಿಂದ ಇಪ್ಪತ್ತು ತಂತ್ರಾಂಶಗಳು ಕಾರ್ಯನಿರತವಾಗಿವೆ. ತಂತ್ರಾಂಶದ ಜತೆಗೆ ಕನ್ನಡ ಕಲಿಸುವಂತಹ ಕಾರ್ಯ ಕನ್ನಡ ಶಾಲೆಗಳಲ್ಲಿ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಬೇಕಾಗಿದೆ ಎಂದು ಜಿ.ಎನ್‌.ನರಸಿಂಹಮೂರ್ತಿ ನುಡಿದರು.

ವಿಡಿಯೋ ಮತ್ತು ಕೇಳುವ ತಂತ್ರಜ್ಞಾನ ಹೊತ್ತಿಗೆಗಳು ಕೂಡ ಕನ್ನಡ ಬೆಳವಣಿಗೆಗೆ ಪೂರಕವಾಗಲಿದೆ. ಬಹುಮಾಧ್ಯಮ ಸಂವಹನದ ಮೂಲಕ ಕನ್ನಡ ಕಲಿಸಲಾಗುತ್ತದೆ. ಇಂತಹ ಮತ್ತಷ್ಟು ಸರಳೀಕೃತ ತಂತ್ರಜ್ಞಾನಗಳು ಕನ್ನಡಕ್ಕೆ ಬರುವ ಅಗತ್ಯವಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಇ-ತಂತ್ರಾಂಶ ಸಲಹೆಗಾರ ಬೇಳೂರು ಸುದರ್ಶನ ಮಾತನಾಡಿ, ಕನ್ನಡ ಭಾಷೆ ಕೀಲಿಮಣೆ ಸಮಸ್ಯೆ, ಅಕ್ಷರ ಸಂವಹನ ಸೇರಿದಂತೆ ತಂತ್ರಾಂಶಕ್ಕೆ ಸಂಬಂಧಿಸಿದ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮುಕ್ತ ತಂತ್ರಜ್ಞಾನ ನೀತಿ ಜಾರಿಯಾಗಬೇಕಾದ ಅಗತ್ಯವಿದೆ ಎಂದರು.

ಖಾಸಗಿ ನಿಯಂತ್ರಣದಿಂದ ಪಾರಾಗಲು ಸರ್ಕಾರ ಕೂಡ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ತಂತ್ರಾಂಶಗಳನ್ನು ದೇಶೀಕರಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆಯಿರಿಸಿದೆ. ತಂತ್ರಜ್ಞಾನವನ್ನು ಮುಕ್ತ ಜ್ಞಾನವನ್ನಾಗಿಸುವ ನೀಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಯುನಿಕೋಡ್‌ ಅನ್ನು ಎಲ್ಲರೂ ಬಳಕೆ ಮಾಡುವಂತಾದರೆ ಈ ಕ್ಷೇತ್ರದಲ್ಲಿ ಮತ್ತಷ್ಟು ಪ್ರಗತಿ ಸಾಧಿಸಬಹುದಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.