Kalaburagi: ಬಿಜೆಪಿ ಪಕ್ಷದ ಧ್ವಜಗಳನ್ನು ತೆರವು ಮಾಡಿದ ಪಾಲಿಕೆ; ಆಕ್ರೋಶ
Team Udayavani, Jan 29, 2024, 3:25 PM IST
ಕಲಬುರಗಿ: ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕ ಹಾಗೂ ನಗರ ಅಧ್ಯಕ್ಷರ ಪದಗ್ರಹಣಕ್ಕಾಗಿ ನಗರದ ಮುಖ್ಯ ರಸ್ತೆಗಳಲ್ಲಿ ನೆಡಲಾಗಿದ್ದ ಬಿಜೆಪಿ ಪಕ್ಷದ ಧ್ವಜಗಳನ್ನು ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಅನುಮತಿ ಪಡೆಯದಿದ್ದಕ್ಕೆ ಪಾಲಿಕೆ ಅಧಿಕಾರಿಗಳು ಪಾಲಿಕೆ ವಾಹನಗಳನ್ನು ತಂದು ನಗರದ ಮುಖ್ಯ ರಸ್ತೆಗಳಲ್ಲಿ ಹಾಕಲಾಗಿದ್ದ ಬಿಜೆಪಿ ಪಕ್ಷದ ಧ್ವಜಗಳನ್ನು ತೆರವು ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಹತಾಶ ಮನೋಭಾವನೆಯಿಂದ ಬಿಜೆಪಿ ಪಕ್ಷದ ಧ್ವಜ ತೆರವುಗೊಳಿಸಲು ಮುಂದಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಹಾಗೂ ಕಲಬುರಗಿ ನಗರಾಧ್ಯಕ್ಷ ಚಂದು ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಧ್ವಜವೂ ಅನುಮತಿ ಪಡೆಯದೆ ಹಾಕಿದ್ದಕ್ಕೆ ದಂಡ ಹಾಕಲಾಗಿತ್ತು. ತಮಗೂ ದಂಡ ಹಾಕಬೇಕಿತ್ತು ಎಂದು ಹೇಳಿದರು.
ಅನುಮತಿ ಪಡೆಯಲು ಪಾಲಿಕೆಗೆ ಪತ್ರ ಕೊಡಲಾಗಿದೆ. ರಜೆ ಇದ್ದ ಕಾರಣ ವಿಳಂಬವಾಗಿದೆ. ನಮಗೂ ದಂಡ ಹಾಕಿ ಬಿಜೆಪಿ ಸಮಾವೇಶ ಸುಗಮವಾಗಿ ನಡೆಯಲು ಅವಕಾಶ ನೀಡಬೇಕಿತ್ತು. ಹಿಂದಿನಿಂದ ಕಾಂಗ್ರೆಸ್ ಆಟವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಜಯೇಂದ್ರ ಅವರು ಪಕ್ಷದ ಅಧ್ಯಕ್ಷರಾದ ನಂತರ ಕಂಡು ಬರುತ್ತಿರುವ ವ್ಯಾಪಕ ಬೆಂಬಲ ಸಹಿಸದ ಕಾಂಗ್ರೆಸ್ ವಿಕೃತಿ ಮನಸ್ಸಿನಿಂದ ಪಕ್ಷದ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ