ಕಲಬುರಗಿಗೆ ಪ್ರಧಾನಿ: ಮಳಖೇಡ ಬಳಿ ವಿಶಾಲವಾದ 60 ಎಕರೆಯಲ್ಲಿ ಕಾರ್ಯಕ್ರಮ ಸಿದ್ದತೆ


Team Udayavani, Jan 10, 2023, 5:31 PM IST

ಕಲಬುರಗಿಗೆ ಪ್ರಧಾನಿ: ಮಳಖೇಡ ಬಳಿ ವಿಶಾಲವಾದ 60 ಎಕರೆಯಲ್ಲಿ ಕಾರ್ಯಕ್ರಮ ಸಿದ್ದತೆ

ಕಲಬುರಗಿ: ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ 19ಕ್ಕೆ ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್, ಕೆಕೆಆರ್ ಟಿಸಿ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ರಾಜಕುಮಾರ ಪಾಟೀಲ್ ತೇಲ್ಕೂರ ಹಾಗೂ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಡಿಸಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿಯಾಗಿ ಸಭೆ ನಡೆಸಿದರು.

ಸೇಡಂ ತಾಲೂಕಿನ ಮಳಖೇಡ ಬಳಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತೆ ಸುಮಾರು 60 ಎಕರೆ ವಿಶಾಲ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ ಐತಿಹಾಸಿಕ 30 ಸಾವಿರ ಸೇರಿದಂತೆ ವಿವಿಧ ಫಲಾನಭವಿಗಳು ಪಾಲ್ಗೊಳ್ಳಲಿದ್ದಾರೆ.‌ ಪ್ರಧಾನಮಂತ್ರಿಗಳು ಅಂದು ಕಲಬುರಗಿ ಸೇರಿದಂತೆ ಯಾದಗಿರಿ, ಬೀದರ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮತ್ತು ಜಿಲ್ಲೆಯ ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡುವರು.

ಕಾರ್ಯಕ್ರಮ ಸುಗಮ ನಿರ್ವಹಣೆ ಮತು ಯಶಸ್ಸಿಗೆ ವಿವಿಧ 10 ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಅಧಿಕಾರಿಗಳಿಗೆ ನೀಡಲಾಗುವ ಜವಾಬ್ದಾರಿಯನ್ನು ಚಾಚೂ ತಪ್ಪದೆ ಸಮರ್ಪಕವಾಗಿ ನಿರ್ವಹಿಸಬೇಕು. ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವು ಅಚ್ಚುಕಟ್ಟಾಗಿರಬೇಕು. ಮುನ್ನಚ್ಚರಿಕೆಯಾಗಿ ಕಾರ್ಯಕ್ರಮ ಸ್ಥಳದಲ್ಲಿ ಅಂಬುಲೆನ್ಸ್, ಅಗ್ನಿಶಾಮಕ ವಾಹನ ತೈನಾತಿಸಬೇಕು. ಬೇರೆ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರುವ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು. ಯಾವುದೇ ಲೋಪಕ್ಕೆ ಇಲ್ಲಿ ಅವಕಾಶವಿಲ್ಲ. ಸಣ್ಣ-ಪುಟ್ಟ ಏನೇ ಸಮಸ್ಯೆ ಇದ್ದರು ತಮ್ಮ ಗಮನಕ್ಕೆ ತರಬೇಕು ಎಂದು ತೇಲ್ಕೂರ, ರೇವೂರ ಹಾಗೂ ಡಿ.ಸಿ. ಯಶವಂತ ವಿ. ಗುರುಕರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ಸ್ಥಳಗಳಿಂದ ಫಲಾನುಭವಿಗಳನ್ನು ಕರೆತರಲು 2,500 ಸಾರಿಗೆ ಬಸ್ ವ್ಯವಸ್ಥೆ ಮಾಡಬೇಕು ಎಂದು ಕೆ.ಕೆ.ಅರ್.ಟಿ.ಸಿ. ಸಂಸ್ಥೆಯ ಎಂ.ಡಿ. ರಾಚಪ್ಪ ಅವರಿಗೆ ತಿಳಿಸಿದರು. ಇನ್ನು ಮಳಖೇಡ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮುಂಜಾಗ್ರತವಾಗಿ ಸಿ.ಎಚ್.ಸಿ. ಕೇಂದ್ರಕ್ಕೆ ಬೇಕಾಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಡಿ.ಎಚ್.ಓ ಡಾ.ರಾಜಶೇಖರ ಮಾಲಿ ಅವರಿಗೆ ಡಿ.ಸಿ. ನಿರ್ದೇಶನ ನೀಡಿದರು.

ಅಧಿಕಾರಿಗಳು ಕೇಂದ್ರಸ್ಥಾನ ಬಿಡುವಂತಿಲ್ಲ: ಪ್ರಧಾನ ಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಜನವರಿ 20ರ ವರೆಗೆ ಜಿಲ್ಲೆಯ ಯಾವುದೇ ಅಧಿಕಾರಿ-ಸಿಬ್ಬಂದಿ ಕೇಂದ್ರಸ್ಥಾನ ಬಿಡುವಂತಿಲ್ಲ. ಅಲ್ಲದೇ ಪ್ರತಿ ಕಚೇರಿಯಲ್ಲಿ ಶೇ.100ರ ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಬೇಕು. ಕೇಂದ್ರಸ್ಥಾನ ಬಿಡಬೇಕಾದಲ್ಲಿ ತಮ್ಮ ಅನುಮತಿ ಅಗತ್ಯ. ಉಲ್ಲಂಘಿಸಿದಲ್ಲಿ ಶಿಸ್ತು ಕ್ರಮ ಅನಿವಾರ್ಯ ಎಂದು ಡಿ.ಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಶಶೀಲ ಜಿ. ನಮೋಶಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ, ಎಸ್.ಪಿ. ಇಶಾ ಪಂತ್, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಅಯುಕ್ತ ಭುವನೇಶ ಪಾಟೀಲ ದೇವಿದಾಸ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಹಾಯಕ ಆಯುಕ್ತರಾದ ಮಮತಾ ಕುಮಾರಿ, ಕಾರ್ತಿಕ್ ಸೇರಿದಂತೆ ಎಸ್.ಪಿ.ಜಿ. ಭದ್ರತಾ ತಂಡದ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕಿನ ತಹಶೀಲ್ದಾರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.