ಕಲಬುರಗಿ ಡಿಸಿಸಿ ಬ್ಯಾಂಕ್ ಗೆ ಬಿರುಸಿನ ಮತದಾನ: ಅಧಿಕಾರಕ್ಕೆ ಕಾಂಗ್ರೆಸ್- ಬಿಜೆಪಿ ಫೈಟ್


Team Udayavani, Nov 29, 2020, 1:15 PM IST

ಕಲಬುರಗಿ ಡಿಸಿಸಿ ಬ್ಯಾಂಕ್ ಗೆ ಬಿರುಸಿನ ಮತದಾನ: ಅಧಿಕಾರಕ್ಕೆ ಕಾಂಗ್ರೆಸ್- ಬಿಜೆಪಿ ಫೈಟ್

ಕಲಬುರಗಿ: ಬಿಜೆಪಿ- ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಇಲ್ಲಿನ ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ಗೆ ರವಿವಾರ ಇಂದು ಚುನಾವಣೆ ನಡೆಯುತ್ತಿದ್ದು, ಬಿರುಸಿನ ಮತದಾನ ನಡೆಯುತ್ತಿದೆ.

ಚುನಾವಣೆಗೆ ಅಧಿಸೂಚನೆ ಹೊರ ಬಿದ್ದ ನಂತರ ದಿನಾಲು ಒಂದಿಲ್ಲ ಒಂದು ತಂತ್ರ- ಪ್ರತಿತಂತ್ರ ನಡೆಯುತ್ತಿರುವ ಪರಿಣಾಮ ಚುನಾವಣೆಗೆ ಇನ್ನಿಲ್ಲದ ರಂಗು ಬಂದಿದೆ. ಒಂದು ಸಲವಾದರೂ ಹೇಗಾದರೂ ಮಾಡಿ ಬ್ಯಾಂಕ್ ನ ಆಡಳಿತದ ಗದ್ದುಗೆ ಹಿಡಿಯಲೇಬೇಕೆಂದು ಬಿಜೆಪಿ ಪಣ ತೊಟ್ಟಿದ್ದರಿಂದ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ತನ್ನ ಕೈಯಿಂದ ಅಧಿಕಾರ ತಪ್ಪಬಾರದು ಎಂದು ರಣತಂತ್ರ ರೂಪಿಸಿದೆ. ಸಹಕಾರಿ ಕ್ಷೇತ್ರದ ಚುನಾವಣೆ ಸಾರ್ವತ್ರಿಕ ಚುನಾವಣೆ ಮೀರಿಸುವ ಮಟ್ಟಿಗೆ ಕಾವೇರಿದೆ.

ಬ್ಯಾಂಕ್ ನ ಒಟ್ಟಾರೆ 13 ಸ್ಥಾನಗಳಲ್ಲಿ 7 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದು, 6 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯುತ್ತಿದೆ. ಸಂಜೆ 4ರ ವರೆಗೆ ಚುನಾವಣೆ ನಡೆದು ತದನಂತರ ಮತ ಏಣಿಕೆ ನಡೆದು ಒಂದು ಗಂಟೆ ನಂತರ ಫಲಿತಾಂಶ ಹೊರ ಬೀಳಲಿದೆ.

ಇದನ್ನೂ ಓದಿ:ಲವ್ ಜಿಹಾದ್ ಕಾಯ್ದೆ ತರುವಮೊದಲು ಯಾವ ನಾಯಕರ ಮಕ್ಕಳುಯಾರನ್ನು ಲವ್ ಮಾಡಿದ್ದಾರೆ ನೋಡಲಿ:ಡಿಕೆಶಿ

ಬ್ಯಾಂಕ್ ನ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಸೋಮಶೇಖರ್ ಗೋನಾಯಕ ಪಟ್ಟಣ ಸಹಕಾರಿ ಕ್ಷೇತ್ರದಿಂದ ಹಾಗೂ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕ ಕೇದಾರಲಿಂಗಯ್ಯ, ಹಿರೇಮಠ ಜೇವರ್ಗಿ ತಾಲೂಕಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಕ್ಷೇತ್ರದಿಂದ ಮತ್ತು ಹಾಲಿ ನಿರ್ದೇಶಕ ಗೌತಮ ಪಾಟೀಲ್ ಚಿಂಚೋಳಿ ತಾಲೂಕಿನಿಂದ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೆಂಟರಾದ (ಬೀಗರು) ಶಿವಾನಂದ ಮಾನಕರ ಗೊಬ್ಬುರ, ಟಿಎಪಿಸಿಎಂ ಕ್ಷೇತ್ರದಿಂದ ಸ್ಪರ್ಧಾ ಕಣದಲ್ಲಿದ್ದು, ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗುತ್ತಿದ್ದು, ಸಂಜೆ ಬಹಿರಂಗಗೊಳ್ಳಲಿದೆ.

ಬೆಳಿಗ್ಗೆ 9ಕ್ಕೆ ಮತದಾನ ಶುರುವಾಗಿದ್ದು, ಮಧ್ಯಾಹ್ನ 12ರ ಹೊತ್ತಿಗೆ ಶೇ 88 ರಷ್ಟು ಮತದಾನವಾಗಿದೆ.

ಅವಿರೋಧವಾಗಿ ಆಯ್ಕೆಯಾಗಿರುವ ಏಳು ನಿರ್ದೆಶಕರಲ್ಲಿ ಐವರು ಕಾಂಗ್ರೆಸ್ ಬೆಂಬಲಿತರಿದ್ದರೆ ಇಬ್ಬರು ಬಿಜೆಪಿಯವರಿದ್ದಾರೆ. 13 ಸ್ಥಾನಗಳ ಜತೆಗೇ ಸರ್ಕಾರದಿಂದ ಒಬ್ಬರು ನಾಮನಿರ್ದೇಶನ ಇಬ್ಬರು ಸಹಕಾರಿ ಅಧಿಕಾರಿಗಳು ಸೇರಿ ಒಟ್ಟಾರೆ 16 ಸದಸ್ಯ ಬಲಾಬಲ ಹೊಂದಲಿದ್ದು, ಬ್ಯಾಂಕ್‌ ನಲ್ಲಿ ಆಡಳಿತದ ಅಧಿಕಾರ ಹೊಂದಲು 9 ಸದಸ್ಯ ನಿರ್ದೇಶಕರ ಬೆಂಬಲದ ಅಗತ್ಯವಿದೆ. ಬ್ಯಾಂಕ್ ನ ಆಡಳಿತ ಪಡೆಯಲು ಬಿಜೆಪಿ- ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.