ಕಲಬುರಗಿ: ರೌಡಿ ಶೀಟರ್ ರಮೇಶ ಕಾಳೆ ಗಡಿಪಾರು
Team Udayavani, May 24, 2022, 2:31 PM IST
ಕಲಬುರಗಿ: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ರೌಡಿಶೀಟರ್ ರಮೇಶ ವಿಜಯಕುಮಾರ ಕಾಳೆ (53 ವ) ನನ್ನು ಒಂದು ವರ್ಷದ ಅವಧಿಗೆ ಕೊಡಗು ಜಿಲ್ಲೆಯ ಭಾಗಮಂಡಲ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಈತ ಕಳೆದ ಹಲವಾರು ವರ್ಷಗಳಿಂದ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ನಗರದ ಹಲವು ಪೊಲೀಸ್ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆದರೂ ಆತ ತನ್ನ ಅಕ್ರಮವನ್ನು ಮುಂದುವರಿಸಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಗಡಿಪಾರು ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ. ವೈ.ಎಸ್.ರವಿಕುಮಾರ ಹಾಗೂ ಡಿಸಿಪಿ ಅಡೂರು ಶ್ರೀನಿವಾಸಲು ತಿಳಿಸಿದ್ದಾರೆ.
ಇದನ್ನೂ ಓದಿ:ಆಫ್ರಿಕಾ: ಮಹಿಳೆಯನ್ನು ಕೊಂದ ಟಗರು, ಮೂರು ವರ್ಷ ಜೈಲುಶಿಕ್ಷೆ ವಿಧಿಸಿದ ಕೋರ್ಟ್
ಬ್ರಹ್ಮಪುರ ಪೊಲೀಸ್ ಠಾಣೆಯ ನಿವಾಸಿಯಾದ ಈತ ಜಾಮೀನು ಪಡೆದುಕೊಂಡು ಹೊರ ಬಂದ ಬಳಿಕ ಗಾಂಜಾ ಮಾರಾಟವನ್ನು ಕೈ ಬಿಟ್ಟಿರಲಿಲ್ಲ. ಅಲ್ಲದೆ, ಗಾಂಜಾ ಮಾರಾಟದಿಂದ ಯುವಕರು, ವಿದ್ಯಾರ್ಥಿಗಳನ್ನು ಮಾದಕ ವ್ಯಸನಿಗಳನ್ನಾಗಿ ಮಾಡುವಲ್ಲಿ ಪ್ರಮುಖ ಎನ್ನಿಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್