ರಾಜ್ಯದ 22 ಬೌದ್ಧ ನೆಲೆಗಳ ಅಧ್ಯಯನ

ಇತಿಹಾಸ ಸಂಪುಟದ ರೂಪದಲ್ಲಿ ಬಿಡುಗಡೆಕಲ್ಯಾಣ ಕರ್ನಾಟಕದಲ್ಲಿ ಬೌದ್ಧ ಸಂಪತ್ತು ಹೇರಳ

Team Udayavani, Mar 12, 2020, 10:39 AM IST

12-March-1

ಕಲಬುರಗಿ: ವೈದಿಕ, ಜೈನ, ಬೌದ್ಧ ಭಾರತದ ಮೂಲ ಪರಂಪರೆಗಳಾಗಿವೆ. ಕರ್ನಾಟಕದಲ್ಲಿ ಪ್ರಸಿದ್ಧ 22 ಬೌದ್ಧ ನೆಲೆಗಳಿದ್ದು, ಅವುಗಳ ಬಗ್ಗೆ ಅಧ್ಯಯನ ನಡೆಯುತ್ತಿದೆ. ಮುಂದಿನ ಆರೇಳು ತಿಂಗಳಲ್ಲಿ ಸಂಪೂರ್ಣ ಇತಿಹಾಸ ಸಂಪುಟದ ರೂಪದಲ್ಲಿ ಹೊರ ಬರಲಿದೆ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ| ಮಲ್ಲೇಪುರಂ ಜಿ. ವೆಂಕಟೇಶ ಹೇಳಿದರು.

ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಾ ಗಾಂಧಿ ಸಭಾಂಗಣದಲ್ಲಿ ಬುಧವಾರ ಪಾಲಿ  ಮತ್ತು ಬೌದ್ಧ ಅಧ್ಯಯನ ಸಂಸ್ಥೆ, ಕನ್ನಡ ಅಧ್ಯಯನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಬೌದ್ಧ ಸಾಹಿತ್ಯ ಸಮ್ಮೇಳನ ಮತ್ತು ಕನ್ನಡ ಬೌದ್ಧ ಸಾಹಿತ್ಯ ಸಂಪುಟಗಳ ಜನಾರ್ಪಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೆಂಗಳೂರು ರಾಜಘಟ್ಟ ಬೌದ್ಧ ಕ್ಷೇತ್ರದ ಇತಿಹಾಸ ತಕ್ಕಮಟ್ಟಿಗೆ ದಾಖಲಾಗಿದೆ. ಆದರೆ, ಕಲಬುರಗಿ ಜಿಲ್ಲೆಯ ಸನ್ನತಿ ಸೇರಿದಂತೆ ಉಳಿದ ಕ್ಷೇತ್ರಗಳ ಇತಿಹಾಸ ಹೊರಬರಬೇಕಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಯುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಬೌದ್ಧ ಸಂಪತ್ತು ಹೇರಳವಾಗಿದೆ ಎಂದರು.

ಅನುವಾದದ ಮೂಲಕ ಬೌದ್ಧ ಸಾಹಿತ್ಯ ಜನರಿಗೆ ತಲುಪಿದೆ. ಕರ್ನಾಟಕದಲ್ಲಿ ನಾರಾಯಣ ಶಾಸ್ತ್ರೀಗಳು ಪಾಲಿಯಿಂದ ಕನ್ನಡಕ್ಕೆ ಅನುವಾದ ಪ್ರಕ್ರಿಯೆ ಆರಂಭಿಸಿದರು. 1910ರಲ್ಲಿ ಕನ್ನಡದ ಪ್ರಥಮ ಅನುವಾದಿತ ಗ್ರಂಥ ಹೊರ ಬಂದಿತ್ತು. ಆರಂಭದಿಂದಲೂ ಬೌದ್ಧ ಸಾಹಿತ್ಯದ ಬಗ್ಗೆ ಹೆಚ್ಚಿನ ಅಧ್ಯಯನ ಬಂಗಾಳಿ ಮತ್ತು ಮರಾಠಿಯಲ್ಲಿ ನಡೆದಿದ್ದು, ಕನ್ನಡ ಮೂರನೇ ಸ್ಥಾನದಲ್ಲಿದೆ ಎಂದು ತಿಳಿಸಿದರು. ಕನ್ನಡದಲ್ಲಿ ಸಾ.ಕು. ರಾಮಚಂದ್ರ ರಾಯರು, ಜಿ.ಪಿ. ರಾಜರತ್ನಂ, ಗೋವಿಂದ ಪೈ ಬೌದ್ಧ ಸಾಹಿತ್ಯದ ಬಗ್ಗೆ ಸಾಕಷ್ಟು ಅಧ್ಯಯನ ನಡೆಸಿದ್ದಾರೆ. ಪಾಲಿಯಿಂದ ಕನ್ನಡಕ್ಕೆ ಅನುವಾದಿಸಿ ಬೌದ್ಧ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಬೌದ್ಧಿಕವಾದ ಆಲೋಚನೆ ಇದ್ದರಷ್ಟೇ ಸಾಲದು ತಾತ್ವಿಕ ಅನುಷ್ಠಾನ ಮುಖ್ಯ ಎಂದು ಹೇಳಿದರು.

ರಾಜ್ಯದ ವಿಶ್ವವಿದ್ಯಾಲಯಗಳ ಇತಿಹಾಸದಲ್ಲಿ ಈ ರಾಷ್ಟ್ರೀಯ ಬೌದ್ಧ ಸಾಹಿತ್ಯ ಸಮ್ಮೇಳನ ವಿಶಿಷ್ಟವಾಗಿದ್ದು, ವಿಶ್ವವಿದ್ಯಾಲಯವೊಂದು ಆಯೋಜಿಸಿದ ಪ್ರಪ್ರಥಮ ಸಮ್ಮೇಳನವಾಗಿದೆ. ಒಟ್ಟಾರೆ ಬೌದ್ಧ ಸಾಹಿತ್ಯದ ಇತಿಹಾಸದಲ್ಲಿ ಇದನ್ನು ನಾಲ್ಕನೇ ಹಂತ ಎಂದು ಹೇಳಬಹುದಾಗಿದೆ. ವಿವಿಧ ರಾಜ್ಯಗಳ 72 ಜನ ವಿದ್ವಾಂಸರು ಪ್ರಬಂಧ ಮಂಡಿಸುತ್ತಿರುವುದು ಸಮ್ಮೇಳನದ ಹಿರಿಮೆ ಹೆಚ್ಚಿಸಲಿದೆ ಎಂದು ಶ್ಲಾಘಿಸಿದರು.

ಆರು ಗ್ರಂಥಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ| ಡಿ.ಜಿ. ಸಾಗರ, ಹೊರ ದೇಶದಲ್ಲಿ ವೈಜ್ಞಾನಿಕ ನೆಲಗಟ್ಟಿನಲ್ಲಿ ಬೌದ್ಧ ಧರ್ಮವನ್ನು ಅಪ್ಪಿಕೊಳ್ಳಲಾಗಿದೆ. ಆದರೆ, ಮೂಲ ನೆಲವಾದ ನಮ್ಮ ದೇಶದಲ್ಲಿ ವಿಚಾರ, ಆಚಾರ, ಪ್ರಚಾರ ಬದಲಾಗಿ ಕೇವಲ ಪ್ರಚಾರ ಮುಂಚೂಣಿಯಲ್ಲಿ ಇದೆ. ಇದರಿಂದ ಬೌದ್ಧ ಧರ್ಮ ಸೊರಗಿದೆ. ಹೀಗಾಗಿ ಇಂತಹ ಸಮ್ಮೇಳನಗಳು ಇವತ್ತಿನ ದಿನಗಳಲ್ಲಿ ತುಂಬ ಅವಶ್ಯಕವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಹಂಗಾಮಿ ಕುಲಪತಿ ಡಾ| ದೇವಿದಾಸ ಮಾಲೆ, ರಂಗಾಯಣ ನಿರ್ದೇಶಕ ಪ್ರಭಾಕರ ಜೋಷಿ, ಪಾಲಿ ಮತ್ತು ಬೌದ್ಧ ಅಧ್ಯಯನ ಸಂಸ್ಥೆ ಅಧ್ಯಕ್ಷ ಡಾ| ಎಚ್‌.ಟಿ. ಪೋತೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಸಿ. ಸೋಮಶೇಖರ, ಮೌಲ್ಯಮಾಪನ ಕುಲಪತಿ ಡಾ| ಸಂಜೀವ್‌ ಕುಮಾರ, ಸಿಡಿಂಕೇಟ್‌ ಸದಸ್ಯ ಚಂದ್ರಶೇಖರ್‌ ನಿಟ್ಟೂರ, ವಿದ್ಯಾ ವಿಷಯಕ ಪರಿಷತ್‌ ಸದಸ್ಯ ಪ್ರೊ| ಜಿ.ಎಂ. ವಿದ್ಯಾಸಾಗರ ಹಾಗೂ ವಿದ್ವಾಂಸರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

1-weeqw

PU Exam ನಕಲು ಮಾಡಲು ಸಹಕಾರ ನೀಡಿಲ್ಲವೆಂದು ಪೇದೆ‌ ಮೇಲೆಯೇ ಹಲ್ಲೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.