Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Team Udayavani, Mar 24, 2024, 2:35 PM IST
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮೂರು ಸಾವಿರ ಕೋ.ರೂ ನೀಡಿದ್ದೇವೆ. ಪಾಪರ್ ಆಗಿದ್ದರೆ ಹೇಗೆ ಸಾಧ್ಯವಾಗುತ್ತಿತ್ತು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಹಾರ ಕೇಳಿದ ಮಾತ್ರಕ್ಕೆ ಸರ್ಕಾರ ಪಾಪರ್ ಆಗಿದೆ ಎನ್ನುವುದು ಯಾವ ನ್ಯಾಯ? ಪರಿಹಾರ ಕೇಳುವುದು ತಪ್ಪಾ ಎಂದು ವಿಪಕ್ಷ ನಾಯಕರಿಗೆ ಸಚಿವ ಖಂಡ್ರೆ ತಿರುಗೇಟು ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ. ನಾವೇ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯಿಂದ ದೇಶದ ಜನ ಬೇಸತ್ತಿದ್ದಾರೆ. ಪ್ರತಿ ಪಕ್ಷಗಳ ಧ್ವನಿ ಹತ್ತಿಕ್ಕುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಕಾಂಗ್ರೆಸ್ ಗೆಲುವು ಸಂವಿಧಾನ ಗೆಲುವು ಆಗಿದೆ. ಪ್ರಜಾಪ್ರಭುತ್ವ ಗೆಲುವು ಸಂವಿಧಾನದ ಗೆಲುವು ಎಂದು ಜನ ನಂಬಿಕೊಂಡಿದ್ದಾರೆ. ಬಿಜೆಪಿಯವರು ಮೋದಿ ಅಲೆ ಇದೆ ಎಂದು ಸುಳ್ಳನ್ನು ಸತ್ಯವೆಂದು ಬಿಂಬಿಸುತ್ತಿದ್ದಾರೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡು ಮತ್ತೆ ಗೆಲ್ಲುವ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆ. ನಮ್ಮ ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದರು.
ಶಾಸಕ ಕಾಶಪ್ಪನವರ ಪತ್ನಿಗೆ ಟಿಕೆಟ್ ಕೈ ತಪ್ಪಿ ದ್ದಕ್ಕೆ ಸಿಡಿದೆದ್ದಿರುವುದನ್ನು ಪಕ್ಷದ ವರಿಷ್ಠರು ಮಾತನಾಡಿ ಬಗೆಹರಿಸುತ್ತಾರೆ. ಕಾಶಪ್ಪನವರ್ ಕಾಂಗ್ರೆಸ್ ಜತೆ ಇರುತ್ತಾರೆ ಎಂದು ಸಚಿವ ಖಂಡ್ರೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ