ಅನೈತಿಕ ಸಂಬಂಧಕ್ಕೆ ಅಡ್ಡಿ: ಮಗನನ್ನೇ ಕೊಂದ ತಾಯಿ
Team Udayavani, Sep 13, 2021, 3:09 PM IST
ಸೇಡಂ: ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಮಗನನ್ನೇ ಪ್ರಿಯಕರನೊಂದಿಗೆ ಸೇರಿ ತಾಯಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಮದನಾ ಗ್ರಾಮದಲ್ಲಿ ನಡೆದಿದೆ.
ಸೆಂಟರಿಂಗ್ ಕೆಲಸ ಮಾಡಿಕೊಂಡಿದ್ದ ನಾಗೇಶ ರಾಮು ಮದ್ದೂರ (25) ಕೊಲೆಯಾದವ. ತಾಯಿ, ಪ್ರಿಯಕರ ಹಾಗೂ ತಂಗಿ ಮೂವರು ಸೇರಿ ನಾಗೇಶನನ್ನು ನೇಣು ಬಿಗಿದು ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸಲು ಮುಂದಾಗಿದ್ದರು.
ಐದಾರು ವರ್ಷಗಳಿಂದ ಮುನಕನಪಲ್ಲಿಯ ಭರತಕುಮಾರ ಶರಣಯ್ಯಸ್ವಾಮಿ ಎನ್ನುವನ ಜೊತೆ ಮದನಾ ಗ್ರಾಮದ ಯಲ್ಲಮ್ಮ ರಾಮು ಮದ್ದೂರ ಅಕ್ರಮ ಸಂಬಂಧ ಹೊಂದಿದ್ದಳು. ವಿಷಯ ಯಲ್ಲಮ್ಮನ ಮಗ ನಾಗೇಶನಿಗೆ ತಿಳಿದು ಆಕ್ಷೇಪ ವ್ಯಕ್ತಪಡಿಸಿದಾಗ, ಆತನ ತಂಗಿ ಅನಿತಾ ರಾಮು ಮದ್ದೂರ ಜೊತೆಗೂಡಿ ಮೂರು ಜನ ಸೇರಿ ಹಗ್ಗದಿಂದ ಕುತ್ತಿಗೆ ಬಿಗಿದು ನಾಗೇಶನನ್ನು ಕೊಲೆ ಮಾಡಿದ್ದಾರೆ. ನಂತರ ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಬಿಗಿದಿದ್ದಾರೆ.
ಘಟನೆ ಸಂಬಂಧ ತನಿಖೆ ಕೈಗೊಂಡ ಮುಧೋಳ ಪಿಐ ಆನಂದರಾವ್ ತಲೆಮರೆಸಿಕೊಂಡಿದ್ದ ಮೂವರು ಕೊಲೆಗಡುಕರನ್ನು ಪತ್ತೆ ಹಚ್ಚಿ ಜೈಲಿಗಟ್ಟಿದ್ದಾರೆ. ಪ್ರಕರಣ ಮುಧೋಳ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್