ಸಮ್ಮೇಳನಕ್ಕೆ ಮಕ್ಕಳನ್ನು ಕರೆತನ್ನಿ
ಕಲ್ಯಾಣ ಕರ್ನಾಟಕ-ಅಖಂಡ ಕರ್ನಾಟಕದ ಜನರು ಭಾಗಿಯಾಗಿ: ಎಚ್ಎಸ್ವಿ
Team Udayavani, Feb 5, 2020, 10:50 AM IST
ಕಲಬುರಗಿ: ನಗರದ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೆಳನಾಧ್ಯಕ್ಷ, ಕವಿ ಡಾ| ಎಚ್.ಎಸ್. ವೆಂಕಟೇಶಮೂರ್ತಿ ಅವರನ್ನು ಜಿ.ಪಂ ಸಿಇಒ ಡಾ| ರಾಜಾ ಪಿ., ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ಸ್ವಾಗತಿಸಿದರು.
ಕಲಬುರಗಿ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕುಟುಂಬದೊಂದಿಗೆ ಬನ್ನಿ. ನಿಮ್ಮ ಮಕ್ಕಳನ್ನು ಕರೆ ತನ್ನಿ ಎಂದು 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನಾಧ್ಯಕ್ಷ, ಕವಿ ಡಾ| ಎಚ್.ಎಸ್.ವೆಂಕಟೇಶಮೂರ್ತಿ ಹೇಳಿದರು.
ಮಂಗಳವಾರ ಬೆಳಗ್ಗೆ ನಗರದ ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಅವರು, ಇಷ್ಟೊಂದು ಜನ ಅಭಿಮಾನಿಗಳು ಸ್ವಾಗತ ಮಾಡುತ್ತಿದ್ದಿರಿ, ತುಂಬಾ ಖುಷಿ ಆಗಿದೆ. ಮೂರು ದಿನಗಳ ಕಾಲ ನಿಮ್ಮ ಜೊತೆ ಕಾಲ ಕಳೆಯಲಿದ್ದೇನೆ. ಸಮ್ಮೆಳನ ಅರ್ಥಪೂರ್ಣವಾಗಿ ನಡೆಯುತ್ತೆ. ಜತೆಗೆ ಯಶಸ್ವಿಯಾಗುತ್ತದೆ ಎಂದು ನುಡಿದರು.
ಕಲಬುರಗಿ ಜನರ ಪ್ರೀತಿಗೆ ನಾನು ತಲೆಬಾಗುವೆ. ಅತ್ಯಂತ ಖುಷಿಯಿಂದ ಸಮ್ಮೇಳನದಲ್ಲಿ ಭಾಗಿಯಾಗುವೆ. ಕಲ್ಯಾಣ ಕರ್ನಾಟಕ ಮತ್ತು ಅಖಂಡ ಕರ್ನಾಟಕದ ಜನರು ಭಾಗಿಯಾಗಿ ಸಮ್ಮೇಳನ ಯಶಸ್ವಿಗೊಳಿಸಬೇಕು. ಬೆಂಗಳೂರಿನ ಕಲಾಮಂದಿರಗಳಲ್ಲಿ ಮಕ್ಕಳನ್ನು ಬಿಡುವುದಿಲ್ಲ. ಆದರೆ ಸಾಹಿತ್ಯ ಸಮ್ಮೇಳನದಲ್ಲಿ ಅಂತಹ ಯಾವುದೇ ನಿರ್ಬಂಧವಿಲ್ಲ. ಆದ್ದರಿಂದ ಮಹಿಳೆಯರು, ಮಕ್ಕಳು ಎಲ್ಲರನ್ನೂ ಕರೆದುಕೊಂಡು ಬನ್ನಿ. ಮಕ್ಕಳಲ್ಲಿ ಕನ್ನಡ ಪ್ರೇಮ ಹುಟ್ಟಿಸುವ ಕೆಲಸ ಮಾಡಿ ಎಂದರು.
ನೆಗೆಟಿವ್ ಬೇಡ: ಸಾಹಿತ್ಯ ಸಮ್ಮೆಳನದ ನಿರ್ಣಯಗಳು ಕಾಗದಕ್ಕೆ ಸೀಮಿತ ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗ ನಕಾರಾತ್ಮಕವಾಗಿ ಯೋಚಿಸುವುದು ಬೇಡ. ಮಗು ಅಳದೇ ಹೋದರೆ ತಾಯಿ ಹಾಲು ಕೊಡುವುದಿಲ್ಲ. ನಾವು ಹೋರಾಟ ಮಾಡಲೇಬೇಕು. ಸರ್ಕಾರದ ಕಣ್ಣು ತೆರೆಸಲೇಬೇಕು. ಇವತ್ತಲ್ಲ, ನಾಳೆ ನಿರ್ಣಯಗಳು ಜಾರಿಗೆ ಬರುತ್ತವೆಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ