20 ಸಾವಿರ ಪ್ರತಿನಿಧಿಗಳ ನೋಂದಣಿ

ಮಂಗಳೂರಿನಿಂದ ಒಬ್ಬರೂ ನೋಂದಣಿ ಮಾಡಿಸಿಲ್ಲಹಿಂದಿನ ಸಮ್ಮೇಳನ ದಾಖಲೆ ಮುರಿದ ಕಲಬುರಗಿ

Team Udayavani, Jan 23, 2020, 10:43 AM IST

23-January-1

ಕಲಬುರಗಿ: ಮುಂದಿನ ತಿಂಗಳು ಫೆಬ್ರುವರಿ 5ರಿಂದ ಇಲ್ಲಿ ನಡೆಯುವ ಅಖೀಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಸಾವಿರ ಪ್ರತಿನಿಧಿಗಳ ನೋಂದಣಿ ಅಂತಿಮವಾಗಿದೆ. ಸಮ್ಮೇಳನ ಯಶಸ್ವಿಯಲ್ಲಿ ಪ್ರಮುಖ ಪಾತ್ರ ವಹಿಸುವ ಸಮ್ಮೇಳನ ನೋಂದಣಿ ಸಂಖ್ಯೆ 20284ಕ್ಕೆ ಅಂತಿಮಗೊಂಡಿರುವುದು ಹಿಂದಿನ ಸಮ್ಮೇಳನದ ಸಂಖ್ಯೆಯನ್ನು ಹಿಂದಿಕ್ಕಿದೆ. ಇದರಲ್ಲಿ 13561 ಪುರುಷರು ಹೆಸರು ನೋಂದಾಯಿಸಿದ್ದರೆ 5291 ಮಹಿಳೆಯರು ನೋಂದಣಿ ಮಾಡಿದ್ದಾರೆ.

ಸಮ್ಮೇಳನದ ಪ್ರತಿನಿಧಿ ನೋಂದಣಿ ಕೊನೆ ದಿನಾಂಕ ಕಳೆದ ಜ. 14 ಆಗಿತ್ತು. ಈಗ ರಾಜ್ಯದ ಎಲ್ಲ ಜಿಲ್ಲೆಗಳ ನೋಂದಣಿಯು ರಸೀದಿ ಪುಸ್ತಕಗೊಂದಿಗೆ ವಾಪಸ್ಸು ಬಂದ ನಿಖರ ನೋಂದಣಿ ಸಂಖ್ಯೆ ಹೊರ ಬಂದಿದೆ. 250 ರೂ. ನೀಡಿ ಜನರು ಸಮ್ಮೇಳನಕ್ಕೆ ತಮ್ಮ ಪ್ರತಿನಿಧಿಯಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

ರಾಯಚೂರಲ್ಲಿ ನಡೆದ ಅಖೀಲ ಭಾರತ 82ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 12400, ಮೈಸೂರಲ್ಲಿ ನಡೆದ 83ನೇ ಸಮ್ಮೇಳನದಲ್ಲಿ 13000 ಹಾಗೂ ಧಾರವಾಡದಲ್ಲಿ 13500 ಪ್ರತಿನಿಧಿಗಳ ನೋಂದಣಿಯಾಗಿತ್ತು. ಈಗ ಕಲಬುರಗಿಯಲ್ಲಿ ಹಿಂದಿನ ದಾಖಲೆಗಳನ್ನು ಮುರಿದು 20 ಸಾವಿರ ಪ್ರತಿನಿಧಿಗಳ ನೋಂದಣಿಯಾಗಿದೆ.

ಅತಿ ಹೆಚ್ಚಿನ ಪ್ರತಿನಿಧಿಗಳ ನೋಂದಣಿ ಕಲಬುರಗಿ ಜಿಲ್ಲೆಯಲ್ಲಿ ಆಗಿದ್ದು, ಜಿಲ್ಲೆಯಲ್ಲಿ 2494 ಪ್ರತಿನಿಧಿಗಳ ನೋಂದಣಿಯಾಗಿದೆ. ಬೆಂಗಳೂರು ಕೇಂದ್ರ ಸಾಹಿತ್ಯ ಪರಿಷತ್ತಿನಲ್ಲಿ 1432 ನೋಂದಣಿಯಾಗಿದ್ದರೆ ಕಲಬುರಗಿ ಕಸಾಪದಲ್ಲಿ ತೆರೆಯಲಾಗಿದ್ದ ನೋಂದಣಿ ಕಾರ್ಯಾಲಯದಲ್ಲಿ 1794 ಜನರು ಸಮ್ಮೇಳನದ ಪ್ರತಿನಿಧಿಗಳಾಗಿ ನೋಂದಾಯಿಸಿದ್ದಾರೆ.

ಮಂಗಳೂರಿನಿಂದ ಒಬ್ಬರೂ ನೋಂದಣಿ ಇಲ್ಲ: ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇಯಾದ ಹೆಸರು ಮಾಡಿರುವ ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ)ನಲ್ಲಿ ಒಬ್ಬರೂ ಕಲಬುರಗಿಯಲ್ಲಿನ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ತಮ್ಮ ಹೆಸರು ನೋಂದಣಿ ಮಾಡಿಸಿಲ್ಲ. ಅದೇ ರೀತಿ ಕರಾವಳಿ ಭಾಗದ ಇನ್ನೊಂದು ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯಲ್ಲಿ 15 ಜನ ಮಾತ್ರ ಹೆಸರು ನೋಂದಾಯಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ 1174 ಸಾಹಿತಿಗಳು-ಸಾಹಿತ್ಯಾಸಕ್ತರು ಸಮ್ಮೇಳನದ ತಿನಿಧಿಯಾಗಿ ನೋಂದಣಿ ಮಾಡಿದ್ದರೆ ಸಾಹಿತ್ಯದ ಸಮ್ಮೇಳನದ ಪಕ್ಕದ ಜಿಲ್ಲೆ ಬೀದರ್‌ದಲ್ಲಿ 400 ಮಾತ್ರ ನೋಂದಣಿ ಮಾಡಿಸಿದ್ದಾರೆ. ಉಳಿದಂತೆ ರಾಯಚೂರಲ್ಲಿ 1400, ಯಾದಗಿರಿ ಜಿಲ್ಲೆಯಲ್ಲಿ 980, ಬೆಂಗಳೂರು ಗ್ರಾಮಾಂತರದ ಜಿಲ್ಲೆಯಲ್ಲಿ
200, ರಾಮನಗರ ಜಿಲ್ಲೆಯಲ್ಲಿ 500, ಕೋಲಾರ 100, ಚಿತ್ರದುರ್ಗ 600, ಚಿಕ್ಕಬಳ್ಳಾಪುರ 371, ತುಮಕೂರು 1500, ದಾವಣಗೆರೆ 600, ಶಿವಮೊಗ್ಗ 540, ಗದಗ 688, ಕೊಪ್ಪಳ 834, ಬಳ್ಳಾರಿ 700, ಮೈಸೂರು 1174, ಚಾಮರಾಜ ನಗರ 460, ಮಂಡ್ಯ 800, ಹಾಸನ 800, ಕೊಡಗು 55, ಚಿಕ್ಕಮಗಳೂರು 500, ಉಡುಪಿ 55, ಬೆಳಗಾವಿ 200, ವಿಜಯಪುರ 700, ಬಾಗಲಕೋಟೆ 886, ಹುಬ್ಬಳ್ಳಿ 500, ಹಾವೇರಿ ಜಿಲ್ಲೆಯಲ್ಲಿ 800 ಜನರು ಸಮ್ಮೇಳನದ ಪ್ರತಿನಿಧಿಯಾಗಿ ಹೆಸರು ನೋಂದಣಿ ಮಾಡಿದ್ದಾರೆ.

ಏನೇನು ಸೌಲಭ್ಯ?
ಸಮ್ಮೇಳನದ ಪ್ರತಿನಿಧಿಯಾದವರಿಗೆ ಓಓಡಿ ಸೌಲಭ್ಯ, ವಸತಿ ಹಾಗೂ ಊಟದ ವ್ಯವಸ್ಥೆ. ಸಮ್ಮೇಳನ ಕಿಟ್‌ ಸೇರಿದಂತೆ ಇತರ ಸೌಲಭ್ಯಗಳು ಸಿಗಲಿವೆ. ಸಮ್ಮೇಳನದಲ್ಲಿ ಪ್ರತಿನಿಧಿ ನೋಂದಣಿದಾರರಿಗೆ ಪ್ರತ್ಯೇಕ ಊಟದ ವ್ಯವಸ್ಥೆಯಿದೆ. ಕಲಬುರಗಿ ಜಿಲ್ಲೆಯಲ್ಲಿ ನೋಂದಣಿ ಮಾಡಿಸಿದ ಪ್ರತಿನಿಧಿಗಳಿಗೆ ವಸತಿ ವ್ಯವಸ್ಥೆ ಇಲ್ಲ.

ಸಮ್ಮೇಳನದ ಪ್ರತಿನಿಧಿ ನೋಂದಣಿ ಮತ್ತೆ ಇಲ್ಲ. ಸಮ್ಮೇಳನದ ಆರಂಭದ ದಿನ ಪ್ರತಿನಿಧಿ ನೋಂದಣಿ ಆರಂಭಿಸುವಂತೆ ಒತ್ತಾಯಗಳು ಬರುತ್ತಿವೆ. ಆದರೆ ಈಗಲೇ 20 ಸಾವಿರ ಜನರು ನೋಂದಣಿ ಮಾಡಿದ್ದರಿಂದ ಇವರಿಗೆಲ್ಲ ಸೌಲಭ್ಯದತ್ತ ನಿಗಾ ವಹಿಸಲಾಗುವುದು.
ತಿಪ್ಪಣ್ಣಪ್ಪ ಕಮಕನೂರ, ನೋಂದಣಿ
ಸಮಿತಿ ಅಧ್ಯಕ್ಷರು ಹಾಗೂ ಶಾಸಕರು

ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.