ಕನ್ನಡದ ಮೇರು ಹಬ್ಬಕ್ಕೆ ಪ್ರಚಾರದ ಸೊಬಗು
ಚಲನಚಿತ್ರ ಮಂದಿರಗಳಲ್ಲಿ ದೃಶ್ಯ ಪ್ರಸಾರಕ್ಕೆ ಕ್ರಮ ವಾರ್ತಾ ಇಲಾಖೆಯಿಂದ ಎಲ್ಲೆಡೆ ಕನ್ನಡ ಹಾಡು ಪ್ರಸಾರ
Team Udayavani, Jan 30, 2020, 10:43 AM IST
ಕಲಬುರಗಿ: ಫೆ.5ರಿಂದ ನಡೆಯುವ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತಂತೆ ಬುಧವಾರ ಮಹಾನಗರ ಹಾಗೂ ವಿವಿಧ ತಾಲೂಕಾ ಕೇಂದ್ರ ಸ್ಥಾನ, ಗ್ರಾಮಗಳಲ್ಲಿ ಪ್ರಚಾರ ಕಾರ್ಯ ನಡೆಸಲಾಯಿತು.
ಸಮ್ಮೇಳನದ ಪ್ರಚಾರ ಸಮಿತಿಯಿಂದ ನಗರದ ರೈಲ್ವೆ ನಿಲ್ದಾಣ, ಚಲನಚಿತ್ರ ಮಂದಿರಗಳು, ವಿಮಾನ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸುವುದು, ಹೆದ್ದಾರಿ ಫಲಕಗಳ ಮೇಲೆ ಬ್ಯಾನರ್ ಪೇಸ್ಟಿಂಗ್, ಎಲ್ಇಡಿ ವಾಹನದ ಮೂಲಕ ನುಡಿ ಸಮ್ಮೇಳನಕ್ಕೆ ಆಹ್ವಾನಿಸುವ ದೃಶ್ಯ ಪ್ರಸಾರ ಮಾಡುವ ಮೂಲಕ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಲಾಯಿತು.
ಎಲ್ಇಡಿ ವಾಹನದಲ್ಲಿ ನುಡಿ ಸಮ್ಮೇಳನಕ್ಕೆ ಆಹ್ವಾನಿಸುವ ಪ್ರೊಮೋಸ್ ಮತ್ತು ವಾರ್ತಾ ಇಲಾಖೆಯಿಂದ ನಿರ್ಮಿಸಿದ “ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವಾ’ ಹಾಡು ಪ್ರಸಾರ ಎಲ್ಲೆಡೆ ಜೋರಾಗಿದೆ. ಈ ಹಾಡು ಕೇಳುತ್ತಿದ್ದಂತೆ ರಸ್ತೆ ಮೇಲೆ ಸಂಚರಿಸುವ ಸಂಚಾರಿಗಳು ಒಂದು ಕ್ಷಣ ನಿಂತು ನೋಡಿಯೇ ಮುಂದೆ ಸಾಗುತ್ತಿದ್ದಾರೆ. ಅಷ್ಟರ ಮಟ್ಟಿಗೆ ಈ ಹಾಡು ಕೇಳುಗರನ್ನು ತನ್ನತ್ತ ಸೆಳೆಯುವುದಲ್ಲದೆ ನಾಡು-ನುಡಿ ಅಭಿಮಾನ ಮೂಡಿಸುತ್ತಿದೆ.
ಸರ್ದಾರ ವಲ್ಲಭಬಾಯಿ ಪಟೇಲ್, ಜಗತ್ ವೃತ್ತ, ಸೂಪರ್ ರ್ಮಾರ್ಕೆಟ್, ಕಿರಾಣಾ ಬಜಾರ್, ಗುಲಬರ್ಗಾ ವಿಶ್ವವಿದ್ಯಾಲಯ ಸೇರಿದಂತೆ ಇತರ ಪ್ರದೇಶಗಳಲ್ಲಿ ಸಂಚರಿಸಿ ಕನ್ನಡ ಕುಲಪುತ್ರರಿಗೆ ಆಹ್ವಾನ ನೀಡಲಾಗುತ್ತಿದೆ. ಅಲ್ಲದೇ, ಎಲ್ಲ ಚಲನಚಿತ್ರ ಮಂದಿರದಲ್ಲಿ ನುಡಿ ಸಮ್ಮೇಳನಕ್ಕೆ ಆಹ್ವಾನಿಸುವ ದೃಶ್ಯ ಪ್ರಸಾರಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಚಾರ ಸಮಿತಿ ಕಾರ್ಯಧ್ಯಕ್ಷರಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್.ಜಿ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ