ಕನ್ನಡ ಕೆಲಸಕ್ಕೂ ಆದೇಶ ಬೇಕೆ?

ಪ್ರಚಾರ ಕೈಗೊಳ್ಳದ ಬಗ್ಗೆ ಡಿಸಿ ಬೇಸರ ಮನಸ್ತಾಪ ಬದಿಗಿಟ್ಟುಒಗ್ಗಟ್ಟಾಗಿ ಬನ್ನಿ

Team Udayavani, Jan 20, 2020, 10:43 AM IST

20-January-1

ಕಲಬುರಗಿ: ಕನ್ನಡ ಮತ್ತು ಕನ್ನಡ ಪರ ಕೆಲಸ ಮಾಡಲು ಸರ್ಕಾರದ ಆದೇಶವೇ ಬೇಕೆ? ಹಣದ ನೀಡಿದರೆ ಮಾತ್ರ ಕನ್ನಡದ ಕೆಲಸ ಮಾಡುತೀ¤ರಾ? ಎಂದು 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ಸಂಚಾಲಕರಾದ ಜಿಲ್ಲಾಧಿಕಾರಿ ಶರತ್‌ ಬಿ. ನೊಂದು ನುಡಿದರು.

ನಗರದ ಕನ್ನಡ ಭವನದಲ್ಲಿ ರವಿವಾರ ಆಯೋಜಿಸಲಾಗಿದ್ದ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಪದಾಧಿಕಾರಿಗಳು, ತಾಲೂಕು, ವಲಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸಾಹಿತ್ಯ ಸಮ್ಮೇಳನದ ಪ್ರಚಾರ ಕಾರ್ಯ ಮಾಡಲು ಗ್ರಾಮ ಪಂಚಾಯಿತಿಗಳಿಂದ ಅನುದಾನ ಕೊಡಿಸಬೇಕು ಮತ್ತು ತಹಶೀಲ್ದಾರ್‌ಗಳ ಮೂಲಕ ಪ್ರಚಾರಕ್ಕೆ ಆದೇಶ ಹೊರಡಿಸಬೇಕು. ಸರ್ಕಾರಿ ಶಿಕ್ಷಕರಿಗೆ ಮೂರು ದಿನ ಒಒಡಿ ನೀಡಬೇಕೆಂದು ಕಸಾಪ ಪದಾಧಿ ಕಾರಿಗಳು ಕೋರಿದರು.

ಇದರಿಂದ ತೀವ್ರ ಬೇಸರಗೊಂಡ ಜಿಲ್ಲಾಧಿಕಾರಿಗಳು, ಸಮ್ಮೇಳನದ ಮಾಡಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಸೇರಿ ಸರ್ಕಾರ ಬೆನ್ನಿಗೆ ಇದೆ. ಆದರೆ, ನಿಮ್ಮ ಊರಲ್ಲಿ, ಶಾಲೆಗಳಲ್ಲಿ ಹತ್ತು ನಿಮಿಷ ಪ್ರಚಾರ ಮಾಡಲು ಸರ್ಕಾರ ಆದೇಶ ಹೊರಡಿಸಬೇಕೇ? ಸರ್ಕಾರದ ಅನುದಾನದಿಂದಲೇ ಕನ್ನಡದ ಕಾರ್ಯಕ್ರಮ ಮಾಡಬೇಕೇ? ಇದನ್ನು ಗಮನಿಸಿದರೆ ಇಲ್ಲಿ ಕನ್ನಡತನ ಕಾಣುತ್ತಿಲ್ಲ. ಇದು ನನಗೆ ತೀವ್ರ ನೋವು ತರಿಸಿದೆ ಎಂದರು.

ಜಿಲ್ಲೆಯಲ್ಲಿ 32 ವರ್ಷಗಳ ಬಳಿಕ ಸಮ್ಮೇಳನ ನಡೆಸುವ ಅವಕಾಶ ಒದಗಿ ಬಂದಿದೆ. ಸಮ್ಮೇಳನ ಆರಂಭವಾಗಲು ಕೆಲವೇ ದಿನಗಳಿವೆ. ಪ್ರಚಾರದಲ್ಲಿ ಹಿಂದೆ ಉಳಿದಿದ್ದೇವೆ ಎಂದು ಮಾತುಗಳು ಕೇಳಿ ಬರುತ್ತಿವೆ. ಸಮ್ಮೇಳನ ಬಗ್ಗೆ ನಿಮ್ಮೂರಲ್ಲಿ ನೀವು ಏನು ಮಾಡಿದ್ದೀರಿ? ಎಂದು ಅಸಮಾಧಾನ ಹೊರ ಹಾಕಿದರು.

ಸಮ್ಮೇಳನ ಹೆಸರಲ್ಲಿ ರಜೆ ಘೋಷಣೆ ಮಾಡುತ್ತಾರೆ ಎಂದು 250 ರೂ. ಕೊಟ್ಟು ನೋಂದಣಿ ಮಾಡಿಕೊಂಡಿಲ್ಲ. ಆದರೆ, ಮೂರು ದಿನ ಒಒಡಿ ಕೇಳುತ್ತಿದ್ದೀರಿ. ಒಒಡಿ ಕೊಡುವುದು ದೊಡ್ಡದಲ್ಲ. ಕನ್ನಡ ಕಾರ್ಯಕ್ರಮ ಮಾಡಲು ಮನಸು ಬೇಕೇ ಹೊರತು ಬೇರೇನಲ್ಲ. ಸ್ವಯಂ ಪ್ರೇರಣೆ ಇಲ್ಲದಿರುವುದು ನಿರಾಶೆ ಉಂಟಾಗಿದೆ. ಇದರಿಂದ ಹಿಂದುಳಿದವರು ಎನ್ನುವ ಪಟ್ಟವನ್ನು ನಾವೇ ಹಣೆ ಮೇಲೆ ಅಚ್ಚು ಹಾಕಿಕೊಳ್ಳತ್ತಿದ್ದೇವೆ ಎಂದರು.

ಸಮ್ಮೇಳನದ ಸಿದ್ಧತೆ ಬಗ್ಗೆ ತಹಶೀಲ್ದಾರ್‌ಗಳೊಂದಿಗೆ ಮಾತನಾಡಿದ್ದೇನೆ. ನಮ್ಮ ತಾಲೂಕಿನಲ್ಲಿ ಕ್ರಿಯಾಶೀಲ ಚಟುವಟಿಕೆಗಳನ್ನು ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಕಸಾಪ ಪದಾಧಿಕಾರಿ ಬಾಬುಮೀಯಾ ಫುಲ್ಲಾರಿ
ಮಾತನಾಡಿ, ಅಫಜಲಪುರ ತಾಲೂಕಿನ ಮಶಾಲ ಮಹಾರಾಷ್ಟ್ರದ ಗಡಿಯಲ್ಲಿ ಬರುತ್ತೇವೆ. ಮೂರು ದಿಕ್ಕುಗಳಲ್ಲಿ ಮಹಾರಾಷ್ಟು ಇದೆ. ಆದರೆ, ಒಂದೇ ಒಂದು ಮರಾಠಿ ಅಕ್ಷರಕ್ಕೆ ಅವಕಾಶ ಕೊಟ್ಟಿಲ್ಲ. ಈ ಹಿಂದೆ ಜಿಲ್ಲಾ ಸಮ್ಮೇಳನಗಳಿಗೆ ಬರುವಾಗ ಪೊಲೀಸರಿಂದ ತೊಂದರೆ ಆಗಿದೆ. ಇದನ್ನು ತಪ್ಪಿಸಬೇಕು ಎಂದರು.

ಸಾಹಿತಿ ಚಿ.ಸಿ.ಲಿಂಗಣ್ಣ ಮಾತನಾಡಿ, ಕಚ್ಚಾಡುವವರನ್ನು ಒಂದೂಡಿಸುವ ಕೆಲಸ ಜಿಲ್ಲಾ ಧಿಕಾರಿಗಳು ಮಾಡುತ್ತಿದ್ದಾರೆ. ಎಲ್ಲರ ಮನಸ್ತಾಪಗಳನ್ನು ಬದಿಗಿಟ್ಟು ಸಮ್ಮೇಳನದ ಯಶಸ್ವಿಗಾಗಿ ಶ್ರಮಿಸೋಣ. ದೇಣಿಗೆ ಸಂಗ್ರಹಿಸಲು ನಾವೆಲ್ಲರೂ ಕೈಜೋಡಿಸೋಣ ಎಂದರು.

ಕಸಾಪ ಜಿಲ್ಲಾ ಅಧ್ಯಕ್ಷ ವೀರಭದ್ರ ಸಿಂಪಿ, ಮಡಿವಾಳಪ್ಪ ನಾಗರಹಳ್ಳಿ, ದೌಲತರಾಯ ಪಾಟೀಲ ಕಸಾಪ ಪದಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.