ಸಮ್ಮೇಳನಕ್ಕೆ ಮಕ್ಕಳನ್ನು ಕಳುಹಿಸಲು ವ್ಯವಸ್ಥೆ

ತೆರಿಗೆ ಹಣ ಖರ್ಚು ಮಾಡಲು ಧನ್ನೂರ ಗ್ರಾ.ಪಂ ನಿರ್ಧಾರತಾಲೂಕುಗಳಲ್ಲಿ ಪೋಸ್ಟ್‌ರ್‌ ಬಿಡುಗಡೆ

Team Udayavani, Feb 3, 2020, 10:51 AM IST

3-Febrauary-2

ಕಲಬುರಗಿ: ಕೇವಲ ಪಠ್ಯದಲ್ಲಿ ಸಾಹಿತಿಗಳ ಹೆಸರನ್ನು ಕೇಳಿದ ಮಕ್ಕಳಿಗೆ ಸ್ವತಃ ಸಾಹಿತಿಗಳನ್ನು ಕಣ್ಣಾರೆ ಕಾಣಲು ಜತೆಗೆ ಸಾಹಿತ್ಯಾಸಕ್ತಿ ಮೂಡಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಯೊಂದು ಮಕ್ಕಳನ್ನು ಸಮ್ಮೇಳನಕ್ಕೆ ಕಳುಹಿಸಲು ವ್ಯವಸ್ಥೆ ಮಾಡಿದೆ.

ಜಿಲ್ಲೆಯ ಆಳಂದ ತಾಲೂಕಿನ ಧನ್ನೂರ ಗ್ರಾಮ ಪಂಚಾಯಿತಿ ತನಗೆ ಬಂದಿರುವ ತೆರಿಗೆ ಹಣದಲ್ಲಿ 20 ಸಾವಿರ ರೂ. ವಿನಿಯೋಗಿಸಿ ಫೆ. 5ರಿಂದ ನಡೆಯುವ ಅಖೀಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 10 ಕ್ರೂಜರ್‌ಗಳ ವ್ಯವಸ್ಥೆ ಮಾಡಲು ನಿರ್ಧರಿಸಿದ್ದು, ಇದಕ್ಕೆ ವ್ಯಾಪಕ ಸ್ವಾಗತ ವ್ಯಕ್ತವಾಗುತ್ತಿದೆ. ಸಮ್ಮೇಳನಕ್ಕೆ ಮಕ್ಕಳನ್ನು ಕರೆ ತರಲು ಧನ್ನೂರ ಗ್ರಾ.ಪಂ ವ್ಯಾಪ್ತಿಯ ನೆಲ್ಲೂರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಪ್ರಭಾರಿ ಮುಖ್ಯಶಿಕ್ಷಕ ಡಿ.ಎನ್‌. ಪಾಟೀಲ ಚಿಂತನೆ ನಡೆಸಿದ್ದರು. ಶಿಕ್ಷಕರು ಹಾಗೂ ಮಕ್ಕಳಿಂದ ಕೆಲವೊಂದಿಷ್ಟು ಹಣ ಸಂಗ್ರಹಿಸಲು ಮುಂದಾಗಿದ್ದರು. ಈ ಮಾಹಿತಿ ಅರಿತ ಗ್ರಾಮ ಪಂಚಾಯಿತಿ ಸದಸ್ಯ ಹಣಮಂತರಾವ ಖ್ಯಾಮದೆ ಅವರು, ಸಮ್ಮೇಳನಕ್ಕೆ ಮಕ್ಕಳನ್ನೆಲ್ಲ ಕರೆದುಕೊಂಡು ಹೋಗಿ. ಯಾರಿಂದಲೂ ಹಣ ಸಂಗ್ರಹಿಸಬೇಡಿ. ಗ್ರಾ.ಪಂ ವತಿಯಿಂದಲೇ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು.

ತದನಂತರ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಮಾಲೋಚಿಸಿ ತೆರಿಗೆ ಹಣ ನೀಡುವ ಕುರಿತಾಗಿ ನಿರ್ಧಾರ ಕೈಗೊಂಡರು. ಪರಿಣಾಮವಾಗಿ ಧನ್ನೂರ ಹಾಗೂ ನೆಲ್ಲೂರ ಗ್ರಾಮದ ಶಾಲಾ ಮಕ್ಕಳಿಗೆ ಹತ್ತು ಕ್ರೂಜರ್‌ ವ್ಯವಸ್ಥೆ ಮಾಡಿದ್ದು, ಮಕ್ಕಳು ನುಡಿ ಜಾತ್ರೆಗೆ ಬರಲು ಸನ್ನದ್ಧರಾಗಿದ್ದಾರೆ. ಇದೇ ತೆರನಾದ ಭಾವನೆ ಹೊಂದಿ ಶಾಲಾ ಮಕ್ಕಳಿಗೆ ಸಮ್ಮೇಳನಕ್ಕೆ ಹೋಗಿ ಬರುವಂತಾಗಲು ಗ್ರಾಮ ಪಂಚಾಯಿತಿಗಳು ಮುಂದೆ ಬಂದಲ್ಲಿ ಎಲ್ಲ ಮಕ್ಕಳಿಗೆ ಸಾಹಿತ್ಯ ಸಮ್ಮೇಳನವನ್ನು ಕಣ್ಣಾರೆ ಸವಿಯಲು ಸಹಕಾರಿಯಾಗುತ್ತದೆ.

32 ವರ್ಷಗಳ ನಂತರ ಕಲಬುರಗಿಯಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಶಾಲೆಯ ಮಕ್ಕಳು ಸಾಹಿತಿಗಳ ಹೆಸರನ್ನು ಪಠ್ಯದಲ್ಲೇ ನೋಡಿರುತ್ತಾರೆ. ಅವರನ್ನು ಖುದ್ದಾಗಿ ಕಾಣಲಿ ಹಾಗೂ ಸಾಹಿತ್ಯಾಸಕ್ತಿ ಬೆಳೆಯಲೆಂಬ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಯಿಂದ ವಾಹನ ಸೌಕರ್ಯ ಕಲ್ಪಿಸಲಾಗಿದೆ.
ಹಣಮಂತರಾವ ಖ್ಯಾಮದೆ,
ಗ್ರಾ.ಪಂ ಸದಸ್ಯ, ಧನ್ನೂರ

ಸಾಹಿತ್ಯದಲ್ಲಿ ನಮಗೆ ಆಸಕ್ತಿಯಿದೆ. ನಾನು ಏಳೆಂಟು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದೇನೆ. ಈ ಸಲ ಜಿಲ್ಲೆಯಲ್ಲೇ ಸಮ್ಮೇಳನ ನಡೆಯುತ್ತಿರುವುದರಿಂದ ಮಕ್ಕಳನ್ನು ಕರೆದುಕೊಂಡು ಹೋಗಬೇಕೆಂದು ಉದ್ದೇಶಿಸಲಾಗಿತ್ತು. ಶಿಕ್ಷಕರಿಂದ ಹಾಗೂ ಮಕ್ಕಳಿಂದ ಹಣ ಸಂಗ್ರಹಿಸಿ ಹೋಗಲು ನಿರ್ಧರಿಸಲಾಗಿತ್ತು. ಆದರೆ ಗ್ರಾಮ ಪಂಚಾಯಿತಿಯವರೇ ಮುಂದೆ ಬಂದು ವಾಹನ ಸೌಕರ್ಯ ಕಲ್ಪಿಸಿದ್ದಾರೆ. ಹೀಗಾಗಿ ಎಲ್ಲ ಮಕ್ಕಳನ್ನು ಸಮ್ಮೇಳನಕ್ಕೆ ಕರೆದುಕೊಂಡು ಹೋಗಲಾಗುವುದು.
ಡಿ.ಎನ್‌. ಪಾಟೀಲ,
ಪ್ರಭಾರಿ ಮುಖ್ಯಶಿಕ್ಷಕ, ಸರ್ಕಾರಿ ಪ್ರೌಢ ಶಾಲೆ, ನೆಲ್ಲೂರ

ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.