ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಜನತೆಯೇ ಕಾರಣ: ಸಿಂಪಿ
Team Udayavani, Feb 13, 2020, 11:11 AM IST
ಶಹಾಬಾದ: ಕಲಬುರಗಿಯಲ್ಲಿ ನಡೆದ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿಕ್ಕೆ ನಾಡಿನ ಸಮಸ್ತ ಜನತೆಯೇ ಮೂಲ ಕಾರಣ. ಇದರಲ್ಲಿ ನನ್ನದಾದ ಯಾವುದೇ ಪಾತ್ರ ಇಲ್ಲ ಎಂದು ಕಸಾಪ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ ಹೇಳಿದರು.
ಬುಧವಾರ ಕಸಾಪ ಕಲಬುರಗಿ ಗ್ರಾಮೀಣ ವತಿಯಿಂದ ನಗರದ ಕನ್ನಡ ಭವನದಲ್ಲಿ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದ್ದಕ್ಕೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು.
ಜನರ ಆಶೀರ್ವಾದದಿಂದ ಕಸಾಪ ಅಧ್ಯಕ್ಷನಾದೆ. ನನಗೆ ನೀಡಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಜಿಲ್ಲಾಧಿಕಾರಿಗಳು ಹಗಲು-ರಾತ್ರಿ ಎನ್ನದೇ ಕಾರ್ಯ ನಿರ್ವಹಿಸಿದ್ದಾರೆ. ಉಸ್ತುವಾರಿ ಸಚಿವರು, ಶಾಸಕರು, ಅಧಿ ಕಾರಿ ವರ್ಗದವರು, ಪೌರಕಾರ್ಮಿಕರು, ಪೊಲೀಸ್ ಇಲಾಖೆ, ಮಾಧ್ಯಮ ವರ್ಗ ಸೇರಿದಂತೆ ಕಾಣದ ಕೈಗಳು ಹಾಗೂ ಸಮಸ್ತ ನಾಡಿನ ಜನತೆ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಿರುವುದು ತುಂಬಾ ಸಂತೋಷ ತಂದಿದೆ ಎಂದರು.
ಇಲ್ಲಿಯವರೆಗೆ ನಡೆದ 84 ಸಮ್ಮೇಳನಗಳಿಗಿಂತ ಅಭೂತಪೂರ್ವ ಯಶಸ್ಸು ಕಂಡಿರುವುದಕ್ಕೆ ಕನ್ನಡಾಭಿಮಾನಿಗಳೇ ಕಾರಣ. ಕಲಬುರಗಿಯಲ್ಲಿ ನಡೆಯುವ ಸಮ್ಮೇಳನ ರಾಜ್ಯದಲ್ಲೇ ಮಾದರಿಯಾಗಬೇಕು. ಜಿಲ್ಲೆಗೆ ಹೆಸರು ತರುವಂಥ ಕೆಲಸ ಮಾಡಬೇಕು ಎನ್ನುವ ಗುರಿ ಹೊಂದಿದ್ದೆ. ಅದು ಎಲ್ಲರ ಸಾಮೂಹಿಕ ಪ್ರಯತ್ನದಿಂದ ನೆರವೇರಿದೆ ಎಂದರು.
ಸಮ್ಮೇಳನ ಎಂದರೆ ಟೀಕೆಗಳು, ಅಪಸ್ವರಗಳು ಕೇಳಿ ಬರುವುದು ಸಹಜ. ಯಾವುದನ್ನು ಹಚ್ಚಿಕೊಳ್ಳದೇ ಕಲಬುರಗಿ ಜಿಲ್ಲೆ ಹೆಸರನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡೋಣ. ಎಲ್ಲರೂ ಸಹಕಾರ ನೀಡಿ ಎಂದು ಮನವಿ ಮಾಡಿಕೊಂಡಿದ್ದೆ. ಈ ಮಣ್ಣಿನ ನೆಲ, ಕಡಕೋಳ ಮಡಿವಾಳವಪ್ಪ ಅವರ ಶಕ್ತಿಯಿಂದ ಸಮ್ಮೇಳನ ಯಶಸ್ವಿಯಾಗಿ ಐತಿಹಾಸಿಕ ಪುಟಗಳಲ್ಲಿ ಸೇರುವಂಥ ಕೆಲಸವನ್ನು ಮಹಾಜನತೆ ಮಾಡಿದೆ ಎಂದು ಹೇಳಿದರು.
ಕಸಾಪ ನಗರಾಧ್ಯಕ್ಷ ಮಲ್ಲಿಕಾರ್ಜುನ ಪಟ್ಟಣಕರ್ ಮಾತನಾಡಿ, ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ, ಇತಿಹಾಸದ ಪುಟಗಳಲ್ಲಿ ಸೇರುವಂತಾಗಲು ಕಸಾಪ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ ಹಾಗೂ ಜಿಲ್ಲಾಧಿಕಾರಿ ಶ್ರಮವೇ ಕಾರಣ ಎಂದರು.
ಲೋಹಿತ್ ಕಟ್ಟಿ, ಕಸಾಪ ಕಲಬುರಗಿ ಗ್ರಾಮೀಣ ವಲಯದ ಅಧ್ಯಕ್ಷ ಶರಣಗೌಡ ಪಾಟೀಲ, ತಾಲೂಕಾಧ್ಯಕ್ಷ ಮೃತ್ಯುಂಜಯ ಹಿರೇಮಠ, ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜಶೇಖರ ದೇವರಮನಿ, ಕನಕಪ್ಪ ದಂಡಗುಲಕರ್ ಮಾತನಾಡಿದರು.
ಸಾಹಿತಿ ಸಿದ್ದಲಿಂಗಯ್ಯ ಹಿರೇಮಠ, ಅಪ್ಪು ನಾಗಶೆಟ್ಟಿ, ಸಿದ್ರಾಮಪ್ಪ ಮುದಿಗೌಡ, ಡಾ| ಅಹ್ಮದ್ ಪಟೇಲ್, ವೈಜನಾಥ ಹುಗ್ಗಿ, ಬಸವರಾಜ ಮದ್ರಕಿ, ಬಸವರಾಜ ಬಿರಾದಾರ, ಅರುಣ ಜಾಯಿ, ಜಗದೀಶ ಇಂಗಿನ, ಉಮೇಶ ಪೂಜಾರಿ ಮತ್ತಿತರರು ಇದ್ದರು. ಭರತ್ ಧನ್ನಾ ನಿರೂಪಿಸಿದರು, ರವಿ ಬೆಳಮಗಿ ಸ್ವಾಗತಿಸಿದರು, ಶಾಂತಪ್ಪ ಹಡಪದ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್