ಫ‌ಲಿತಾಂಶ ಪ್ರಕಟವಾಗಿ ವಾರ ಕಳೆದ್ರೂ ಮೂಡಿಲ್ಲ ಮೈತ್ರಿ ಒಮ್ಮತ 

­ಪಾಲಿಕೆ ಗದ್ದುಗೆ ಏರಲು ಮುಂದುವರಿದ ಕಸರತ್ತು|­ಆಪರೇಷನ್‌ ಕಮಲಕ್ಕೆ ಒಳಗಾಗದಿರಲು ಕೈ ಒಗ್ಗಟ್ಟು ಪ್ರದರ್ಶನ

Team Udayavani, Sep 13, 2021, 2:57 PM IST

fcgfgtr

ಕಲಬುರಗಿ: ಪಾಲಿಕೆ ಚುನಾವಣೆ ಫ‌ಲಿತಾಂಶ ಬಂದು ಸೋಮವಾರಕ್ಕೆ ಒಂದು ವಾರವಾದರೂ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಪಕ್ಷಗಳ ನಡುವೆ ಮೈತ್ರಿಯ ಒಮ್ಮತ ಮೂಡುತ್ತಿಲ್ಲ. ಹೀಗಾಗಿ ಅನಿಶ್ಚತತೆ ಕರಿನೆರಳು ಹಾಗೂ ಕಸರತ್ತು ಮುಂದುವರಿದಿದೆ.

ಕಾಂಗ್ರೆಸ್‌ ಪಕ್ಷದವರೇ ಮೇಯರ್‌ ಆಗಲಿದ್ದಾರೆ ಎಂದು ಆ ಪಕ್ಷದ ಮುಖಂಡರು ಹೇಳುತ್ತಿದ್ದರೇ, ಬಿಜೆಪಿ ತಮ್ಮ ಪಕ್ಷದವರೇ ಮೇಯರ್‌ ಆಗುತ್ತಾರೆ ಎಂದು ಹೇಳುತ್ತಿದೆ. ಆದರೆ ಪ್ರಮುಖ ಪಾತ್ರ ನಿರ್ವಹಿಸಬೇಕಾದ ಜೆಡಿಎಸ್‌ ಮಾತ್ರ ಯಾರಿಗೂ ಬೆಂಬಲ ನೀಡುವ ಕುರಿತು ತನ್ನ ನಿರ್ಧಾರ ಪ್ರಕಟಿಸಿಲ್ಲ. ಜೆಡಿಎಸ್‌ ಕಾಯ್ದು ನೋಡುವ ಹಾಗೂ ಅವಕಾಶವಾದಿತನ ತಂತ್ರಕ್ಕೆ ಮೊರೆ ಹೋಗಿದ್ದು, ಮುಂದೇನು? ಎನ್ನುವಂತಾಗಿದೆ.

ಸೆ.13ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಒಟ್ಟಾರೆ ಎಲ್ಲ ಚಟುವಟಿಕೆಗಳು ಏನಿದ್ದರೂ ಬೆಂಗಳೂರಿನಲ್ಲೇ ಎನ್ನುವಂತಾಗಿದೆ. ಆದರೆ ಸದಸ್ಯರ್ಯಾರೂ ಕಮಲ ಆಪರೇಷನಕ್ಕೆ ಒಳಗಾಗಬಾರದೆಂದು ಕಾಂಗ್ರೆಸ್‌ ಪಕ್ಷ ರವಿವಾರ ತನ್ನೆಲ್ಲ ಪಾಲಿಕೆಯ ಸದಸ್ಯರನ್ನು ಸನ್ಮಾನಿಸುವ ಮೂಲಕ ಒಗ್ಗಟ್ಟಿನ ಮಂತ್ರ ಘೋಷಿಸಿದೆ.

ಕಾಂಗ್ರೆಸ್‌ನಲ್ಲಿ ಲಿಂಗಾಯಿತ ಸದಸ್ಯರೇ ಇಲ್ಲ: ಮೇಯರ್‌ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದ್ದರೆ, ಉಪಮೇಯರ್‌ ಬಿಸಿಬಿ ವರ್ಗಕ್ಕೆ ಮೀಸಲಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದಿಂದಲೇ ಈಗಲೇ ಹಲವರ ಹೆಸರು ಕೇಳಿ ಬರುತ್ತಿದೆ. ಬಿಜೆಪಿಯಿಂದ ಲಿಂಗಾಯಿತ ವರ್ಗದವರ ಹೆಸರು ಮುಂಚೂಣಿಗೆ ಬರುತ್ತಿದೆ. ಆದರೆ ಕಾಂಗ್ರೆಸ್‌ದಿಂದ ಬಿಜೆಪಿಯಷ್ಟು ಮೇಯರ್‌ ಆಕಾಂಕ್ಷಿಗಳ ಹೆಸರುಗಳು ಚಾಲ್ತಿಗೆ ಬರುತ್ತಿಲ್ಲ. ಬಿಜೆಪಿ ಗೆದ್ದಿರುವ 23 ಸದಸ್ಯ ಸ್ಥಾನಗಳಲ್ಲಿ 12 ಜನ ಸದಸ್ಯರು ಲಿಂಗಾಯಿತ ವರ್ಗಕ್ಕೆ ಸೇರಿದ್ದಾರೆ. ಆದರೆ ಕಾಂಗ್ರೆಸ್‌ದಿಂದ ಗೆದ್ದಿರುವ 27 ಸ್ಥಾನಗಳಲ್ಲಿ ಒಬ್ಬರೂ ಲಿಂಗಾಯಿತ ವರ್ಗಕ್ಕೆ ಸೇರಿಲ್ಲ. ಕಾಂಗ್ರೆಸ್‌ನ ಒಟ್ಟಾರೆ 27 ಸ್ಥಾನಗಳಲ್ಲಿ 17 ಸದಸ್ಯರು ಮುಸ್ಲಿಂರಿದ್ದಾರೆ. ಎಂಟು ಜನ ದಲಿತ ಸದಸ್ಯರಿದ್ದಾರೆ. ಒಂದು ವೇಳೆ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಏರ್ಪಟ್ಟರೆ ಸಾಮಾನ್ಯ ವರ್ಗದ ಮೇಯರ್‌ ಸ್ಥಾನಕ್ಕೆ ಪ್ರವರ್ಗದವರೇ ಆಯ್ಕೆ ಆಗುವ ಸಾಧ್ಯತೆಗಳೇ ಹೆಚ್ಚು.

ಕಾಂಗ್ರೆಸ್‌ ಪಕ್ಷದಿಂದ ಓರ್ವರೂ ಲಿಂಗಾಯಿತ ವರ್ಗದ ಸದಸ್ಯರು ಆಯ್ಕೆ ಆಗದಿರುವುದರಿಂದ ಪಕ್ಷದಲ್ಲಿ ಆತ್ಮಾವಲೋಕನ ನಡೆದಿದೆ. ಲಿಂಗಾಯಿತ ವರ್ಗದವರು ಯಾರೂ ಗೆದ್ದು ಬಂದಿಲ್ಲ ಎನ್ನುವ ವಿಷಯ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಸೋಮವಾರದತ್ತ ಎಲ್ಲರ ಚಿತ್ತ: ಕಳೆದ ಒಂದು ವಾರದಿಂದ ನಡೆಯುತ್ತಿರುವ ಕಸರತ್ತಿಗೆ ಸೋಮವಾರ ತೆರೆ ಬೀಳಬಹುದು ಎಂದು ಅಂದಾಜಿಸಲಾಗಿದೆ. ಜೆಡಿಎಸ್‌ ಯಾರಿಗೆ ಬೆಂಬಲ ನೀಡುತ್ತದೆ ಎನ್ನುವ ನಿರ್ಧಾರ ಸೋಮವಾರ ಪ್ರಕಟಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಒಟ್ಟಾರೆ ಕಲಬುರಗಿ ಮಹಾಪೌರ-ಉಪಮಹಾಪೌರ ಚುನಾವಣೆ ನಡೆದು ಯಾರು ಆಡಳಿತ ಚುಕ್ಕಾಣಿ ಹಿಡಿಯುತ್ತಾರೆ? ಎಂಬುದು ರಾಜ್ಯದಾದ್ಯಂತ ಚರ್ಚೆಯಾಗುತ್ತಿರುವುದು ಕುತೂಹಲ ಮತ್ತಷ್ಟು ಕೆರಳಿಸುವಂತೆ ಮಾಡಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.