ಕಲಬುರಗಿ ಪಾಲಿಕೆ ಅತಂತ್ರ: ಬಿಜೆಪಿ ನಿರೀಕ್ಷೆಮೀರಿ ಸಾಧನೆ,ಕಿಂಗ್ ಮೇಕರ್ ಸ್ಥಾನದಲ್ಲಿ ಜೆಡಿಎಸ್
Team Udayavani, Sep 6, 2021, 4:07 PM IST
ಕಲಬುರಗಿ: ತೀವ್ರ ಬಿರುಸಿನಿಂದ ಕೂಡಿದ್ದ ಇಲ್ಲಿನ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ಬಾರದೇ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಅತಿ ಹೆಚ್ಚಿನ ಸ್ಥಾನ ಪಡೆದು ಹೊರ ಹೊಮ್ಮಿದರೂ ಬಿಜೆಪಿ ನಿರೀಕ್ಷೆ ಮೀರಿ ಸಾಧನೆ ಮಾಡಿದೆ.
55 ಸ್ಥಾನಗಳಲ್ಲಿ ಅಂತಿಮವಾಗಿ ಕಾಂಗ್ರೆಸ್ 27 ಹಾಗೂ ಬಿಜೆಪಿ 23 ಹಾಗೂ ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಜಯಗಳಿಸಿದೆ. ಒಂದು ಸ್ಥಾನದಲ್ಲಿ ಮಾತ್ರ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಸರಳ ಬಹುಮತಕ್ಕೆ 28 ಸ್ಥಾನಗಳು ಬೇಕಾಗಿದ್ದು, ಯಾರಿಗೂ ಈ ಸ್ಥಾನಗಳು ಬಂದಿಲ್ಲ.
ಬಿಜೆಪಿ ನಿರೀಕ್ಷೆ ಮೀರಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಿದೆ. ಕಳೆದ ಸಲ ಬಿಜೆಪಿ ಕೇವಲ ಏಳು ಸ್ಥಾನ ಗಳಿಸಿತ್ತು. ಅದರಕ್ಕಿಂತ ಹಿಂದಿನ ಸಲ ಬಿಜೆಪಿ 17 ಸ್ಥಾನ ಹೊಂದಿತ್ತು. ಈಗ 23 ಸ್ಥಾನ ಪಡೆದಿದ್ದು, ಉತ್ತಮ ಸಾಧನೆ ಎನ್ನಬಹುದಾಗಿದೆ.
ಇದನ್ನೂ ಓದಿ:ಬೊಮ್ಮಾಯಿ ನಾಯಕತ್ವ ವಹಿಸಿದ ಒಂದೇ ತಿಂಗಳಲ್ಲಿ ಸಿಕ್ಸರ್ ಹೊಡೆದಿದ್ದಾರೆ: ಮುರುಗೇಶ್ ನಿರಾಣಿ
ಬಿಜೆಪಿ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸೇರಿ ಸದಸ್ಯರ ಬೆಂಬಲ ಪಾಲಿಕೆಯಲ್ಲಿ ಹೊಂದಿದೆ. ಹೀಗಾಗಿ ಈ ಸದಸ್ಯರ ಸಂಖ್ಯೆ ಸೇರಿದರೆ ಬಿಜೆಪಿ ಸಂಖ್ಯೆ 29 ಆಗುತ್ತದೆ. ಜೆಡಿಎಸ್ ಹಾಗೂ ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಸರಳವಾಗಿ ಅಧಿಕಾರಕ್ಕೆ ಬರಬಹುದಾಗಿದೆ.
ಪಾಲಿಕೆಯಲ್ಲಿ 55 ಸ್ಥಾನಗಳೊಂದಿಗೆ ಸಂಸದರು ಹಾಗೂ ಶಾಸಕರು ಸೇರಿ 63 ಸ್ಥಾನಗಳಾಗಲಿವೆ ಹೀಗಾಗಿ ಬಹುಮತಕ್ಕೆ 32 ಸದಸ್ಯರ ಬಹುಮತ ಅಗತ್ಯವಿದೆ.
ಕಿಂಗ್ ಮೇಕರ್ ಜೆಡಿಎಸ್: ಪಾಲಿಕೆ ಆಡಳಿತ ಚುಕ್ಕಾಣಿಯಲ್ಲಿ ಜೆಡಿಎಸ್ ಕಿಂಗ್ ಮೇಕರ ಸ್ಥಾನ ವಹಿಸಿದೆ. ಅವರು ಯಾರಿಗೆ ಬೆಂಬಲಿಸುತ್ತಾರೆಯೋ ಅವರು ಆಡಳಿತ ಚುಕ್ಕಾಣಿ ಹಿಡಿಯಲಿದೆ.
ಬಿಜೆಪಿ ತಂತ್ರಗಾರಿಕೆ: ಪಾಲಿಕೆಯಲ್ಲಿ ಈ ಸಲ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ತಂತ್ರಗಾರಿಕೆ ರೂಪಿಸಿದ್ದಲ್ಲದೇ ಈಗ ಆಡಳಿತದ ಚುಕ್ಕಾಣಿ ಹಿಡಿಯಲು ತಂತ್ರಗಾರಿಕೆ ರೂಪಿಸುತ್ತಿದ್ದು, ಬಿಜೆಪಿ ವರಿಷ್ಠರು ಹಾಗೂ ಚುನಾವಣಾ ಉಸ್ತುವಾರಿಗಳು ಖಾಸಗಿ ಹೊಟೇಲ್ ದಲ್ಲಿ ಸಭೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸಹ ತಂತ್ರಗಾರಿಕೆಯಲ್ಲಿ ತೊಡಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ