ನುಡಿಜಾತ್ರೆಗೆ ಪುಟಾಣಿಗಳ ದೇಣಿಗೆ
ಪಕ್ಷಗಳ ಕಾರ್ಯಕರ್ತರಿಂದ ದೇಣಿಗೆ ಸಂಗ್ರಹ ಶಹಾಬಾದನಲ್ಲಿ ವಿದ್ಯಾರ್ಥಿಗಳಿಂದ ಪ್ರಭಾತ್ಪೇರಿ
Team Udayavani, Jan 31, 2020, 10:55 AM IST
ಕಲಬುರಗಿ: ಅಕ್ಷರ ಜಾತ್ರೆಗೆ ಜಯನಗರದ ವಾಣಿ ವಿಲಾಸ್ ಪಬ್ಲಿಕ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಗುರುವಾರ ಜಿಲ್ಲಾಧಿಕಾರಿ ಶರತ್ ಬಿ. ಅವರಿಗೆ 10 ಸಾವಿರ ರೂ. ದೇಣಿಗೆ ನೀಡಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಹಿತ್ಯ ಸಮ್ಮೇಳನದ ಪ್ರಚಾರ ರಥದ ಚಾಲನೆ ಸಂದರ್ಭದಲ್ಲಿ ವಾಣಿ ವಿಲಾಸ ಶಿಕ್ಷಣ ಸಂಸ್ಥೆಯ ಡಾ| ಪೂಜಾ ಉತ್ತಮ, ಮುಖ್ಯಶಿಕ್ಷಕಿ ವಾಣಿ ಪ್ರಸಾದ, ಶಿಕ್ಷಕ ಅರುಣಕುಮಾರ ಅವರೊಂದಿಗೆ ಆಗಮಿಸಿದ ಶಾಲೆಯ ವಿದ್ಯಾರ್ಥಿಗಳಾದ ವರ್ಷಾ, ತನ್ಮಯ್, ಶಿವಾನಿ, ಮಹೇಶ್ವರಿ ಮತ್ತು ಪ್ರಣಿತಾ ಜಿಲ್ಲಾಧಿಕಾರಿಗೆ 10 ಸಾವಿರ ರೂ. ಮೊತ್ತದ ಚೆಕ್ ಹಸ್ತಾಂತರಿಸಿದರು.
ಮಕ್ಕಳು ನೀಡಿದ ಚೆಕ್ನ್ನು ಪ್ರೀತಿಯಿಂದ ಸ್ವೀಕರಿಸಿದ ಜಿಲ್ಲಾ ಧಿಕಾರಿ ಮಕ್ಕಳಿಗೆ ಚಾಕೊಲೇಟ್ ನೀಡಿದಲ್ಲದೆ ಕೈಕುಲಕಿ ಧನ್ಯವಾದ ತಿಳಿಸಿದರು. ಶಾಲೆಯ ಶಿಕ್ಷಕರು, ಸಂಸ್ಥೆ ಮತ್ತು ಮಕ್ಕಳು ಒಟ್ಟಾಗಿ ನುಡಿ ಸಮ್ಮೇಳನಕ್ಕೆ ಶಾಲೆಯಲ್ಲಿ ಹಣ ಸಂಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ