ರೈಲು ಓಡಾಟ-ವಿಮಾನ ಹಾರಾಟ ಸೇವೆಗೆ ಸಿದ್ಧತೆ


Team Udayavani, May 23, 2020, 5:12 PM IST

23-May-20f

ಸಾಂದರ್ಭಿಕ ಚಿತ್ರ

ಕಲಬುರಗಿ: ಲಾಕ್‌ಡೌನ್‌ ಸಡಿಲಿಕೆ ಮಾಡಿದ ಸಾರಿಗೆ ಬಸ್‌ ಸಂಚಾರ ಆರಂಭಿಸಲಾಗಿದ್ದು, ರೈಲು ಓಡಾಟ ಮತ್ತು ವಿಮಾನ ಹಾರಾಟಕ್ಕೆ ಸಿದ್ಧತೆ ನಡೆದಿವೆ. ಮೇ 25ರಿಂದ ದೇಶೀಯ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಇಲ್ಲಿನ ಸೇಡಂ ರಸ್ತೆಯ ಶ್ರೀನಿವಾಸ ಸರಡಗಿ ಸಮೀಪದ ವಿಮಾನ ನಿಲ್ದಾಣದಿಂದ ಬೆಂಗಳೂರು, ಮೈಸೂರಿಗೆ ಅದೇ ದಿನವೇ ವಿಮಾನ ಸೇವೆ ಪುನಾರಂಭಿಸಲಾಗುತ್ತಿದೆ.

ವಿಮಾನಯಾನ ಸಂಸ್ಥೆಗಳಾದ ಸ್ವಾರ್‌ ಏರ್‌, ಅಲಯನ್ಸ್‌ ಏರ್‌ ವಿಮಾನ ಸಂಚಾರಕ್ಕೆ ಆರಂಭಿಸಲು ನಿರ್ಧರಿಸಿವೆ. ಇದಕ್ಕಾಗಿ ಅವಶ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ವಿಮಾನಯಾನ ಸಂಸ್ಥೆ ಅಧಿಕಾರಿಗಳು ಅವಲೋಕನದಲ್ಲಿ ತೊಡಗಿದ್ದಾರೆ. ಅಲ್ಲದೇ, ಜಿಲ್ಲಾಡಳಿತದೊಂದಿಗೂ ವಿಮಾನ ನಿಲ್ದಾಣದ ಅಧಿಕಾರಿಗಳು ಸಮಾಲೋಚನೆ ನಡೆಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಭದ್ರತೆ, ಆರೋಗ್ಯ ತಪಾಸಣೆ ಕುರಿತಂತೆ ಚರ್ಚಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸ್ವಾರ್‌ ಏರ್‌ ವಿಮಾನ ಸಂಸ್ಥೆ ಈಗಾಗಲೇ ಟಿಕೆಟ್‌ ಬುಕ್ಕಿಂಗ್‌ ಆರಂಭಿಸಿದ್ದು, ಮೇ 25ರ ಟಿಕೆಟ್‌ ಬುಕ್‌ ಮಾಡಬಹುದಾಗಿದೆ. ಹೀಗಾಗಿ ವಿಮಾನ ಹಾರಾಟ ಆರಂಭವಾಗುವುದೂ ಬಹುತೇಕ ಖಚಿತವಾಗಿದೆ.

ರೈಲು ಓಡಾಟವೂ ಪಕ್ಕಾ: ಕಲಬುರಗಿ ರೈಲ್ವೆ ನಿಲ್ದಾಣ ಮಾರ್ಗವಾಗಿ ಜೂ.1ರಿಂದ ಮೂರು ರೈಲುಗಳ ಸಂಚಾರಕ್ಕೆ ಚಿಂತನೆ ನಡೆಸಲಾಗಿದ್ದು, ಇದರಿಂದ ರೈಲು ಓಡಾಟವೂ ಪಕ್ಕಾ ಆಗಿದೆ. ಮುಂಬೈನಿಂದ ಕಲಬುರಗಿ ಮೂಲಕ ತೆರಳುವ ಉದ್ಯಾನ್‌ ಎಕ್ಸ್‌ಪ್ರೆಸ್‌, ಹುಸೇನ್‌ ಸಾಗರ್‌, ಕೋನಾರ್ಕ್‌ ಎಕ್ಸ್‌ಪ್ರೆಸ್‌ ರೈಲು ಆರಂಭವಾಗಲಿದೆ. ಅಲ್ಲದೇ, ಶುಕ್ರವಾರದಿಂದಲೇ ರೈಲ್ವೆ ನಿಲ್ದಾಣದಲ್ಲಿ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಶುರುವಾಗಿದೆ ಎಂದು ರೈಲ್ವೆ ನಿಲ್ದಾಣದ ವ್ಯವಸ್ಥಾಪಕ ಎ.ಎಸ್‌. ಪ್ರಸಾದ್‌ರಾವ್‌ ತಿಳಿಸಿದ್ದಾರೆ. ಒಟ್ಟಾರೆ, ಲಾಕ್‌ಡೌನ್‌ನಿಂದ ಒಂದೂವರೆ ತಿಂಗಳಿಂದ ಸ್ತಬ್ಧಗೊಂಡಿದ್ದ ಸಂಚಾರ ಮುಂದಿನ ಒಂದು ವಾರದಲ್ಲಿ ಮರಳಿ ಹಳಿಗೆ ಬರುವ ಎಲ್ಲ ಲಕ್ಷಣ ಕಾಣುತ್ತಿವೆ.

ಎಂಟು ಕಡೆ ಟಿಕೆಟ್‌ ಬುಕ್ಕಿಂಗ್‌
ಜೂ.1ರಿಂದ ರೈಲು ಸಂಚಾರ ಆರಂಭಿಸುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಎಂಟು ಪ್ರಮುಖ ರೈಲ್ವೆ ನಿಲ್ದಾಣದಲ್ಲಿ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಕೌಂಟರ್‌ ಆರಂಭಿಸಲಾಗಿದೆ. ಕಲಬುರಗಿ, ಸೇಡಂ, ಯಾದಗಿರಿ, ನಾಲವಾರ, ಸೈದಾಪುರ, ರಾಯಚೂರು, ಹೊಸಪೇಟೆ, ಬಳ್ಳಾರಿ ರೈಲ್ವೆ ನಿಲ್ದಾಣಗಳಲ್ಲಿ ಟಿಕೆಟ್‌ ಬುಕ್ಕಿಂಗ್‌ ಮಾಡಬಹುದಾಗಿದೆ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.