ರೈಲ್ವೇ ನಿಲ್ದಾಣ ಸೌಂದರ್ಯೀಕರಣಕ್ಕೆ
100 ಅಡಿ ಉದ್ದದ ರಾಷ್ಟ್ರಧ್ವಜ ಸ್ತಂಭ ಸ್ಥಾಪನೆಪ್ರಯಾಣಿಕರಿಗೆ ಹವಾ ನಿಯಂತ್ರಿತ ಕೊಠಡಿ
Team Udayavani, Jan 29, 2020, 10:41 AM IST
ಕಲಬುರಗಿ: ನಗರದ ರೈಲ್ವೆ ನಿಲ್ದಾಣದ ಸೌಂದರ್ಯೀಕರಣ ಹಾಗೂ ಮುಂಭಾಗದಲ್ಲಿ ಸ್ಥಾಪಿಸಲಾಗಿರುವ 100 ಅಡಿ ಉದ್ದದ ರಾಷ್ಟ್ರಧ್ವಜ ಸ್ತಂಭ, ವರ್ಟಿಕಲ್ ಗಾರ್ಡನ್ (ಲಂಬ ಉದ್ಯಾನ್) ಮತ್ತು ಹವಾನಿಯಂತ್ರಿತ ಕೋಣೆಗೆ ಸಂಸದ ಡಾ| ಉಮೇಶ ಜಾಧವ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕಲಬುರಗಿ ರೈಲ್ವೆ ನಿಲ್ದಾಣ ಮುಂದುಗಡೆ 100 ಅಡಿ ಉದ್ದದ ರಾಷ್ಟ್ರಧ್ವಜ ಸ್ತಂಭ, ಸಾಮಾನ್ಯ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಿತ ಕೊಠಡಿ ಉದ್ಘಾಟನೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದರು. ಕಲಬುರಗಿ ಮಾತ್ರವಲ್ಲದೆ ಲಾತೂರ್, ಅಹಮದಾಬಾದ್ ನಗರಗಳ ರೈಲ್ವೆ ನಿಲ್ದಾಣಗಳಲ್ಲಿಯೂ ಈಗಾಗಲೇ 100 ಅಡಿ ಉದ್ದದ ರಾಷ್ಟ್ರಧ್ವಜ ಸ್ತಂಭ ಉದ್ಘಾಟನೆಯಾಗಿದೆ. ಮುಂಬರುವ ದಿನಗಳಲ್ಲಿ ದೇಶದ ಎಲ್ಲ ರೈಲು ನಿಲ್ದಾಣಗಳ ಎದುರು 100 ಅಡಿ ಉದ್ದದ ಧ್ವಜಸ್ತಂಭ ಉದ್ಘಾಟಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದರು.
ಇದೇ ವೇಳೆ ವಿಮಾನ ನಿಲ್ದಾಣ ಜಾಗದಲ್ಲಿದ್ದ ಸಂತ ಸೇವಾಲಾಲ ಮಂದಿರ ಧ್ವಂಸದ ಕುರಿತು
ಸಂಪೂರ್ಣ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕೆಂದು ಒತ್ತಾಯಿಸಿದರು.ಸಂತ ಸೇವಾಲಾಲ ಮಂದಿರ ಧ್ವಂಸದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಈ ವಿಷಯದಲ್ಲಿ ರಾಜಕೀಯ ಮಾಡದೇ ತನಿಖೆ ನಡೆಸಬೇಕು. ಸಮಾಜ ಬಾಂಧವರನ್ನು ಸಮಾಧಾನಗೊಳಿಸಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡಿದ್ದೇನೆ ಎಂದರು.
ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಜಿ.ಪಂ. ಸದಸ್ಯ ಶಿವರಾಜ ಪಾಟೀಲ ರದ್ದೇವಾಡಗಿ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಟಾಳ, ಐಜಿಪಿ ಮನೀಷ ಖರ್ಬೇಕರ್, ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಶೈಲೇಶ ಗುಪ್ತಾ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ