ಕಸಾಪ ವರ್ಷಾಚರಣೆ; ನ.21 ರಂದು ಭಾವ ಸಮ್ಮಿಲನ; ಪತ್ರಕರ್ತರಿಗೆ ಸನ್ಮಾನ
Team Udayavani, Nov 18, 2022, 2:02 PM IST
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಹಿತ್ಯ ಪ್ರಿಯ ಮನಗಳ ಸಮ್ಮಿಲನಗೊಳ್ಳುವ “ಭಾವ ಸಮ್ಮಿಲನ” ಎಂಬ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಅರ್ಥಪೂರ್ಣ ವರ್ಷಾಚರಣೆಯನ್ನು ನ.21 ರ ಬೆಳಗ್ಗೆ 11:15 ಕ್ಕೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.
ನಗರದ ಕನ್ನಡ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮಗಳನ್ನು ಸಂಘಟಿಸುವುದು ಹೊಸ ಹೊಸ ಪ್ರತಿಭೆಗಳನ್ನು ನಾಡಿಗೆ ಪರಿಚಯಿಸುವುದು, ವಿನೂತನ ವಿಶಿಷ್ಟ ಕಾರ್ಯಕ್ರಮಗಳಿಗೆ ಹೆಸರಾಗಿದ್ದು, ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಾಗಿದ್ದು, ಅಧ್ಯಕ್ಷರಾಗಿ ಒಂದು ವರ್ಷದಲ್ಲಿ ನೂರಾರು ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದೆವೆ ಎಂದು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಒಂದು ವರ್ಷವನ್ನು ಪೂರೈಸುತ್ತಿರುವ ಈ ಶುಭ ಸಂದರ್ಭದಲ್ಲಿ ಕಾರ್ಯಕ್ರಮಗಳ ಪ್ರವಾಹದಲ್ಲಿನ ಕೆಲವು ಪ್ರಮುಖ ಹನಿಗಳನ್ನು ಪರಿಚಯಿಸುವ ಪ್ರಯತ್ನವನ್ನು ಪತ್ರಿಕಾ ಛಾಯಾಗ್ರಾಹಕ ರಾಜು ಕೊಷ್ಠಿ ಸಾರಥ್ಯದ ನವ ಕಲ್ಯಾಣ ವಿಡಿಯೋ ಮತ್ತು ಫೋಟೋಗ್ರಾಫರ ಅಸೋಸಿಯೇಷನ್ ವತಿಯಿಂದ ಭಾವಚಿತ್ರಗಳ ಪ್ರದರ್ಶನವೂ ಅಂದು ಜರುಗಲಿದೆ ಎಂದರು.
ಈ ವೇಳೆ ಪತ್ರಕರ್ತರಾದ ವಾದಿರಾಜ ವ್ಯಾಸಮುದ್ರ, ಸ.ಡಾ.ಜೋಶಿ, ರಾಮಕೃಷ್ಣ ಬಡಶೇಷಿ, ದೇವಯ್ಯಾ ಗುತ್ತೇದಾರ, ಶೇಷಮೂರ್ತಿ ಅವಧಾನಿ, ರಾಹುಲ್ ಬೆಳಗಲಿ, ಹಣಮಂತರಾವ ಭೈರಾಮಡಗಿ, ಕುಮಾರ ಬುರಡಿಕಟ್ಟಿ, ಟಿ.ಗಣೇಶಕುಮಾರ, ಸಂತೋಷ ನಾಡಗೇರಿ ಅವರನ್ನು ಇದೇ ಸಂದರ್ಭದಲ್ಲಿ ವಿಶೇಷವಾಗಿ ಸತ್ಕರಿಸಲಾಗುವುದೆಂದು ತೇಗಲತಿಪ್ಪಿ ವಿವರಿಸಿದರು.
ಕಾರ್ಯಕ್ರಮದ ಯಶಸ್ವಿಗೆ ಪೂರಕವಾಗಿ ರಚಿಸಲಾಗಿರುವ ವರ್ಷಾಚರಣೆ ಸಮಿತಿಗೆ ಅಧ್ಯಕ್ಷರನ್ನಾಗಿ ಮುಡುಬಿ ಗುಂಡೇರಾವ, ಗೌರವಾಧ್ಯಕ್ಷರಾಗಿ ಕಲ್ಯಾಣಕುಮಾರ ಶೀಲವಂತೆ, ಜಗದೀಶ ಮರಪಳ್ಳಿ, ಶರಣರಾಜ ಭಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ವಿದ್ಯಾಸಾಗರ ದೇಶಮುಖ, ಸಿದ್ಧಲಿಂಗ ರೆಡ್ಡಿ ಪಾಟೀಲ, ಆಶೋಕ ಮಾಲಿ ಅವರನ್ನು ನೇಮಕ ಮಾಡಲಿದ್ದು, ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ. ಲೇಖಕ ಡಾ. ಕೆ.ಗಿರಿಮಲ್ಲ ಅವರು ಬರೆದ ವರ್ಷದ ಕಾರ್ಯಕ್ರಮದ ಪಕ್ಷಿನೋಟಗಳನ್ನೊಳಗೊಂಡ ‘ವಿಜಯೋತ್ಸಾಹ’ ಎಂಬ ಕೃತಿಯನ್ನು ಗುಲಬರ್ಗ ವಿವಿ ಯ ಕುಲಪತಿ ಪ್ರೊ. ದಯಾನಂದ ಆಗಸರ ಜನಾರ್ಪಣೆ ಮಾಡಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಸೇರಿದಂತೆ ಅನೇಕ ಗಣ್ಯರು, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಿವರಾಜ್ ಅಂಡಗಿ, ವಿಧ್ಯಾಸಾಗರ ದೇಶಮುಖ್, ಸಂತೋಷ ಕೂಡಹಳ್ಳಿ, ರವೀಂದ್ರ ಬಂಟನಳ್ಳಿ, ಶ್ಯಾಮಸುಂದರ ಕುಲಕರ್ಣಿ ಮತ್ತು ನಾಗಪ್ಪ ಸಜ್ಜನ್, ಶರಣರಾಜ್ ಚಪ್ಪರಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್