Viral Video; ಕೆಲಸದ ಆಮಿಷ: ರಷ್ಯಾದಲ್ಲಿ ತೊಂದರೆಗೆ ಸಿಲುಕಿದ ಕಲಬುರಗಿಯ ಯುವಕರು

ಯುವಕರ ತೊಂದರೆ ವಿಡಿಯೋ ವೈರಲ್: ಪಾಲಕರಿಂದ ಬಿಡುಗಡೆಗೆ ಮನವಿ

Team Udayavani, Feb 22, 2024, 1:30 PM IST

ಕೆಲಸದ ಆಮಿಷ: ರಷ್ಯಾದಲ್ಲಿ ತೊಂದರೆಗೆ ಸಿಲುಕಿದ ಕಲಬುರಗಿಯ ಯುವಕರು

ಕಲಬುರಗಿ: ಕೆಲಸಕ್ಕಾಗಿ ಏಜೆಂಟ್ ಮೂಲಕ ರಷ್ಯಾಗೆ ತೆರಳಿದ್ದ ಕಲಬುರಗಿಯ ನಾಲ್ಕು ಯುವಕರು ಯುದ್ಧಕಾರ್ಯದಲ್ಲಿ ಸಿಲುಕಿದ್ದಾರೆ. 2023ರ ಡಿಸೆಂಬರ್ 5 ರಂದು ರಷ್ಯಾಕ್ಕೆ ತೆರಳಿದ್ದು, ಅಲ್ಲಿ ಸೆಕ್ಯುರಿಟಿ ಕೆಲಸ ಕೊಡಿಸುವುದಾಗಿ ಹೇಳಿ ಸೇನೆಗೆ ಸೇರ್ಪಡೆಗೊಳಿಸಿದ್ದು, ಅಲ್ಲಿ ತೊಂದರೆಯಾಗುತ್ತಿದೆ ಎಂದು ಯುವಕರೆ ವಿಡಿಯೋ ಮಾಡಿ ಕುಂಬದ ಸದಸ್ಯರಿಗೆ ಕಳಿಸಿದ್ದಾರೆ.

ಈ ವಿಷಯವನ್ನು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಖಚಿತ ಪಡಿಸಿದ್ದಾರೆ. ಹೆಡ್ ಕಾನಸ್ಟೇಬಲ್ ಸೈಯದ್ ನವಾಜ ಅಲಿ ಪುತ್ರ ಸೈಯದ್ ಇಲಿಯಾಸ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ನೌಕರಿ ಆಸೆಗಾಗಿ ಊರು‌ ಬಿಟ್ಟರು:  ನೌಕರಿ ಆಸೆಗಾಗಿ ಊರು‌ ಬಿಟ್ಟ ಈ ನಾಲ್ವರು ಯುವಕರು ಮುಂಬೈ ಮೂಲದ ಬಾಬಾಖಾನ್ ಎನ್ನುವ ಏಜೆಂಟ್ ಮೂಲಕ ರಷ್ಯಾ ಗೆ ತೆರಳಿದ್ದಾರೆ. ಅದಕ್ಕಾಗಿ ಮೂರು ಲಕ್ಷ ರೂ.ಗಳನ್ನು ವ್ಯಯಿಸಿದ್ದಾರೆ. ಆದರೆ, ಕೆಲಸ ಸಿಗುವ ಆಸೆಯಲ್ಲಿ ರಷ್ಯಾಗೆ ಹೋದ ಯುವಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದಕ್ಕೂ ಮುನ್ನ ಈ ಯುವಕರು ದುಬೈ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದರು. ಬಾಬಾ ಬ್ಲಾಗ್ ನಲ್ಲಿ ಜಾಹೀರಾತು ನೋಡಿ ರಷ್ಯಾಗೆ ಹೋಗಿದ್ದರು. ಸೆಕ್ಯುರಿಟಿ ನೌಕರಿಗೆ ಹೋದವರನ್ನು ಉಕ್ರೇನ್ ವಿರುದ್ಧದ ಯುದ್ದಕ್ಕಾಗಿ ಸೇನೆಯಲ್ಲಿ ಸೇರಿಸಲಾಗಿದೆ.

ಕಲಬುರಗಿಯ ಆಳಂದ ತಾಲೂಕಿನ ನರೋಣದ ಮತ್ತು ಕಾಳಗಿ ಮೂಲದವರು ಎನ್ನಲಾಗಿರುವ ಈ ಯುವಕರು ರಷ್ಯಾದ ಸೇನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಅವರಿಗೆ ಅಲ್ಲಿ ತೊಂದರೆಯಾಗಿದ್ದು, ಅದನ್ನು ವಿಡಿಯೋ ಮುಖಾಂತರ ಪಾಲಕರಿಗೆ ತಿಳಿಸಿದ್ದಾರೆ.

ಉಕ್ರೇನ್ ನಲ್ಲಿರುವ ಹುಡುಗನ ತಂದೆ ನವಾಜ್ ಕಾಳಗಿ, ನನ್ನ ಮಗನಿಗೆ ಏಜೆಂಟ್​ಗಳು ಮೋಸ ಮಾಡಿದ್ದಾರೆ. ಅವನು ಸಮಸ್ಯೆಯಲ್ಲಿದ್ದಾನೆ. ನನ್ನ ಮಕ್ಕಳಿಗೆ ಮೋಸವಾಗಿದೆ. ಭಾರತದ ಅನೇಕ ಜನರಿಗೆ ಮೋಸವಾಗಿದೆ ಎಂದು ಕಣ್ಣೀರು ಹಾಕಿದ್ದಲ್ಲದೆ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ರಕ್ಷಣೆ ಮಾಡುವಂತೆ ಕೋರಿದ್ದಾರೆ.

ಉಕ್ರೇನ್ ಗಡಿಯಲ್ಲಿ ಯುದ್ದದಲ್ಲಿ ನಿಯೋಜನೆ ಮಾಡಿದ್ದಾರೆ. ತರಬೇತಿ ನಡೆದಿದೆ ಎಂದು ಹೇಳಿ ಬಾರ್ಡರ್ ನಲ್ಲಿ ನಿಯೋಜನೆ ಮಾಡಿದ್ದಾರೆ. ಮತ್ತೊಬ್ಬ ಯುವಕನನ್ನು ಎಲ್ಲಿ ಹಾಕಿದ್ದಾರೆಂದು ಇದುವರೆಗೂ ಗೊತ್ತಾಗಿಲ್ಲ ಎಂದು ಯುವಕನ ತಂದೆ ಅಳಲು ತೋಡಿಕೊಂಡಿದ್ದಾರೆ. ಆದಷ್ಟು ಬೇಗ ಸರ್ಕಾರ ಮಧ್ಯೆ ಪ್ರವೇಶಿಸಿ ಯುವಕರನ್ನು ತವರಿಗೆ ಕರೆತರಬೇಕು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬುಧವಾರವಷ್ಟೇ ನನಗೆ ಕಲಬುರಗಿಯ ಕೆಲ ಯುವಕರು ಉದ್ಯೋಗಕ್ಕೆ ಹೋಗಿ ರಷ್ಯಾದ ಗಡಿಯಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ದೊರಕಿದೆ. ಒಬ್ಬ ಯುವಕ ಕಾಳಗಿ ಮತ್ತು ಇನ್ನೊಬ್ಬ ಆಳಂದ ನರೋಣ ಗ್ರಾಮದವರು ಎಂದು ಗೊತ್ತಾಗಿದೆ. ಸಿಲುಕಿರುವ ಯುವಕರ ಪೋಷಕರು ಅವರ ಪಾಸ್‌ಪೋರ್ಟ್ ಸೇರಿದಂತೆ ವಿವಿಧ ದಾಖಲೆಗಳನ್ನು ನೀಡಿದ್ದಾರೆ. ಈಗಗಾಲೇ ಸಂಬಂಧಪಟ್ಟ ಇಲಾಖೆ‌ ಮಾಹಿತಿ ಕಳುಹಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಹೇಳಿದ್ದಾರೆ.

ಟಾಪ್ ನ್ಯೂಸ್

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.