ಕಲಬುರಗಿಯಲ್ಲಿನ್ನು “ಮೋದಿ’ ಆಡಳಿತ


Team Udayavani, Apr 14, 2017, 4:19 PM IST

gul7.jpg

ಕಲಬುರಗಿ: ನಿರೀಕ್ಷೆಯಂತೆ ಮಹಾನಗರ ಪಾಲಿಕೆಗೆ ಪ್ರಸಕ್ತ ಆಡಳಿತದ ನಾಲ್ಕನೇ ಅವಧಿಗೆ ವಾರ್ಡ್‌ ನಂಬರ್‌ 17ರ ಸದಸ್ಯ ಕಾಂಗ್ರೆಸ್‌ ಪಕ್ಷದ ಶರಣಕುಮಾರ ಮೋದಿ ಮಹಾಪೌರರಾಗಿ ಚುನಾಯಿತರಾಗಿದ್ದಾರೆ. ಅದೇ ರೀತಿ ಉಪ ಮಹಾಪೌರರಾಗಿ ವಾರ್ಡ್‌ ನಂಬರ್‌ 1ರ ಸದಸ್ಯೆ ಕಾಂಗ್ರೆಸ್‌ ಪಕ್ಷದ ಪುತಳಿಬೇಗಂ ಆಯ್ಕೆಯಾಗಿದ್ದಾರೆ. 

ಈ ಹಿಂದಿನ ಎರಡು ಅವಧಿಯಲ್ಲೂ ಮೇಯರ್‌ ಸ್ಥಾನದ ಆಕ್ಷಾಂಕಿಯಾಗಿದ್ದ ಶರಣಕುಮಾರ ಮೋದಿ ಅವರಿಗೆ ಮೂರನೇ ಪ್ರಯತ್ನದಲ್ಲಿ ಮಹಾಪೌರರ ಗದ್ದುಗೆ ಒಲಿಯಿತು. ಪಾಲಿಕೆಯ ಇಂದಿರಾ ಸ್ಮಾರಕ ಭವನದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಮೋದಿ 40 ಮತ ಪಡೆದು ಬಿಜೆಪಿ ಅಭ್ಯರ್ಥಿ ವೀರಣ್ಣ ಹೊನ್ನಳಿ ಅವರನ್ನು ಸೋಲಿಸಿ ಚುನಾಯಿತರಾದರು.

ಹೊನ್ನಳಿಗೆ ಕೇವಲ 17 ಮತ ಪಡೆದು ಪರಾಭವ ಹೊಂದಿದರು. ಅದೇ ರೀತಿ ಉಪಮೇಯರ್‌ ಆಗಿ ವಾರ್ಡ್‌ ನಂಬರ್‌ 1ರ ಸದಸ್ಯೆ ಕಾಂಗ್ರೆಸ್‌ ಪಕ್ಷದ ಪುತಳಿಬೇಗಂ ಸಹ 40 ಮತ ಪಡೆದು ಚುನಾಯಿತರಾದರೆ ಬಿಜೆಪಿಯ ಮೀನಾಕ್ಷಿ ಬಂಡೆ ಸೋಲು ಅನುಭವಿಸಿದರು. ಪ್ರಾದೇಶಿಕ ಆಯುಕ್ತ ಆಮ್ಲಾನ್‌ ಆದಿತ್ಯ ಬಿಸ್ವಾಸ್‌ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಆಯ್ಕೆಯನ್ನು ಘೋಷಿಸಿದರು.

55 ಪಾಲಿಕೆ ಸದಸ್ಯರು ಸೇರಿ ಒಟ್ಟಾರೆ 63 ಮತದಾರ ಸದಸ್ಯರಲ್ಲಿ 57 ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು. 55 ಪಾಲಿಕೆ ಸದಸ್ಯರಲ್ಲಿ ವಾರ್ಡ್‌ ನಂಬರ್‌ 4ರ ಸದಸ್ಯೆ ನಾದಿರಾ ಜಮೀಲ್‌ ಮಾತ್ರ ಚುನಾವಣೆಯಲ್ಲಿ ಪಾಲ್ಗೊಳ್ಳದೇ ಗೈರು ಹಾಜರಾಗಿದ್ದರು. ಬಿಜೆಪಿಯ ನಾಲ್ವರು ಶಾಸಕರ ಪೈಕಿ ಒಬ್ಬರೂ ಚುನಾವಣೆ ಪ್ರಕ್ರಿಯೆಲ್ಲಿ ಪಾಲ್ಗೊಳ್ಳಲಿಲ್ಲ.

ಪಾಲಿಕೆಯ ಒಟ್ಟು 55 ಸದಸ್ಯ ಸ್ಥಾನಗಳಲ್ಲಿ 23 ಸದಸ್ಯ ಸ್ಥಾನ ಹೊಂದಿರುವ ಕಾಂಗ್ರೆಸ್‌ 14 ಪಕ್ಷೇತರ ಸದಸ್ಯರೊಂದಿಗೆ ಆಡಳಿತ ಚುಕ್ಕಾಣಿ ಹಿಡಿಯಿತು. ಪಾಲಿಕೆಯ ಒಟ್ಟು 55 ಸ್ಥಾನಗಳಲ್ಲಿ ಕಾಂಗ್ರೆಸ್‌ 23, ಜೆಡಿಎಸ್‌ 10, ಕೆಜೆಪಿ-ಬಿಜೆಪಿ ತಲಾ 7 ಸ್ಥಾನಗಳು 08 ಪಕ್ಷೇತರ ಸದಸ್ಯರಿದ್ದಾರೆ. 8 ಜನ ಶಾಸಕ-ಸಂಸದರು ಸೇರಿದಂತೆ ಒಟ್ಟು 63 ಸದಸ್ಯರಿದ್ದಾರೆ. 

ಅಧಿಕಾರ ಹಿಡಿಯಲು 32 ಸದಸ್ಯರ ಬಹುಮತ ಬೇಕು. ಒಟ್ಟಾರೆ ಪಾಲಿಕೆಯಲ್ಲಿ ಯಾರಿಗೂ ಬಹುಮತ ಇರದಿದ್ದರೂ ಕಾಂಗ್ರೆಸ್‌ ಪಕ್ಷೇತರ 8 ಜನ, ನಾಲ್ವರು ಜೆಡಿಎಸ್‌ ಹಾಗೂ ಇಬ್ಬರು ಕೆಜೆಪಿ ಸದಸ್ಯರೊಂದಿಗೆ ಅಧಿಕಾರಕ್ಕೆ ಬಂದಿದೆ. ಮಹಾಪೌರರ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರಿಂದ ತೀವ್ರ ಪೈಪೋಟಿ ಕಂಡು ಬಂದಿತ್ತು.

ಹುಲಿಗೆಪ್ಪ ಕನಕಗಿರಿ, ರಮೇಶ ತಿಪ್ಪಣ್ಣಪ್ಪ ಕಮಕನೂರ, ಮಲ್ಲಿಕಾರ್ಜುನ ಟೆಂಗಳಿ, ಮಹೇಶ ಹೊಸುರಕರ್‌ ಅವರೂ ಆಕಾಂಕ್ಷಿಗಳಾಗಿದ್ದರು. ವರಿಷ್ಠರು ಎಲ್ಲ ಸದಸ್ಯರ ಅಭಿಪ್ರಾಯ ಪಡೆದು ಕೊನೆಗೆ ಮೋದಿ ಅವರ ಹೆಸರನ್ನು ಅಂತಿಮಗೊಳಿಸಿದ್ದರಿಂದ ನಿರೀಕ್ಷೆಯಂತೆ ಆಯ್ಕೆಯಾದರು. 

ಪಾಲಿಕೆಯಲ್ಲಿ ಕಿಂಗ್‌ ಮೇಕರ್‌ ಎಂದೇ ಖ್ಯಾತಿ ಪಡೆದಿರುವ ಮಾಜಿ ಸಚಿವ ಖಮರುಲ್‌ ಇಸ್ಲಾಂ, ಶಾಸಕ ಜಿ. ರಾಮಕೃಷ್ಣ, ವಿಧಾನ ಪರಿಷತ್‌ ಸದಸ್ಯ ಇಕ್ಬಾಲ ಅಹ್ಮದ ಸರಡಗಿ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ನಂತರ ಮಾತನಾಡಿದ ಮಾಜಿ ಸಚಿವ ಖಮರುಲ್‌ ಇಸ್ಲಾಂ, ನಂಜನಗೂಡು ಹಾಗೂ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್‌ ಗೆಲುವಿನೊಂದಿಗೆ ಕಲಬುರಗಿ ಪಾಲಿಕೆಯಲ್ಲೂ ಕಾಂಗ್ರೆಸ್‌ ಆಡಳಿತ ಚುಕ್ಕಾಣಿ ಮುಂದುವರಿಸಿರುವುದನ್ನು ಮುಖ್ಯಮಂತ್ರಿಗೆ ಕಾಣಿಕೆಯಾಗಿ ನೀಡುವುದಾಗಿ ಘೋಷಿಸಿದರು. 

ಮೇಯರ್‌ ಆಯ್ಕೆಯಾಗುತ್ತಿದ್ದಂತೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಶಾಸಕ ಡಾ| ಅಜಯಸಿಂಗ್‌, ವೀಕ್ಷಕರಾಗಿ ಆಗಮಿಸಿದ ಪ್ರಕಾಶ ರಾಥೋಡ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಭಾಗಣ್ಣಗೌಡ ಪಾಟೀಲ ಸಂಕನೂರ ನೂತನ ಮೇಯರ್‌ ಮೋದಿಗೆ ಶುಭ ಕೋರಿದರು. 

ವಿಜಯೋತ್ಸವ: ಶರಣುಮಾರ ಮೋದಿ ಮಹಾಪೌರರಾದ ನಂತರ ವಿಜಯೋತ್ಸವ, ತೆರೆದ ವಾಹನದಲ್ಲಿ ಮೆರವಣಿಗೆ ನಡೆಯಿತು. ಪಕ್ಷದ ಅಭಿಮಾನಿಗಳು, ವಾರ್ಡ್‌ನ ಮತದಾರರು, ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. 

ಮೂರನೇ ಸ್ಥಾನ: ಪ್ರಸಕ್ತ ಆಡಳಿತದ ಮೂವರು ಮೇಯರ್‌ ಅವಧಿಯುದ್ದಕ್ಕೂ ನಿರೀಕ್ಷೆ ಮೀರಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಮಾದರಿ ನಗರವನ್ನಾಗಿಸುವ ಗುರಿಯತ್ತ ಮುನ್ನಡೆಯಲಾಗುತ್ತಿದೆ. ಉತ್ತಮ ಆಡಳಿತ ನೀಡುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ಪಾಲಿಕೆ ಮೂರನೇ ಸ್ಥಾನ ಪಡೆದಿದೆ.  

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.