ಕುಗ್ರಾಮ ಬಸನಾಳದಲ್ಲಿ ನಲಿಕಲಿ ತ್ರೀಡಿ ಶಾಲೆ

ಗುರು ಬಂಗರಗಿ ಕಲಾತಂಡದಿಂದ ಅದ್ಭುತ ಕಾರ್ಯ ಸರ್ಕಾರಿ ಶಾಲೆಯೆಂದು ಮೂಗು ಮುರಿಯುವಂತಿಲ್ಲ

Team Udayavani, Feb 23, 2020, 10:41 AM IST

23-February-01

ಕಲಬುರಗಿ: ಛುಕ್‌ಬುಕ್‌…ಛುಕ್‌ಬುಕ್‌.. ಎನ್ನುವ ಶಬ್ದವಿಲ್ಲದೇ ಕುಗ್ರಾಮಕ್ಕೆ ಬಂತು ನಲಿಕಲಿ ನಂದಾದೀಪ ಫ‌ಲಕ ಹಾಕಿದ ಎಕ್ಸಪ್ರಸ್‌ ರೈಲು. ಈ ರೈಲು ಬರುತ್ತಿದ್ದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬಡಬಡನೆ ಹತ್ತಿದರು. ಆದರೂ ರೈಲು ಮುಂದಕ್ಕೆ ಹೋಗಲಿಲ್ಲ, ಹೋಗದಿದ್ದರೂ ರೈಲಿನಲ್ಲಿ ಕುಳಿತಂತೆ ಭಾಸವಾಗುತ್ತಿತ್ತು.

ಇಂತಹದೊಂದು ಘಳಿಗೆಗೆ ಸಾಕ್ಷಿಯಾಗಿದ್ದು ಗುರು ಬಂಗರಗಿ ಕಲಾ ತಂಡ. ಈ ತಂಡ ತಾಲೂಕಿನ ಗಡಿ ಭಾಗದ ಪುಟ್ಟ ಕುಗ್ರಾಮ ಬಸನಾಳದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡಕ್ಕೆ ಮುಖ್ಯ ಶಿಕ್ಷಕರು ಹಾಗೂ ದಾನಿಗಳ ನೆರವಿನಿಂದ ಬಿಡಿಸಿದ ರೈಲಿನ ವರ್ಣಚಿತ್ರ ಹಾಗೂ ತ್ರೀಡಿ ಮಾದರಿಯ ನಲಿಕಲಿ ಕೋಣೆಗಳನ್ನು ನಿರ್ಮಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿದು ಕೂಲಿ ಮಾಡುವವರೂ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವಂತಹ ಪರಿಸ್ಥಿತಿ ಇರುವ ಸಂದರ್ಭದಲ್ಲಿ ಈ ಕುಗ್ರಾಮದಲ್ಲಿನ ಶಾಲೆಯು ತನ್ನದೇ ಆದ ರೀತಿಯಲ್ಲಿ ಆಕರ್ಷಣೆಗೆ ಒಳಗಾಗಿದೆ. ಶಾಲೆಯ ಅಭಿವೃದ್ಧಿಗಾಗಿ ದಾನಿಗಳ ಸಹಕಾರ ಪಡೆದು, ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಸತತ ಪ್ರಯತ್ನ ಆರಂಭವಾಗಿದೆ. ಶಾಲಾ ಪ್ರಭಾರಿ ಮುಖ್ಯಶಿಕ್ಷಕ ವಿಠ್ಠಲ ಗೌರಶೆ ಶಾಲೆಗೆ ರೈಲು ಮಾದರಿ ನೀಡಲು ಸಹಕಾರ ನೀಡಿದ್ದಾರೆ. ತಾಲೂಕು ಪಂಚಾಯಿತಿ ಸದಸ್ಯ ಚಂದ್ರಕಾಂತ ಶಕಾಪುರ ಅವರ ಸಹಾಯದಿಂದ ಎರಡು ಕೋಣೆಗಳಿಗೆ ತ್ರೀಡಿ ಮಾದರಿಯಲ್ಲಿ ಬಣ್ಣ ಲೇಪನ ಮಾಡಿ ಜಿಲ್ಲೆಯಲ್ಲಿಯೇ ಮಾದರಿ ಶಾಲೆ ಮಾಡಲು ತನು, ಮನ, ಧನದಿಂದ ಸಹಾಯ ಮಾಡಿದ್ದಾರೆ ಎನ್ನುತ್ತಾರೆ ಶಾಲೆಯ ಶಿಕ್ಷಕ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಹುಸೇನ್‌ ವಡಗೇರಿ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾಳಪ್ಪ ಯಳಸಂಗಿ ಅವರು ಮಾದರಿ ಶಾಲೆ ಮಾಡುವ ಉದ್ದೇಶದಿಂದ ಮೂರು ಕೋಣೆಗಳಿಗೆ ಅಂದವಾದ ನೆಲಹಾಸಿಗೆ ಕೊಡಿಸಿದ್ದಲ್ಲದೇ, ಶಾಲೆ ಆವರಣದಲ್ಲಿ ನೂರು ಗಿಡಗಳನ್ನು ನೀಡಿ ಪರಿಸರ ಉತ್ತಮಗೊಳ್ಳುವಂತೆ ಸಹಕರಿಸಿದ್ದಾರೆ. ಇನ್ನೊಬ್ಬ ಶಿಕ್ಷಣ ಪ್ರೇಮಿ ಸುರೇಶ ನಿಂಬರ್ಗಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಮಕ್ಕಳ ಸಮವಸ್ತ್ರಕ್ಕಾಗಿ ಧನಸಹಾಯ ಮಾಡಿದ್ದಾರೆ. ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಆಸ್ಟ್ರೇಲಿಯಾದಲ್ಲಿ ಉದ್ಯಮಿಯಾಗಿರುವ ಶರಣಗೌಡ ಪಾಟೀಲರು ಶಾಲಾ ಅಭಿವೃದ್ಧಿಗಾಗಿ ಧನಸಹಾಯ ನೀಡಿದ್ದಾರೆ.

ಈರಣ್ಣ ಮಾಲಗತ್ತಿ ಅವರು ಶಾಲೆಗೆ ಬೇಕಾದ ಪರಿಕರಗಳನ್ನು ಕೊಡುವುದಾಗಿ ಭರವಸೆ ನೀಡಿದ್ದಾರೆ. ಶಾಲೆ ಉನ್ನತಿಗಾಗಿ ದಾನಿಗಳ ಮನವೊಲಿಸುವ ಕಾರ್ಯವನ್ನು ನಿಕಟಪೂರ್ವ ಮುಖ್ಯ ಶಿಕ್ಷಕ ವಿಠಲ ಗೌರಶೆ, ಶಾಲೆ ನಾವಿನ್ಯತೆ ಕುರಿತು ಸದಾಕಾಲ ಕನಸು ಕಾಣುವ ಶಿಕ್ಷಕ ಮತ್ತು ರಾಜ್ಯ ಸಂಪನ್ಮೂಲ ವ್ಯಕ್ತಿ ಹುಸೇನ್‌ ವಡಗೇರಿ ಅವರ ಪಾತ್ರ ಶ್ಲಾಘನೀಯವಾಗಿದೆ ಎಂದು ಶಾಲೆ ಮುಖ್ಯ ಶಿಕ್ಷಕ ದೇವಿಂದ್ರಪ್ಪ ಕುಂಬಾರ ಬಣ್ಣಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ವೀರಣ್ಣ ಬೊಮ್ಮನಹಳ್ಳಿ , ಅಜೀಂ ಪ್ರೇಮಜಿ ಫೌಂಡೇಶನ್‌ ಜಿಲ್ಲಾ ನೋಡಲ್‌ ಅಧಿಕಾರಿ ಮಹಾದೇವ ಮೂಲಗೆ, ಸಮೂಹ ಸಂಪನ್ಮೂಲ ವ್ಯಕ್ತಿ ಅರುಣಕುಮಾರ ಶಾಲೆಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಾದ ಸಿದ್ರಾಮ ಲೋಣಿ, ಯಮನಪ್ಪ ಭಜಂತ್ರಿ, ನಿಷ್ಕಲೇಶಯ್ಯ ಹಿರೇಮಠ, ರಾಧಾ ಕೆ., ಅತಿಥಿ ಶಿಕ್ಷಕರಾದ ರಮೇಶ ಪೂಜಾರಿ, ಇಂದಿರಾ ಕಲಬುರಗಿ, ಶಾಲಾ ಉಸ್ತುವಾರಿ ಸಮಿತಿ ಅಧ್ಯಕ್ಷ ದಶರಥ ಬಸವಪಟ್ಟಣ, ಶಾಲಾ ಉಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಜಟ್ಟೆಪ್ಪ ಎಸ್‌. ಶಕಾಪುರ, ಗ್ರಾ.ಪಂ ಸದಸ್ಯ ಸಿದ್ರಾಮ ಹಾವನೂರ, ಶಿಕ್ಷಣ ಪ್ರೇಮಿ ಲಕ್ಷ್ಮೀಪುತ್ರ ಅಕ್ಕಲಕೋಟ ಹಾಗೂ ಗ್ರಾಮಸ್ಥರು ಶಾಲೆಯನ್ನು ಮಾದರಿಯಾಗಿಸುವ ಸಂಕಲ್ಪ ತೊಟ್ಟು ಕಾರ್ಯನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.